AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ: ಮೂವರ ಬಂಧನ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.12 ಕೋಟಿ ರೂ. ವಿದೇಶಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಶ್ರೀಲಂಕಾಗೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೂವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ: ಮೂವರ ಬಂಧನ
ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ: ಮೂವರ ಬಂಧನ
ನವೀನ್ ಕುಮಾರ್ ಟಿ
| Edited By: |

Updated on: Feb 19, 2025 | 9:43 PM

Share

ದೇವನಹಳ್ಳಿ, ಫೆಬ್ರವರಿ 19: ಅಕ್ರಮವಾಗಿ ಶ್ರೀಲಂಕಾಗೆ ಸಾಗಿಸುತ್ತಿದ್ದ 2. 12 ಕೋಟಿ ರೂ ವಿದೇಶಿ ಹಣವನ್ನು ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ (Kempegowda International Airport) ಅಧಿಕಾರಿಗಳು ಜಪ್ತಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ ನಡೆದಿದೆ. ಸದ್ಯ ಮೂವರು ಆರೋಪಿಗಳ‌ನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾ ಮೂಲದ ವಿಮಲ್ ರಾಜ್ ತುರೈ ಸಿಂಗಂ, ತಿಲೆಪನ್ ಜಯಂತಿ ಕುಮಾರ್, ಭಾರತದ ವೀರ ಕುಮಾರ್ ಬಂಧಿತರು. ಬ್ಯಾಗ್​ನಲ್ಲಿಟ್ಟು ಹಣ ಸಾಗಿಸುವಾಗಿ ಆರೋಪಿಗಳು ಸಿಕ್ಕಿಬಿದಿದ್ದಾರೆ.

ಪ್ರಯಾಣಿಕರ ಲಗೇಜ್ ಬ್ಯಾಗ್​ನಲ್ಲಿ ಹಣವಿಟ್ಟುಕೊಂಡು ಮೂವರು ಆರೋಪಿಗಳು ಹೋಗುತ್ತಿದ್ದರು. ಕೆಐಎಬಿಯಲ್ಲಿ ಇಮಿಗ್ರೇಷನ್ ಚೆಕ್ಕಿಂಗ್ ವೇಳೆ ಕಂತೆ ಕಂತೆ ಹಣ ಪತ್ತೆ ಆಗಿದೆ. ಹಣ ಕಂಡ ಏರ್ಪೋಟ್ ಭದ್ರತಾ ಪಡೆ ಐಟಿ ಮತ್ತು ಇಡಿ ಅಧಿಕಾರಿಗಳಿಗೆ ಹಣ ಸಮೇತ ಆರೋಪಿಗಳನ್ನ ಒಪ್ಪಿಸಿದ್ದಾರೆ. ಇದೀಗ ಇಡಿ ಅಧಿಕಾರಿಗಳಿಂದ ಮೂವರನ್ನು ಬಂಧಿಸಲಾಗಿದೆ.

ತಹಶಿಲ್ದಾರ್ ಸಹಿ‌ ನಕಲು ಮಾಡಿ 63 ಲಕ್ಷ ರೂ ಹಣ ಗುಳುಂ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸಪೇಕ್ಟರ್, ತಹಶೀಲ್ದಾರ್ ಸಹಿ ಹಾಗೂ ಸೀಲ್ ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂ ನುಂಗಿ ನೀರು ಕುಡಿದು ಇದೀಗ ಅರೆಸ್ಟ್ ಆಗಿರುವಂತಹ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಆರ್​ಐ ಆಗಿ ಕೆಲಸ ಮಾಡುತ್ತಿದ್ದ ಸಾಸಲು‌ ಹೋಬಳಿಗೆ ರೆವಿನ್ಯೂ ಇನ್ಸಪೇಕ್ಟರ್ ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್ ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ‌ ಇಲಾಖೆಯಲ್ಲಿನ ಸುಮಾರು 60 ಲಕ್ಷ ರೂ. ಹಣವನ್ನ ನುಂಗಿ ನೀರು ಕುಡಿದಿದ್ದಾರೆ.

ಇದನ್ನೂ ಓದಿ: ವಿಜಯಪುರ ವೈದ್ಯಕೀಯ​ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ‍್ಯಾಗಿಂಗ್: ಪ್ರಧಾನಿಗೆ ದೂರು, ಐವರ ಬಂಧನ

ಹೀಗಾಗೆ‌ ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ಗೆ ಮುಜರಾಯಿ ಇಲಾಖೆಯ ದೇವಾಲಯದಿಂದ ಸರ್ಕಾರದಿಂದ ಹಣ ಸಂದಾಯವಾಗಿಲ್ಲ ಎಂಬ ದೂರು ಬಂದಿದ್ದು, ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ‌ ಖಾತೆಯಲ್ಲಿನ ಹಣ‌ ಮಾಯವಾದ ಬಗ್ಗೆ ದೊಡ್ಡಬಳ್ಳಾಪುರ ತಹಶೀಲ್ದಾರ್ ನಗರ ಪೊಲೀಸ್ ಠಾಣೆಯಲ್ಲಿ ದೂರ ನೀಡಿದ್ದು ಪ್ರಕರಣ ದಾಖಲಿಸಿಕೊಂಡು‌ ತನಿಖೆ ನಡೆಸಿದ ಪೊಲೀಸರು ಆರೋಪಿ ಆರ್ಐ ಹೇಮಂತ್​ನನ್ನ ಬಂಧಿಸಿ ಪ್ರಕರಣ ಬೇಧಿಸಿದ್ದು ಇದೀಗ ಸರ್ಕಾರದ ಹಣ ಗುಳುಂ ಮಾಡಿದ್ದ ರೆವಿನ್ಯೂ ಇನ್ಸಪೇಕ್ಟರ್ ನನ್ನ ಅಮಾನತ್ತು ಮಾಡಿ‌ ತಹಶಿಲ್ದಾರ್ ಆದೇಶಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More