ದೊಡ್ಡಬಳ್ಳಾಪುರ: ಆಟೋಗೆ ದಾರಿ ಬಿಡಲಿಲ್ಲ ಎಂದು ಕೆಎಸ್​ಆರ್​ಟಿಸಿ ಬಸ್​​​ ಚಾಲಕನ ಮೇಲೆ ಹಲ್ಲೆ

ಆಟೋಗೆ ದಾರಿ ಬಿಡಲಿಲ್ಲವೆಂದು ಎಂದು ಕೆಎಸ್​ಆರ್​ಟಿಸಿ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.

ದೊಡ್ಡಬಳ್ಳಾಪುರ: ಆಟೋಗೆ (Auto) ದಾರಿ ಬಿಡಲಿಲ್ಲವೆಂದು ಎಂದು ಕೆಎಸ್​ಆರ್​ಟಿಸಿ (KSRTC) ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ. ಗೋವಿಂದರಾಜು, ಹನುಮಂತರಾಜು, ನರಸಿಂಹರಾಜು ಹಲ್ಲೆ ಮಾಡಿದ ಆರೋಪಿಗಳು. ಮಂಗಳವಾರ ಮಧ್ಯಹ್ನ ಕೆಎಸ್​ಆರ್​ಟಿಸಿ ಬಸ್​ ಮಾಡೇಶ್ವರದಿಂದ ದೊಡ್ಡಬಳ್ಳಾಪುರಕ್ಕೆ ಗ್ರಾಮ ಮಾರ್ಗವಾಗಿ ಹೊರಟಿತ್ತು.

ಈ ವೇಳೆ ತಮಗೆ ದಾರಿ ಬಿಡಲಿಲ್ಲವೆಂದು, ಬಸ್​​ ಅನ್ನು ಅಡ್ಡಗಟ್ಟಿ ಆಟೋದಲ್ಲಿದ್ದ ನಾಲ್ವರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಲ್ಲೆ ತಡೆಯಲು ಬಂದ ನಿರ್ವಾಹಕ, ಪ್ರಯಾಣಿಕರಿಗೂ ಆರೋಪಿಗಳು ಹೊಡೆದಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಚಾಲಕ ಪ್ರಸನ್ನ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ದೊಡ್ಡಬೆಳವಂಗಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಯುವಕನನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ

ಮದ್ಯ ಕೊಡಲ್ಲ ಎಂದಿದಕ್ಕೆ ಗ್ಯಾಂಗ್ ನಿಂದ‌ ಅಟ್ಯಾಕ್..!

ರಾಮನಗರ: ಉದ್ರಿಯಾಗಿ ಮದ್ಯ ಕೊಡಲ್ಲ ಎಂದಿದ್ದಕ್ಕೆ ಗ್ಯಾಂಗ್​ವೊಂದು ಬಾರ್ ಸಿಬ್ಬಂದಿ ಮೇಲೆ‌ ದೊಣ್ಣೆ ಬಾಟಲಿಗಳಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಹೊಂಗನೂರಿನ ರಾಘವೇಂದ್ರ ಬಾರ್​ನಲ್ಲಿ ನಡೆದಿದೆ. ಗಿರಿ, ಕೀರ್ತಿ ಅಲಿಯಾಸ್ ಮಾಲುಂಡಿ, ಮನು, ಕೃಷ್ಣ , ಅಭಿ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಾಜಣ್ಣ ಮತ್ತು ದೀಪು ಹಲ್ಲೆಗೊಳಗಾದ ಬಾರ್ ಕ್ಯಾಶಿಯರ್​ಗಳು.

ಮದ್ಯವನ್ನು ಉದ್ರಿಯಾಗಿ ಕೊಡಲ್ಲ ಎಂದಿದ್ದಕ್ಕೆ ಬಾಟಲಿ, ಕಲ್ಲು, ದೊಣ್ಣೆಗಳಿಂದ ಐವರು ಹಲ್ಲೆ ಮಾಡಿದ್ದು, ಸಿಬ್ಬಂದಿಯ ತಲೆ, ಭುಜಕ್ಕೆ ಗಂಭೀರ ಗಾಯಗಳಾಗಿವೆ.  ಬಚಾವ್ ಆಗಲು ಬಾರ್ ಸಿಬ್ಬಂದಿಯೂ ಪ್ರತಿದಾಳಿ ಮಾಡಿದ್ದಾರೆ. ಸದ್ಯ ರಾಜಣ್ಣ ಮತ್ತು ದೀಪು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ‌ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 am, Wed, 2 August 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us