ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು: ಕೇಸರಿ ಬಾವುಟ ಹಿಡಿದು ಪ್ರತಿಭಟನೆಗಳಿದ ಗ್ರಾಮಸ್ಥರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹಾಕಿದ್ದ ಬ್ಯಾನರ್​ನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಹೀಗಾಗಿ ಕೇಸರಿ ಬಾವುಟಗಳನ್ನ ಹಿಡಿದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಸೂಲಿಬೆಲೆ ಠಾಣೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. 

ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು: ಕೇಸರಿ ಬಾವುಟ ಹಿಡಿದು ಪ್ರತಿಭಟನೆಗಳಿದ ಗ್ರಾಮಸ್ಥರು
ಹರಿದ ರಾಮನ ಬ್ಯಾನರ್‌
Edited By:

Updated on: Jan 22, 2024 | 9:47 PM

ದೇವನಹಳ್ಳಿ, ಜನವರಿ 22: ರಾಮನೂರು ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಈ ದಿನವನ್ನು ರಾಜ್ಯಾದ್ಯಂತ ಅದ್ಧೂರಿಯಾಗಿ ಸಂಭ್ರಮಿಸಲಾಗಿದೆ. ಆದರೆ ಇದೇ ಶುಭದಿನದಂದು ಕೆಲವರು ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹಾಕಿದ್ದ ಬ್ಯಾನರ್​ (banner) ನ್ನು ಕಿಡಿಗೇಡಿಗಳು ಹರಿದು ಹಾಕಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ನಡೆದಿದೆ. ಬ್ಯಾನರ್ ಹರಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು, ಕೇಸರಿ ಬಾವುಟಗಳನ್ನ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಸೂಲಿಬೆಲೆ ಠಾಣೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ

ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಹಿಂದು ಕಾರ್ಯಕರ್ತರಿಂದ ಸಿಹಿ ವಿತರಣೆ ಮಾಡುತ್ತಿದ್ದ ವೇಳೆ ಅದೇ ದಾರಿಯಲ್ಲಿ ಬಂದ ಮುಸ್ಲಿಂ ‌ಮಹಿಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾಳೆ. ನೀವು ಮೋದಿ‌ ಪರ ಕೆಲಸ ಮಾಡುತ್ತಿದ್ದೀರಾ ಎಂದು ಮಹಿಳೆ ಪೊಲೀಸರಿಗೆ ಆವಾಜ್ ಹಾಕಿದ್ದಾಳೆ. ಸ್ಥಳದಲ್ಲಿದ್ದ ಹಿಂದು ಕಾರ್ಯಕರ್ತರಿಂದ ಪ್ರತಿರೋಧ ವ್ಯಕ್ತವಾಗಿದ್ದು, ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ: ಎಸ್​ಪಿ ಮಿಥುನ್ ಕುಮಾರ್

ಮುಸ್ಲಿಂ ಮಹಿಳೆಯನ್ನು ಬಂಧಿಸುವಂತೆ ಬಿಜೆಪಿ ಮುಖಂಡ, ಮಾಜಿ ಸಚಿವ ಈಶ್ವರಪ್ಪ ‌ಪುತ್ರ ಕಾಂತೇಶ್ ಅವರಿಂದ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮುಸ್ಲಿಂ ಮಹಿಳೆ ನ್ಯೂಸೆನ್ಸ್ ಮಾಡುತ್ತಿದ್ದರು ಸುಮ್ಮನಿದ್ದೀರಾ ಎಂದಿದ್ದಾರೆ. ನಂತರ ಮುಸ್ಲಿಂ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ.

ಈ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, 500 ವರ್ಷಗಳ ಬಳಿಕ ಹಿಂದೂಗಳ‌ ಕನಸು ನನಸಾಗಿದೆ. ಆದರೆ, ಸಂಭ್ರಮದ ವೇಳೆ ಷಡ್ಯಂತ್ರ ರೂಪಿಸುವ ಕೆಲಸ. ಶಿವಪ್ಪನಾಯಕ ‌ಪ್ರತಿಮೆ ಬಳಿ ಸಂಭ್ರಮಾಚರಣೆ ನಡೀತಿತ್ತು. ಈ ವೇಳೆ ಬುರ್ಕಾ ಧರಿಸಿ ಬಂದಿದ್ದ ಮಹಿಳೆ ಘೋಷಣೆ ಕೂಗಿ ಪ್ರಧಾನಿ ಮೋದಿಗೆ ಅಪಮಾನಿಸಿದ್ದಾಳೆ ಎಂದಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಎಸ್​ಡಿಪಿಐ ವಿರೋಧ

ಘಟನೆ ಕುರಿತು ನಾನು ಎಸ್​ಪಿ ಜೊತೆ ಮಾತನಾಡಿದೆ. ಆ ಮುಸ್ಲಿಂ ಮಹಿಳೆ ಹುಚ್ಚಿ ಎಂದು ಎಸ್​ಪಿ ಹೇಳಿದರು. ಹುಚ್ಚಿ ಅಂತ ನೀವೇ ಹೇಗೆ ನಿರ್ಧರಿಸ್ತೀರಿ ಎಂದು ಕೇಳಿದೆ. ಆಕೆ ವಿರುದ್ಧ FIR ಹಾಕಿ, ಅರೆಸ್ಟ್ ಮಾಡಲು ಹೇಳಿದ್ದೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:26 pm, Mon, 22 January 24

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us