AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನಾಗಸಂದ್ರ ಬಳಿ ನಡೆದ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್​​; ಕೊಲೆ ಹಿಂದೆ ಇದೆ ಪ್ರೇಮ ಕಹಾನಿ

ಪೀಣ್ಯ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಲೋಕೇಶ್​ ಎಂಬುವರನ್ನು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಪ್ರತಾಪ್ ಮತ್ತು ಆತನ ಸ್ನೇಹಿತ ಮಂಜುನಾಥ್ ಅಲಿಯಾಸ್​ ಮಂಜ (22) ಬೈಕಿನಲ್ಲಿ ಕಿಡ್ನಾಪ್ ಮಾಡಿದ್ದರು. ಮುಂದೆ ಏನಾಯ್ತು ಇಲ್ಲಿದೆ ಓದಿ

ಬೆಂಗಳೂರಿನ ನಾಗಸಂದ್ರ ಬಳಿ ನಡೆದ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್​​; ಕೊಲೆ ಹಿಂದೆ ಇದೆ ಪ್ರೇಮ ಕಹಾನಿ
ಕೊಲೆಯಾದ ಯುವಕ ಲೋಕೇಶ್​
ಬಿ ಮೂರ್ತಿ, ನೆಲಮಂಗಲ
| Edited By: |

Updated on:Oct 17, 2023 | 12:02 PM

Share

ನೆಲಮಂಗಲ ಅ.17: ನಗರದ ನಾಗಸಂದ್ರ ಮೆಟ್ರೋ (Metro) ನಿಲ್ದಾಣದ ಬಳಿಯ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ಟೋಬರ್​​ 5 ರಂದು ಕಿಡ್ನಾಪ್ ಆದ ಯುವಕ ಲೋಕೇಶ್​​ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಆರೋಪಿಗಳು ಯುವಕನನ್ನು ಕಿಡ್ನಾಪ್​ ಮಾಡಲು ಕಾರಣವೇನು? ಕಿಡ್ನಾಪ್​ (Kidnap) ಹಿಂದಿನ ಕಾಣದ ಕೈ ಯಾವುದು ಎಂದು ಮಾದನಾಯಕನಹಳ್ಳಿ ಪೊಲೀಸರು ಪತ್ತೆಹಚ್ಚಿದ್ದಾರೆ. ಡಿಪ್ಲೋಮಾದಲ್ಲಿ ಇಂಜಿನಿಯರಿಂಗ್ ಮಾಡಿದ್ದ ದಾವಣಗೆರೆ ಮೂಲದ ಯುವಕ ಲೋಕೇಶ್ ಪೀಣ್ಯ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಂಪನಿಯಲ್ಲಿ ಚಿಕ್ಕಬಳ್ಳಾಪುರ ಮೂಲದ ಪ್ರತಾಪ್ (23) ಮತ್ತು 22 ವರ್ಷದ ಯುವತಿ ಕೆಲಸ ಮಾಡುತ್ತಿದ್ದರು.

ಪ್ರತಾಪ್ ಮತ್ತು ಯುವತಿ ಬಾಲ್ಯ ಸ್ನೇಹಿತರು. ಪ್ರತಾಪ್​ ಯುವತಿಯನ್ನು ಬಾಲ್ಯದಿಂದ ಪ್ರೀತಿಸುತ್ತಿದ್ದನು. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಯುವತಿಗೆ ಕೆಲಸ ಕೊಡಿಸಿದ್ದನು. ಕಂಪನಿಯಲ್ಲಿ ಲೋಕೇಶ್​​ಗೆ ಈ ಯುವತಿಯ ಪರಿಚಯವಾಗುತ್ತದೆ. ಪರಿಚಯ ಸ್ನೇಹವಾಗಿ, ಸ್ನೇಹ ಪ್ರೇಮಕ್ಕೆ ತಿರುಗಿದೆ. ಇವರಿಬ್ಬರ ಪ್ರೀತಿ ವಿಚಾರ ತಿಳಿದ ಪ್ರತಾಪ್​, ಲೋಕೇಶ್​ ಮೇಲೆ ನಿಗಿ ನಿಗಿ ಕೆಂಡಕಾರಲು ಆರಂಭಿಸಿದ್ದನು. ಇದೇ ವಿಚಾರವಾಗಿ ಪ್ರತಾಪ್​ ಮತ್ತು ಲೋಕೇಶ್​ ನಡುವೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿತ್ತು.

ಅಕ್ಟೋಬರ್ 5 ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಲೋಕೇಶ್​ನನ್ನು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಪ್ರತಾಪ್ ಮತ್ತು ಆತನ ಸ್ನೇಹಿತ ಮಂಜುನಾಥ್ ಅಲಿಯಾಸ್​ ಮಂಜ (22) ಬೈಕಿನಲ್ಲಿ ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್​ ದೃಶ್ಯ ಅಲ್ಲೆ ಸನಿಹದಲ್ಲಿದ್ದ ಪ್ಯಾಕ್ಟರಿವೊಂದರ ಸಿಸಿಕ್ಯಾಮಾರದಲ್ಲಿ ಸರೆಯಾಗಿದೆ.

ಅಳಿಯ ಮನೆಗೆ ಬಾರದಿದ್ದರಿಂದ ಲೋಕೇಶ್ ಮಾವ ಹಾಲೇಶ್​ ಬಾಗಲಗುಂಟೆ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತಾರೆ. ಕಿಡ್ನಾಪ್​ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಕಿಡ್ನಾಪ್​​ ಪ್ರಕರಣ ನಡೆದು ಎರಡು ದಿನಗಳ ನಂತರ ಅಂದರೆ ಅಕ್ಟೋಬರ್ 8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕುಕ್ಕನಹಳ್ಳಿ ಗ್ರಾಮದ ಯಲ್ಲಪ್ಪ ಎಂಬುವರ ಜಮೀನಿನಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಶವದ ಮೇಲೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ರೀತಿ ಗಾಯದ ಗುರುತು ಇತ್ತು. ಇದನ್ನು ಕಂಡ ಮಾದನಾಯಕನಹಳ್ಳಿ ಪೊಲೀಸರು 302 ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿಯುತ್ತಾರೆ.

ಇದನ್ನೂ ಓದಿ: ಮಳೆಯಲ್ಲೇ ಬಿತ್ತು ರೌಡಿಶೀಟರ್ ಹೆಣ! ಅಕ್ರಮ ಸಂಬಂಧಕ್ಕಾಗಿಯೇ ನಡೀತಾ ಹತ್ಯೆ?

ತನಿಖೆ ವೇಳೆ ಮಾದನಾಯಕನಹಳ್ಳಿ ಪೊಲೀಸರಿಗೆ ಬೆಂಗಳೂರಿನಲ್ಲಿ ಲೋಕೇಶ್ ಎಂಬ ವ್ಯಕ್ತಿ​ ಅಪರಣವಾಗಿರುವ ಬಗ್ಗೆ ತಿಳಿಯುತ್ತದೆ. ಆಗ ಪೊಲೀಸರು ಲೋಕೇಶ್​ ಪೋಟೋ ತರಿಸಿಕೊಳ್ಳುತ್ತಾರೆ. ನಂತರ ಲೋಕೇಶ್​ ಮಾವ ಆನೇಶ್​ನನ್ನು ಕರೆಸಿಕೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿದ್ದ ಶವ ಗುರುತಿಗೆ ಹೋಗುತ್ತಾರೆ. ಆಗ ಹಾಲೇಶ್ ಇದು ಲೋಕೇಶ್​​ನದ್ದೇ ಶವ ಎಂದು ಗುರುತು ಹಿಡಿಯುತ್ತಾರೆ.

ಈ ವಿಚಾರ ತಿಳಿದ ತಕ್ಷಣ ಆಕ್ಟಿವ್​ ಆದ ಮಾದನಾಯಕನಹಳ್ಳಿ ಪೊಲೀಸರು ಲೋಕೇಶ್​ ಕೆಲಸ ಮಾಡುತ್ತಿದ್ದ ಕಂಪನಿ ಸಿಸಿಟಿವಿ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲಿಸಿದಾಗ ಆರೋಪಿಗಳ ಸುಳಿವು ಸಿಗುತ್ತದೆ. ಲೋಕೇಶ್​ ಬಗ್ಗೆ ಆತನ ಸ್ನೇಹಿತರ ಬಳಿ ಪೊಲೀಸರು ವಿಚಾರಿಸಿದಾಗ, ಆರೋಪಿ ಪ್ರತಾಪ್​ ಮತ್ತು ಲೋಕೇಶ್​ ನಡುವೆ ನಡೆದ ಗಲಾಟೆ ಬಗ್ಗೆ ಹೇಳುತ್ತಾರೆ.

ಮಾದನಾಯಕನಹಳ್ಳಿ ಪೊಲೀಸರು ಆರೋಪಿಗಳ ಸ್ಥಳ ಪತ್ತೆಹಚ್ಚಿದಾಗ ಶಿಡ್ಲಘಟ್ಟದಲ್ಲಿ ತಲೆಮರಸಿಕೊಂಡಿದ್ದಾರೆ ಎಂಬುವುದು ತಿಳಿಯುತ್ತದೆ. ಕೂಡಲೆ ಸ್ಥಳಕ್ಕೆ ಹೋದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ಕೊಲೆ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಇನ್ನೂ ಕಿಡ್ನಾಪ್ ಕೊಲೆ ಪ್ರಕರಣ ಭೇದಿಸಿದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮುರಳೀಧರ್, ಸಬ್ ಇನ್ಸ್ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:09 am, Tue, 17 October 23

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ