Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ

ಪ್ರೀತಿ ಮದುವೆಯಾಗಿದ್ದ ಹೆಂಡತಿ ಪರ ಪುರಷನ ಜೊತೆ ಬೆಡ್​​ ರೂಮ್​ನಲ್ಲಿರುವುದನ್ನು ನೋಡಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಪತಿ, ತನ್ನ ಹೆಂಡತಿ ಬಗ್ಗೆ ಮನಮಿಡಿಯುವಂತೆ ಡೆತ್​ನೋಟ್​ ಬರೆದಿಟ್ಟಿದ್ದಾನೆ. ಆ ಡೆತ್​ನೋಟ್​ನ​ ವಿವರ ಈ ಕೆಳಗಿನಂತಿದೆ ನೋಡಿ.

ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ
ಡೆತ್​ನೋಟ್ ಬರೆದಿಟ್ಟು ಲೋಕೇಶ್ ಆತ್ಮಹತ್ಯೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ

Updated on:Aug 20, 2023 | 1:35 PM

ಬೆಂಗಳೂರು, (ಆಗಸ್ಟ್ 20): ಪರ ಪುರುಷನ ಜತೆ ಪತ್ನಿಯ ಲವ್ವಿಡವ್ವಿ ನೋಡಿ ಪತಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂರಿಕಿನ ಚಿಕ್ಕಮಾರನಹಳ್ಳಿಯಲ್ಲಿ ನಡೆದಿದೆ. ಲೋಕೇಶ್(35)ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಾಗರಬಾವಿ ಬಿಬಿಎಂಪಿ ಕಚೇರಿಯಲ್ಲಿ ಗುತ್ತಿಗೆ ನೌಕರನಾಗಿದ್ದ ಲೋಕೇಶ್, ತನ್ನ ಪತ್ನಿ ಶಶಿಕಲಾ ಜತೆ ಯುವಕ ಚಿರಂಜೀವಿ ಮನೆಯ ಬೆಡ್ ರೂಂನಲ್ಲಿ ಇರುವುದನ್ನು ನೋಡಿ ಮನನೊಂದಿದ್ದ. ಬಳಿಕ ಲೋಕೇಶ್ ಡೆತ್​ನೋಟ್ ಬರೆದಿಟ್ಟು, ಬಳಿಕ ಗ್ರಾಮದ ಹೊರಗಿನ ಹೊಂಗೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನು ಲೋಕೇಶ್ ಕಾಣದಿದ್ದಾಗ ತಾಯಿ ಲಕ್ಷ್ಮಮ್ಮ ಗಾಬರಿಯಲ್ಲಿ ಹುಡುಕಾಡುತ್ತಿದ್ದಳು. ಕೊನೆಗೆ ಸಾಕು ನಾಯಿ ಲಕ್ಷ್ಮಮ್ಮಳನ್ನು ನೇರವಾಗಿ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದು, ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಾಯಿ ಲಕ್ಷ್ಮಮ್ಮ,ಅಕ್ಕ ಮಂಜುಳರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಈ ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸರು ಚಿರಂಜೀವಿಯನ್ನ ಬಂಧಿಸಿ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದ ಪತಿ

ಡೆತ್​ ನೋಟ್​ನಲ್ಲೇನಿದೆ?

“ಯಾವ ದೈವವೂ ನಿಮ್ಮನ್ನು ಕ್ಷಮಿಸುವುದಿಲ್ಲ ಅಕ್ಕ ಅಕ್ಕ ಎಂದುಕೊಂಡು ಈ ರೀತಿ ಮೋಸ ಮಾಡಿದಿಯಾ”, “ಒಳಿತು ಮಾಡು ಮನುಷ ಇರೋದು ಮೂರು ದಿವಸ”. ಶಶಿಕಲಾ ನಾನು ನಿನ್ನನ್ನು ಪ್ರೀತಿಸಿ ಮದುವೆಯಾದೆ ಆದರೆ ನೀನು ನನಗೆ ಇಂಥ ಮೋಸ ಮಾಡಿದಿಯಲ್ಲ, ಇದನ್ನು ಕನಸಿನಲ್ಲೂ ಕೂಡ ಇಂತಹದ್ದನ್ನ ಊಹಿಸಿರಲಿಲ್ಲ. ನಮಗೆ ಇರುವ ಇಬ್ಬರು ಹೆಣ್ಣುಮಕ್ಕಳಿಗೆ ದಾರಿ ದೀಪವಾಗಬೇಕಿತ್ತು. ನನಗೆ ಮೋಸ ಮಾಡಿಬಿಟ್ಟೆ. ನೀನು ಹಾಗೂ ಚಿರಂಜೀವಿ ಜೀವನ ಸುಖವಾಗಿರಲೆಂದು ಹಾರೈಸಿ ಕೊನೆಯಲ್ಲಿ ಪತ್ನಿ ಶಶಿಕಲಾಗೆ I love you. ಪ್ರಿಯಕರನಿಗೆ I hate you ಚಿರಂಜೀವಿ ಎಂದು ಲೋಕೇಶ್ ಡೆತ್ ನೋಟ್​ನಲ್ಲಿ ಬರೆದಿದ್ದಾನೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:45 pm, Sun, 20 August 23

ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ