ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 6.66 ಕೆಜಿ ತೂಕದ ಈ ದುಬಾರಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿರುವ ಪ್ರಯಾಣಿಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ನಡೆಸುತ್ತಿರುವ ತೀವ್ರ ವಿಚಾರಣೆಯ ಸಂಪೂರ್ಣ ವಿವರ ಇಲ್ಲಿದೆ.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!
ವಶಕ್ಕೆ ಪಡೆದುಕೊಂಡ ಹೈಡ್ರೋ ಗಾಂಜಾ
Edited By:

Updated on: Jun 08, 2026 | 11:50 AM

ದೇವನಹಳ್ಳಿ, ಜೂನ್ 08: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಮುಖ್ಯಾಂಶಗಳು

  • ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ.
  • ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದೆ.
  • 2.33 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಮೇತ ಆರೋಪಿಯನ್ನು ಬಂಧಿಸಲಾಗಿದೆ.

ಬ್ಯಾಗ್ ಪರಿಶೀಲನೆ ವೇಳೆ ಗಾಂಜಾ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಾಡಿಕೆಯಂತೆ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಒಬ್ಬ ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಅಧಿಕಾರಿಗಳಿಗೆ ತೀವ್ರ ಅನುಮಾನ ಮೂಡಿದೆ. ತಕ್ಷಣವೇ ಆತನ ಬ್ಯಾಗ್‌ ಅನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಒಳಗೆ ಅಡಗಿಸಿಟ್ಟಿದ್ದ ದುಬಾರಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.

ಇದನ್ನೂ ಓದಿ ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

6 ಕೆಜಿ ಗೂ ಹೆಚ್ಚು ತೂಕದ ಗಾಂಜಾ ವಶ

ವಶಪಡಿಸಿಕೊಳ್ಳಲಾದ ಈ ಗಾಂಜಾ ಒಟ್ಟು 6.66 ಕೆಜಿ ತೂಕವಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು 2.33 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಆರೋಪಿಯನ್ನು ರಹಸ್ಯ ಸ್ಥಳದಲ್ಲಿ ಇರಿಸಲಾಗಿದ್ದು, ಈ ಇಡೀ ಡ್ರಗ್ಸ್ ಜಾಲದ ಹಿಂದೆ ಯಾರಿದ್ದಾರೆ, ಬೆಂಗಳೂರಿನಲ್ಲಿ ಇದನ್ನು ಯಾರಿಗೆ ತಲುಪಿಸಲು ತರಲಾಗುತ್ತಿತ್ತು ಎಂಬ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us