AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಶೋಕಿ ಜೀವನಕ್ಕಾಗಿ ಬೈಕ್ ಕದಿಯುತ್ತಿದ್ದ ಕಳ್ಳ ಸ್ನೇಹಿತರು ಅರೆಸ್ಟ್

ಬೈಕ್​ಗಳನ್ನು ಕದ್ದು ಹಳ್ಳಿಗಳಲ್ಲಿ ಸಿಕ್ಕಷ್ಟು ರೇಟ್​ಗೆ ಮಾರಾಟ ಮಾಡಿ ಬಂದ ಹಣದಲ್ಲಿ ಶೋಕಿ ಮಾಡ್ತಿದ್ದ ಇಬ್ಬರು ಖದೀಮರನ್ನು ಬಾಗಲಗುಂಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನೆಲಮಂಗಲ: ಶೋಕಿ ಜೀವನಕ್ಕಾಗಿ ಬೈಕ್ ಕದಿಯುತ್ತಿದ್ದ ಕಳ್ಳ ಸ್ನೇಹಿತರು ಅರೆಸ್ಟ್
ಬಾಗಲಗುಂಟೆ ಪೊಲೀಸರು
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on: Aug 05, 2023 | 7:54 AM

ನೆಲಮಂಗಲ, ಆ.05: ಶೋಕಿ ಲೈಫ್‌ಸ್ಟೈಲ್‌ಗಾಗಿ ಹಣ ಮಾಡೋಕೆ ಬೈಕ್ ಕಳ್ಳತನಕ್ಕೆ(Bike Theft) ಇಳಿದು ಹಳ್ಳಿಗಾಡಿಗಳಿಗೆ ಮಾರಾಟ ಮಾಡುತ್ತಿದ್ದ ಕರ್ತನಾಕ್ ಕಳ್ಳರನ್ನ ಬಾಗಲಗುಂಟೆ ಪೊಲೀಸರು(Bagalgunte police) ಬಂಧಿಸಿದ್ದಾರೆ. ಬೆಂಗಳೂರಿನ ಲಗ್ಗೆರೆ ಮೂಲದ 29 ವರ್ಷಸ ಜೀವನ್, 30 ವರ್ಷದ ಲಕ್ಷಣ್ ಬಂಧಿತ ಆರೋಪಿಗಳು. ಇವರು ಬೈಕ್​ಗಳನ್ನು ಕದ್ದು ಹಳ್ಳಿಗಳಲ್ಲಿ ಸಿಕ್ಕಷ್ಟು ರೇಟ್​ಗೆ ಮಾರಾಟ ಮಾಡಿ ಬಂದ ಹಣದಲ್ಲಿ ಶೋಕಿ ಮಾಡ್ತಿದ್ದರು. ಹೀಗೆ ಕದ್ದು ಪರಾರಿಯಾಗುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಾಲ್ಯ ಸ್ನೇಹಿತರಾದ ಇವರಿಬ್ಬರು ಬೈಕ್ ಎಗರಿಸುವಲ್ಲಿ ನಿಸ್ಸೀಮರು, ಯಾವುದೇ ಬೈಕ್ ಆಗ್ಲಿ ಕ್ಷಣಾರ್ಧದಲ್ಲಿ ಎಗರಿಸಿ ಒಂದೆ ದಿನದಲ್ಲಿ ರಾಜ್ಯದ ವಿವಿಧ ಹಳ್ಳಿಗಳಿಗೆ ಸಾಗಿಸುವಷ್ಟು ನಿಪುಣತೆ ಹೊಂದಿದ್ದರು. ತಮ್ಮ ಶೋಕಿ ಬಿಂದಾಸ್ ಲೈಫ್ ಸ್ಟೈಲ್‌ಗೆ ಆಸೆ ಬಿದ್ದು ಕಳ್ಳತನ ಮಾಡುತ್ತಿದ್ದ ಇವರಿಬ್ಬರನ್ನ ಬಾಗಲಗುಂಟೆ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಿದ್ದಾರೆ. ಕೇವಲ ಬೈಕ್‌ ಮಾತ್ರ ಅಲ್ಲ ಟಾರ್ಗೆಟ್ ಇಟ್ಟು ಹೊಡುದ್ರೆ ಬೈಕ್ ಸಿಕ್ಕಿಲ್ಲ ಅಂದ್ರೆ ಕಾರ್‌ ಸ್ಟೀರಿಯೋ ಸಿಸ್ಟಂ ಎಗರಿಸಿ ಎಸ್ಕೇಪ್ ಆಗ್ತಿದ್ದವರು ಸದ್ಯ ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ: ಪ್ರಿಯತಮನಿಂದ ಯುವತಿ ಮೇಲೆ ರಾಡ್​ನಿಂದ ಹಲ್ಲೆ; ಆರೋಪಿ ಬಂಧನ, ಕಾರಣ ಇಲ್ಲಿದೆ ನೋಡಿ

ಬ್ಯಾಡರಹಳ್ಳಿ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಯಶವಂತಪುರ ಸೇರಿದಂತೆ ವಿವಿಧ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಈ ಖದೀಮರು ಕದ್ದ ಬೈಕ್‌ಗೆ ನಂಬರ್ ಪ್ಲೇಟ್ ಬದಲಾಯಿಸಿ ಬೇರೆ ಜಿಲ್ಲೆಗಳ ಹಳ್ಳಿ ಪ್ರದೇಶಗಳಿಗೆ ಮನಸಿಗೆ ಬಂದ ಬೆಲೆಗೆ ಮಾರಾಟ ಮಾಡ್ತಾ ಇದ್ರು. ಫೈನಾನ್ಸ್‌ನಲ್ಲಿ ಜಪ್ತಿ ಆಗಿರುವ ಬೈಕ್, ಡಾಕ್ಯುಮೆಂಟ್ ಲೇಟ್ ಆಗುತ್ತೆ ಎಂದು ಸಿಕ್ಕಷ್ಟು ದುಡ್ಡಿಗೆ ಮಾರಾಟ ಮಾಡಿ ಬಂದ ಹಣವನ್ನ ಮಜಾ ಮಾಡ್ತಿದ್ದರು. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಎಸ್ಕೇಪ್ ಆಗುತ್ತಿದ್ದ ವೇಳೆ, ನೈಟ್ ರೌಂಡ್ಸ್‌ನಲ್ಲಿದ್ದ ಇನ್ಸ್ ಪೆಕ್ಟರ್ ಸಂದೀಪ್ ಅವರ ಕೌರಿಗೆ ಸಿಕ್ಕಿಬಿದ್ದಿದ್ದಾರೆ.

ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು ಬಂಧಿತರಿಂದ ಹತ್ತು ಬೈಕ್, ಟೈಯರ್, ಫಾರ್ಚ್ಯುನರ್ ಕಾರಿನ ಸ್ಟೀರಿಯೋ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ‌.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ