AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣ; ಮಹತ್ವದ ಮಾಹಿತಿ ಹಂಚಿಕೊಂಡ ಎಡಿಜಿಪಿ

ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಠಾಣೆಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಪಾಕ್ ಪ್ರಜೆಗಳ ಬಗ್ಗೆ ಕೆಲವೊಂದಿಷ್ಟು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣ; ಮಹತ್ವದ ಮಾಹಿತಿ ಹಂಚಿಕೊಂಡ ಎಡಿಜಿಪಿ
ಎಡಿಜಿಪಿ ಹಿತೇಂದ್ರ
ರಾಮು, ಆನೇಕಲ್​
| Edited By: |

Updated on: Oct 01, 2024 | 6:13 PM

Share

ಬೆಂಗಳೂರು ಗ್ರಾಮಾಂತರ, ಅ.01: ಪಾಕ್​​​ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಠಾಣೆಗೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ(ADGP Hitendra) ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ‘ ಎರಡು ದಿನಗಳ ಹಿಂದೆ ಆನೇಕಲ್‌ನಲ್ಲಿ ಬಂಧಿತರಾದವರು ಪಾಕಿಸ್ತಾನದ ಕರಾಚಿ ನಿವಾಸಿಗಳು. ಅಪ್ನ ಅಂಗಾನ್ ಬಡಾವಣೆಯ ಎರಡು ವಿಲ್ಲಾಗಳಲ್ಲಿ ವಾಸ ಮಾಡುತ್ತಿದ್ದರು. ಇವರು 2014ರಲ್ಲಿ ಭಾರತಕ್ಕೆ ಬಾಂಗ್ಲಾದೇಶದ ಮೂಲಕ ಬಂದಿದ್ದಾರೆ. ಎರಡ್ಮೂರು ವರ್ಷಗಳಿಂದ ಬಿರಿಯಾನಿ ಹೋಟೆಲ್ ಬಿಸಿನೆಸ್ ಮಾಡಿಕೊಂಡಿದ್ದರು.

ಇನ್ನು ಈ ಆರೋಪಿಗಳ ಬಳಿ ಭಾರತೀಯ ಪಾಸ್‌ಪೋರ್ಟ್, ಆಧಾರ್, ಡಿಎಲ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ವೇಳೆ ಕೆಲವೊಂದು ಮಾಹಿತಿಗಳು ಲಭ್ಯ ಆಗಿವೆ. ಹಾಗಾಗಿ ನಾನು ಕೂಡ ಆಗಮಿಸಿ ತನಿಖಾ ತಂಡದ ಜೊತೆ ಚರ್ಚೆ ನಡೆಸಿದ್ದೆನೆ. ಯಾವ ರೀತಿ ತನಿಖೆ ನಡೆಯಬೇಕು ಎಂಬುದರ ಬಗ್ಗೆ ನಿರ್ದೇಶನ ನೀಡಿದ್ದೆನೆ. ಪಾಸ್‌ಪೋರ್ಟ್, ಆಧಾರ್ ಪ್ಯಾನ್ ಕಾರ್ಡ್ ಹೇಗೆ ಬಂತು ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಬಂಧಿತನಾದ ಪಾಕಿಸ್ತಾನ ಪ್ರಜೆ ಬಳಿ ಇದೆ ಭಾರತದ ಪಾಸ್​ಪೋರ್ಟ್​!

ಈ ಆರೋಪಿಗಳ ಮನೆಯಲ್ಲಿ ಸಿಕ್ಕ ಮೊಬೈಲ್, ಲ್ಯಾಪ್‌ಟಾಪ್ ಕೆಲ ದಾಖಲೆಗಳನ್ನು FSL ಗೆ ಕಳುಹಿಸಲಾಗಿದೆ. ಆರೋಪಿಗಳು ನೀಡುತ್ತಿರುವ ಮಾಹಿತಿ ಸತ್ಯ ಎಂದು ನಂಬಲು ಸಾಧ್ಯವಿಲ್ಲ. ಧರ್ಮ ಪ್ರಚಾರದ ಜೊತೆಗೆ ಬೇರೆ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿ ಬಗ್ಗೆ ಮಾಹಿತಿ ಇಲ್ಲ. ಚೆನ್ನೈನಲ್ಲಿ ಆರೋಪಿಗಳ ಸಂಬಂಧಿಗಳು ಅರೆಸ್ಟ್ ಆಗಿರುವುದು ಸತ್ಯ. ದಾವಣಗೆರೆ ಮೂಲದ ಅಲ್ತಾಫ್ ಅರೆಸ್ಟ್ ಆಗಿರುವುದು ನಿಜ. ಆದ್ರೆ, ಇವರುಗಳ ಜೊತೆ ಆತನ ಪಾತ್ರ ಇನ್ನೂ ಕನ್ಫರ್ಮ್ ಇಲ್ಲ. ಸದ್ಯ ಪ್ರಕರಣವನ್ನು IB ,NIA ಮತ್ತು ಆನೇಕಲ್ ಉಪ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ