AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರ: ಆಟೋಗೆ ದಾರಿ ಬಿಡಲಿಲ್ಲ ಎಂದು ಕೆಎಸ್​ಆರ್​ಟಿಸಿ ಬಸ್​​​ ಚಾಲಕನ ಮೇಲೆ ಹಲ್ಲೆ

ಆಟೋಗೆ ದಾರಿ ಬಿಡಲಿಲ್ಲವೆಂದು ಎಂದು ಕೆಎಸ್​ಆರ್​ಟಿಸಿ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.

ನವೀನ್ ಕುಮಾರ್ ಟಿ
| Edited By: |

Updated on:Aug 02, 2023 | 11:42 AM

Share

ದೊಡ್ಡಬಳ್ಳಾಪುರ: ಆಟೋಗೆ (Auto) ದಾರಿ ಬಿಡಲಿಲ್ಲವೆಂದು ಎಂದು ಕೆಎಸ್​ಆರ್​ಟಿಸಿ (KSRTC) ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ. ಗೋವಿಂದರಾಜು, ಹನುಮಂತರಾಜು, ನರಸಿಂಹರಾಜು ಹಲ್ಲೆ ಮಾಡಿದ ಆರೋಪಿಗಳು. ಮಂಗಳವಾರ ಮಧ್ಯಹ್ನ ಕೆಎಸ್​ಆರ್​ಟಿಸಿ ಬಸ್​ ಮಾಡೇಶ್ವರದಿಂದ ದೊಡ್ಡಬಳ್ಳಾಪುರಕ್ಕೆ ಗ್ರಾಮ ಮಾರ್ಗವಾಗಿ ಹೊರಟಿತ್ತು.

ಈ ವೇಳೆ ತಮಗೆ ದಾರಿ ಬಿಡಲಿಲ್ಲವೆಂದು, ಬಸ್​​ ಅನ್ನು ಅಡ್ಡಗಟ್ಟಿ ಆಟೋದಲ್ಲಿದ್ದ ನಾಲ್ವರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಲ್ಲೆ ತಡೆಯಲು ಬಂದ ನಿರ್ವಾಹಕ, ಪ್ರಯಾಣಿಕರಿಗೂ ಆರೋಪಿಗಳು ಹೊಡೆದಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಚಾಲಕ ಪ್ರಸನ್ನ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ದೊಡ್ಡಬೆಳವಂಗಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಯುವಕನನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ

ಮದ್ಯ ಕೊಡಲ್ಲ ಎಂದಿದಕ್ಕೆ ಗ್ಯಾಂಗ್ ನಿಂದ‌ ಅಟ್ಯಾಕ್..!

ರಾಮನಗರ: ಉದ್ರಿಯಾಗಿ ಮದ್ಯ ಕೊಡಲ್ಲ ಎಂದಿದ್ದಕ್ಕೆ ಗ್ಯಾಂಗ್​ವೊಂದು ಬಾರ್ ಸಿಬ್ಬಂದಿ ಮೇಲೆ‌ ದೊಣ್ಣೆ ಬಾಟಲಿಗಳಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಹೊಂಗನೂರಿನ ರಾಘವೇಂದ್ರ ಬಾರ್​ನಲ್ಲಿ ನಡೆದಿದೆ. ಗಿರಿ, ಕೀರ್ತಿ ಅಲಿಯಾಸ್ ಮಾಲುಂಡಿ, ಮನು, ಕೃಷ್ಣ , ಅಭಿ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಾಜಣ್ಣ ಮತ್ತು ದೀಪು ಹಲ್ಲೆಗೊಳಗಾದ ಬಾರ್ ಕ್ಯಾಶಿಯರ್​ಗಳು.

ಮದ್ಯವನ್ನು ಉದ್ರಿಯಾಗಿ ಕೊಡಲ್ಲ ಎಂದಿದ್ದಕ್ಕೆ ಬಾಟಲಿ, ಕಲ್ಲು, ದೊಣ್ಣೆಗಳಿಂದ ಐವರು ಹಲ್ಲೆ ಮಾಡಿದ್ದು, ಸಿಬ್ಬಂದಿಯ ತಲೆ, ಭುಜಕ್ಕೆ ಗಂಭೀರ ಗಾಯಗಳಾಗಿವೆ.  ಬಚಾವ್ ಆಗಲು ಬಾರ್ ಸಿಬ್ಬಂದಿಯೂ ಪ್ರತಿದಾಳಿ ಮಾಡಿದ್ದಾರೆ. ಸದ್ಯ ರಾಜಣ್ಣ ಮತ್ತು ದೀಪು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ‌ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 am, Wed, 2 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!