ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಚರಣೆ; 7 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ರೂ. ಮೌಲ್ಯದ ಮದ್ಯವನ್ನ ಜಪ್ತಿ ಮಾಡಿದ್ದಾರೆ. ಇದರ ಜೊತೆಗೆ 2 ಲಾರಿ, 2 ಕಾರು, ಜೀಪ್ ಮತ್ತು ಬೈಕ್ಸ್ ಸೇರಿದಂತೆ ಒಟ್ಟು 9 ವಾಹನ‌ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಚರಣೆ; 7 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಚರಣೆ; 7 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ
Edited By:

Updated on: Mar 22, 2024 | 4:02 PM

ಬೆಂಗಳೂರು ಗ್ರಾಮಾಂತರ, ಮಾ.22: ಲೋಕಸಭಾ ಚುನಾವಣೆ(Lok sabha Election) ನೀತಿಸಂಹಿತೆ ಜಾರಿ ಆಗುತ್ತಿದ್ದಂತೆ ಅಲರ್ಟ್​ ಆದ ಚುನಾವಣಾಧಿಕಾರಿಗಳು ಚೆಕ್​ಪೋಸ್ಟ್​ ನಿರ್ಮಿಸಿ ಯಾವುದೇ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ. ಅದರಂತೆ ಇಂದು(ಮಾ.22) ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ರೂ. ಮೌಲ್ಯದ ಮದ್ಯವನ್ನ ಜಪ್ತಿ ಮಾಡಿದ್ದಾರೆ.

ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಡಾ.ಶಿವಶಂಕರ್ ನೇತೃತ್ವದ ಅಬಕಾರಿ ಪೊಲೀಸರ ತಂಡವು ದಾಳಿ ನಡೆಸಿ, ನೆಲಮಂಗಲದ ಡಿಸ್ಟಿಲರಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಂಗ್ರಹಿಸಿಟ್ಟಿದ್ದ ಬರೊಬ್ಬರಿ 1.48.985 ಲೀಟರ್ ಮದ್ಯವನ್ನ ಸೀಜ್ ಮಾಡಿದೆ. ಅಬಕಾರಿ ಇಲಾಖೆ ಸೆಕ್ಷನ್​ಗಳ ಅಡಿ ಸೂಕ್ತ ದಾಖಲೆ ಇಲ್ಲದ ಕಾರಣ ಜಿಲ್ಲೆಯಲ್ಲಿ 45 ಕೇಸ್ ದಾಖಲು ಮಾಡಲಾಗಿದ್ದು,
ಲಿಕ್ಕರ್ ಸೀಜ್ ಹಿನ್ನೆಲೆ 2 ಲಾರಿ, 2 ಕಾರು, ಜೀಪ್ ಮತ್ತು ಬೈಕ್ಸ್ ಸೇರಿದಂತೆ ಒಟ್ಟು 9 ವಾಹನ‌ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಲಕ್ಷಾಂತರ ಮೌಲ್ಯದ 10 ಕೆ.ಜಿ ಗಾಂಜಾ ಕೂಡ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.50 ಲಕ್ಷ ನಗದು ಜಪ್ತಿ

ಬೆಳಗಾವಿ: ಏಪೋರ್ಟ್​ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1ಲಕ್ಷ 50ಸಾವಿರ ನಗದನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಳಗಾವಿಯಿಂದ ದೆಹಲಿಗೆ ಕೊಂಡೊಯ್ಯುತ್ತಿದ್ದಾಗ ತಪಾಸಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಮೂಲದ ಜಸ್ವೀರ್ ಸಿಂಗ್ ಎಂಬಾತ, 2 ಲಕ್ಷ ಇಟ್ಟುಕೊಂಡು ದೆಹಲಿಗೆ ಹೊರಟಿದ್ದ. ಇನ್ನುವಿಮಾನದಲ್ಲಿ 50 ಸಾವಿರ ಕೊಂಡೊಯ್ಯಲು ಮಾತ್ರ ಅವಕಾಶವಿದ್ದು, ಉಳಿದ 1.50 ಲಕ್ಷ ಹಣವನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us