AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ದಾಳಿ, ಕೋಟ್ಯಂತರ ರೂಪಾಯಿ ಮೊತ್ತದ ಆಸ್ತಿ ಜಪ್ತಿ

ಅಧಿಕಾರಿಗಳು ಒತ್ತುವರಿದಾರರ ವಿರುದ್ಧ ದಾಳಿ ಮುಂದುವರಿಸಿದ್ದು, ಜೆ.ಪಿ.ನಗರದಲ್ಲಿ ₹ 30 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು: ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ದಾಳಿ, ಕೋಟ್ಯಂತರ ರೂಪಾಯಿ ಮೊತ್ತದ ಆಸ್ತಿ ಜಪ್ತಿ
ಬಿಡಿಎ ಅಭಿವೃದ್ಧಿಪಡಿಸಿರುವ ಲೇಔಟ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Nov 22, 2022 | 12:15 PM

Share

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (Bangalore Development Authority – BDA) ವ್ಯಾಪ್ತಿಯಲ್ಲಿ ನಡೆದಿರುವ ಭೂ ಒತ್ತುವರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಒತ್ತುವರಿದಾರರ ವಿರುದ್ಧ ದಾಳಿ ಮುಂದುವರಿಸಿದ್ದು, ಜೆ.ಪಿ.ನಗರದಲ್ಲಿ ₹ 30 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಜೆ.ಪಿ.ನಗರ 9ನೇ ಹಂತ, 1ನೇ ಬ್ಲಾಕ್​ನ ಆಲಹಳ್ಳಿಯಲ್ಲಿ ಸರ್ವೆ ನಂಬರ್ 4/1ರಲ್ಲಿ 22 ಗುಂಟೆ ಜಾಗವನ್ನು ಬಿಡಿಎ ಮತ್ತೆ ತನ್ನ ವಶಕ್ಕೆ ತೆಗೆದುಕೊಂಡಿದೆ. ಈ ಜಾಗದಲ್ಲಿ ಕಳೆದ 10 ವರ್ಷಗಳಿಂದ ತಾತ್ಕಾಲಿಕ್ ಶೆಡ್​ಗಳನ್ನು ನಿರ್ಮಿಸಿಕೊಂಡು ಹಲವರು ವ್ಯಾಪಾರ ಮಾಡುತ್ತಿದ್ದರು. ಪೊಲೀಸ್ ಬಂದೋಬಸ್ತ್​ನಲ್ಲಿ 6 ತಾತ್ಕಾಲಿಕ ಶೆಡ್​​ಗಳನ್ನು ತೆರವುಗೊಳಿಸಲಾಯಿತು. ಇಂಥ ಶೆಡ್​ಗಳಲ್ಲಿ ಇರುವವರು ನಿರಾಪೇಕ್ಷಣಾ ಪತ್ರ ನೀಡಬೇಕು. ನಕಲಿ ಎನ್​ಒಸಿ ಕೊಟ್ಟರೆ, ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬಿಡಿಎ ಎಚ್ಚರಿಸಿದೆ.

ಬಿಡಿಎ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ನಿಯಮ ಉಲ್ಲಂಘನೆಯಲ್ಲಿ ಶಾಮೀಲಾಗಿರುವವರು ಹಾಗೂ ಅಕ್ರಮ ಎಸಗಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಡಾ ಶಿವರಾಮ ಕಾರಂತ ಬಡಾವಣೆ ಅಧಿಸೂಚನೆ ಪ್ರಕರಣದ ಬಗ್ಗೆ ಇದೀಗ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಬಡಾವಣೆಗಾಗಿ ಕಟ್ಟಡಗಳು ಇರುವ ಪ್ರದೇಶವನ್ನೂ ಒಳಗೊಳ್ಳುವಂತೆ ಭೂಸ್ವಾಧೀನ ಅಧಿಸೂಚನೆ ಹೊರಡಿಸಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಸಿಎಂ ಸೂಚಿಸಿದ್ದಾರೆ.

245 ಎಕರೆಯನ್ನು ಕೈಬಿಟ್ಟಿರುವ ಬಗ್ಗೆ ಸುಪ್ರೀಂಕೋರ್ಟ್ ಪರಿಶೀಲಿಸಿತ್ತು. ಹೆಚ್ಚುವರಿಯಾಗಿ 245 ಎಕರೆ ಪ್ರದೇಶ ಭೂ ಸ್ವಾಧೀನಪಡಿಸಿಕೊಳ್ಳಲು ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಎರಡು ತಿಂಗಳ ನಂತರ ಅಂತಿಮ ಅಧಿಸೂಚನೆ ಹೊರಡಿಸಲು ಸಿದ್ಧಪಡಿಸಲಾಗಿದ್ದ ಕರಡಿನಲ್ಲಿ 52 ಎಕರೆಯನ್ನು ಕೈಬಿಡಲಾಗಿತ್ತು. ಈ ಅಂಶವು ಮುಖ್ಯಮಂತ್ರಿಯವರ ಸಹಿಗೆಂದು ಕಳಿಸಿದ್ದ ಕರಡು ಪ್ರತಿಯಲ್ಲಿ ಪತ್ತೆಯಾಗಿತ್ತು.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ, ಹೆಸರಘಟ್ಟ ಮತ್ತು ಯಲಹಂಕ ಹೋಬಳಿಯ 52 ಎಕರೆ ಡಿನೋಟಿಫಿಕೇಷನ್‌ಗೆ ಕರಡು ಸಿದ್ಧವಾಗಿತ್ತು. 193 ಎಕರೆ ಪ್ರದೇಶದ ಸ್ವಾಧೀನಕ್ಕೆ ನಿರ್ಧರಿಸಲಾಗಿತ್ತು. ‘ಪ್ರಾಥಮಿಕ ಅಧಿಸೂಚನೆ ಮಾಡುವಾಗ ಈ ಕಟ್ಟಡಗಳು ಗಮನಕ್ಕೆ ಬಂದಿರಲಿಲ್ಲವೇ ಎಂದು ಸಿಎಂ ಪ್ರಶ್ನಿಸಿದ್ದರು. ಎಲ್ಲ 245 ಎಕರೆ ಪ್ರದೇಶವೂ ಅಂತಿಮ ಅಧಿಸೂಚನೆಯಲ್ಲಿರಲಿ’ ಎಂದು ಮುಖ್ಯಮಂತ್ರಿ ಸೂಚಿಸಿದ್ದರು.

ಕಟ್ಟಡಗಳು ಇರುವ ಪ್ರದೇಶವನ್ನು ಭೂಸ್ವಾಧೀನದ ಅಧಿಸೂಚನೆಗೆ ಸೇರಿಸಿರುವುದು ಅಧಿಕಾರಿಗಳ ಬೇಜವಾಬ್ದಾರಿಯಾಗಿದೆ. ಅಂಥವರನ್ನು ಅಮಾನತು ಮಾಡಬೇಕು ಎಂದು ಬಿಡಿಎಗೆ ಬರೆದಿದ್ದ ಪತ್ರದಲ್ಲಿ ಸಿಎಂ ಸೂಚಿಸಿದ್ದರು. ಈ ಸಂಬಂಧ ಬಿಡಿಎ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಅಧಿಸೂಚನೆಯಲ್ಲಿರುವ ಪ್ರದೇಶಗಳ ಕಟ್ಟಡಗಳನ್ನು ಕ್ರಮಬದ್ಧಗೊಳಿಸಲು ಮುಂದಾಗಿದೆ ಎಂದು ಮೂಲಗಳು ಹೇಳಿವೆ.

Published On - 12:15 pm, Tue, 22 November 22

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ