AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣ; ಮಹತ್ವದ ಮಾಹಿತಿ ಹಂಚಿಕೊಂಡ ಎಡಿಜಿಪಿ

ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಠಾಣೆಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಪಾಕ್ ಪ್ರಜೆಗಳ ಬಗ್ಗೆ ಕೆಲವೊಂದಿಷ್ಟು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣ; ಮಹತ್ವದ ಮಾಹಿತಿ ಹಂಚಿಕೊಂಡ ಎಡಿಜಿಪಿ
ಎಡಿಜಿಪಿ ಹಿತೇಂದ್ರ
ರಾಮು, ಆನೇಕಲ್​
| Edited By: |

Updated on: Oct 01, 2024 | 6:13 PM

Share

ಬೆಂಗಳೂರು ಗ್ರಾಮಾಂತರ, ಅ.01: ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಠಾಣೆಗೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ(ADGP Hitendra) ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ‘ ಎರಡು ದಿನಗಳ ಹಿಂದೆ ಆನೇಕಲ್‌ನಲ್ಲಿ ಬಂಧಿತರಾದವರು ಪಾಕಿಸ್ತಾನದ ಕರಾಚಿ ನಿವಾಸಿಗಳು. ಅಪ್ನ ಅಂಗಾನ್ ಬಡಾವಣೆಯ ಎರಡು ವಿಲ್ಲಾಗಳಲ್ಲಿ ವಾಸ ಮಾಡುತ್ತಿದ್ದರು. ಇವರು 2014ರಲ್ಲಿ ಭಾರತಕ್ಕೆ ಬಾಂಗ್ಲಾದೇಶದ ಮೂಲಕ ಬಂದಿದ್ದಾರೆ. ಎರಡ್ಮೂರು ವರ್ಷಗಳಿಂದ ಬಿರಿಯಾನಿ ಹೋಟೆಲ್ ಬಿಸಿನೆಸ್ ಮಾಡಿಕೊಂಡಿದ್ದರು.

ಇನ್ನು ಈ ಆರೋಪಿಗಳ ಬಳಿ ಭಾರತೀಯ ಪಾಸ್‌ಪೋರ್ಟ್, ಆಧಾರ್, ಡಿಎಲ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ವೇಳೆ ಕೆಲವೊಂದು ಮಾಹಿತಿಗಳು ಲಭ್ಯ ಆಗಿವೆ. ಹಾಗಾಗಿ ನಾನು ಕೂಡ ಆಗಮಿಸಿ ತನಿಖಾ ತಂಡದ ಜೊತೆ ಚರ್ಚೆ ನಡೆಸಿದ್ದೆನೆ. ಯಾವ ರೀತಿ ತನಿಖೆ ನಡೆಯಬೇಕು ಎಂಬುದರ ಬಗ್ಗೆ ನಿರ್ದೇಶನ ನೀಡಿದ್ದೆನೆ. ಪಾಸ್‌ಪೋರ್ಟ್, ಆಧಾರ್ ಪ್ಯಾನ್ ಕಾರ್ಡ್ ಹೇಗೆ ಬಂತು ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಬಂಧಿತನಾದ ಪಾಕಿಸ್ತಾನ ಪ್ರಜೆ ಬಳಿ ಇದೆ ಭಾರತದ ಪಾಸ್​ಪೋರ್ಟ್​!

ಈ ಆರೋಪಿಗಳ ಮನೆಯಲ್ಲಿ ಸಿಕ್ಕ ಮೊಬೈಲ್, ಲ್ಯಾಪ್‌ಟಾಪ್ ಕೆಲ ದಾಖಲೆಗಳನ್ನು FSL ಗೆ ಕಳುಹಿಸಲಾಗಿದೆ. ಆರೋಪಿಗಳು ನೀಡುತ್ತಿರುವ ಮಾಹಿತಿ ಸತ್ಯ ಎಂದು ನಂಬಲು ಸಾಧ್ಯವಿಲ್ಲ. ಧರ್ಮ ಪ್ರಚಾರದ ಜೊತೆಗೆ ಬೇರೆ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿ ಬಗ್ಗೆ ಮಾಹಿತಿ ಇಲ್ಲ. ಚೆನ್ನೈನಲ್ಲಿ ಆರೋಪಿಗಳ ಸಂಬಂಧಿಗಳು ಅರೆಸ್ಟ್ ಆಗಿರುವುದು ಸತ್ಯ. ದಾವಣಗೆರೆ ಮೂಲದ ಅಲ್ತಾಫ್ ಅರೆಸ್ಟ್ ಆಗಿರುವುದು ನಿಜ. ಆದ್ರೆ, ಇವರುಗಳ ಜೊತೆ ಆತನ ಪಾತ್ರ ಇನ್ನೂ ಕನ್ಫರ್ಮ್ ಇಲ್ಲ. ಸದ್ಯ ಪ್ರಕರಣವನ್ನು IB ,NIA ಮತ್ತು ಆನೇಕಲ್ ಉಪ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್