
ದೇವನಹಳ್ಳಿ, ಫೆಬ್ರವರಿ 09: ವಿದೇಶದಿಂದ ತಂದಿದ್ದ 8 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (hydroponic ganja) ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರಿಬ್ಬರು ವಿದೇಶದಿಂದ ಹೈಡ್ರೋಪೋನಿಕ್ ಗಾಂಜಾ ಸಾಗಾಟಕ್ಕೆ ಮುಂದಾಗಿದ್ದರು. ಇಮಿಗ್ರೇಷನ್ ವಿಭಾಗದಲ್ಲಿ ಚೆಕಿಂಗ್ ಮಾಡಲಾಗಿದ್ದು, ಈ ವೇಳೆ ಲಗೇಜ್ ಬ್ಯಾಗ್ನ ತಳಭಾಗದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಪತ್ತೆ ಆಗಿದೆ.
🚨 Major NDPS Seizure at Airport | 09.02.2026
Bengaluru Customs intercepted two passengers arriving from Bangkok and seized 23.76 kg of hydroponic ganja, valued at ₹8.31 crore, concealed in checked-in baggage
Both accused were arrested under the NDPS Act, 1985.#CBIC— Bengaluru Customs (@blrcustoms) February 9, 2026
ಮತ್ತೊಂದು ಪ್ರಕರಣದಲ್ಲಿ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲಾಗುತ್ತಿದ್ದ 2 ಕೋಟಿ ರೂ. ಮೌಲ್ಯದ ವಜ್ರ ಸೇರಿದಂತೆ ವಿದೇಶಿ ಹಣವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಬೆಂಗಳೂರು ಏರ್ಪೋರ್ಟ್ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ
ಓರ್ವ ಪ್ರಯಾಣಿಕ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲು ಮುಂದಾಗಿದ್ದ. ಇಮಿಗ್ರೇಷನ್ ವಿಭಾಗದಲ್ಲಿ ಚೆಕಿಂಗ್ ವೇಳೆ ವಜ್ರ, ವಿದೇಶಿ ಕರೆನ್ಸಿ ಪತ್ತೆ ಆಗಿದೆ. ಕಸ್ಟಮ್ಸ್ ಕಾಯ್ದೆಯಡಿ ಪ್ರಯಾಣಿಕರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ನಿಷೇಧದ ನಡುವೆಯೂ ವಿದೇಶದಿಂದ ತಂದಿದ್ದ 2 ಕೋಟಿ 97 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ ನಿಲ್ಥಾಣಕ್ಕೆ ನಿನ್ನೆ ಪುಕೆಟ್ ಮತ್ತು ಮಲೇಷಿಯಾದಿಂದ ಮೂವರು ಪ್ರಯಾಣಿಕರು ಆಗಮಿಸಿದ್ದರು.
ಇದನ್ನೂ ಓದಿ: ಬೆಂಗಳೂರು ಏರ್ಪೋರ್ಟ್ಗೆ ಬಂದವನ ಬ್ಯಾಗ್ನಲ್ಲಿದ್ದವು ಹಾವುಗಳು, ಸರೀಸೃಪಗಳು!
ಎಲ್ಲಾ ಪ್ರಯಾಣಿಕರಂತೆ 2 ಪ್ರತ್ಯೇಕ ವಿಮಾನಗಳಲ್ಲಿ ಬಂದಿದ್ದ ಮೂವರ ಲಗೇಜ್ ಪರಿಶೀಲನೆ ನಡೆಸಿದಾಗ ಲಗೇಜ್ನಲ್ಲಿ 8.5 ಕೆಜಿ ಹೈಡ್ರೊಪೋನಿಕ್ ಗಾಂಜಾ ಪತ್ತೆ ಆಗಿತ್ತು. ಇನ್ನು ಗಾಂಜಾ ಸಿಗುತ್ತಿದ್ದಂತೆ ಮೂವರು ಪ್ರಯಾಣಿಕರನ್ನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 8.5 ಕೆಜಿ ಗಾಂಜಾದ ಮಾರುಕಟ್ಟೆ ಮೌಲ್ಯ 2 ಕೋಟಿ 97 ಲಕ್ಷ ಅಂತ ಅಂದಾಜಿಸಿದ್ದಾರೆ. ಈ ಕುರಿತು ಕಸ್ಟಮ್ಸ್ ಅಧಿಕಾರಿಗಳು ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.