ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ ಹಚ್ಚಿದ್ದ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಕಾರಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 20 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರನ್ನು ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ ಹಚ್ಚಿದ್ದ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಗೋಮಾಂಸ ಸಾಗಾಟ ತಡೆದ ಶ್ರೀರಾಮಸೇನೆ ಕಾರ್ಯಕರ್ತರು
Edited By: ವಿವೇಕ ಬಿರಾದಾರ

Updated on: Sep 24, 2023 | 11:18 AM

ದೇವನಹಳ್ಳಿ ಸೆ.23: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೊಡ್ಡಬಳ್ಳಾಪುರ (Daddaballapur) ನಗರದ ಐಬಿ‌ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ (Sriram Sena) ಕಾರ್ಯಕರ್ತರು ತಡೆದಿದ್ದಾರೆ. ಗೋಮಾಂಸ ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ಬರುತ್ತಿದ್ದ ವಾಹನಗಳನ್ನು ತಡೆದಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಗೋಮಾಂಸ ಸಾಗಾಟ ಮಾಡುವರು ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಶ್ರೀರಾಮಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಗೂಡ್ಸ್​ ವಾಹನಗಳಲ್ಲಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: RSS ಕಾರ್ಯಾಕರ್ತರೆಂದು ಹೇಳಿ ಗೋಮಾಂಸದೊಂದಿಗೆ ವ್ಯಕ್ತಿ ಕಿಡ್ನಾಪ್, ಮಹಮ್ಮದ್​​ನ ಅಸಲಿ ಕಹಾನಿ ಇಲ್ಲಿದೆ 

ಶ್ರೀರಾಮ ಸೇನೆ ಕಾರ್ಯಕರ್ತರು ಸಾಗಾಟ ಮಾಡುತ್ತಿದ್ದವರ ತಲೆಯ ಮೇಲೆ‌ ಹಸುಗಳ ರುಂಡಗಳನ್ನು ಇರಿಸಿದ್ದಾರೆ. ಈ ವೇಳೆ ಕಾರ್ಯಕರ್ತ ಗೋಮಾಂಸ ಸಾಗಿಸುತ್ತಿದ್ದವನ ಎದಗೆ ಒದ್ದಿದ್ದಾರೆ.  ಈ ವೇಳೆ ಮಧ್ಯಪ್ರವೇಶಿಸಿದ ಪೋಲೀಸರು ಹಲ್ಲೆ ಮಾಡದಂತೆ ಸೂಚನೆ ನೀಡಿದರು. ಬಳಿಕ

ಕಾರಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 20 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರನ್ನು ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳದಲ್ಲಿ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ಮೊಕ್ಕಾಂ ಹೂಡಿದ್ದಾರೆ. ಐಬಿ ವೃತ್ತ ಹಾಗೂ ಗುಂಜೂರು ಟೋಲ್​​ಗಳ ಸಿಸಿಟಿವಿಯನ್ನು ಪೊಲೀಸರು ಪರಿಶೀಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Sun, 24 September 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us