ಬೆಂಗಳೂರು ವಿಮಾನ ನಿಲ್ದಾಣ; ಸೆ.1 ರಿಂದ ಟರ್ಮಿನಲ್ 2ನಿಂದ ಕಾರ್ಯಾಚರಿಸಲಿವೆ ಅಂತಾರಾಷ್ಟ್ರೀಯ ವಿಮಾನಗಳು

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಸೆಪ್ಟೆಂಬರ್ 1 ರಿಂದ ಕಾರ್ಯಾಚರಣೆ ನಡೆಸಲಿವೆ. ಈ ಟರ್ನಿನಲ್​ನಿಂದ ಮೊದಲ ವಿಮಾನವು ಕಲಬುರಗಿಗೆ ಹಾರಾಟ ನಡೆಸಿತ್ತು.

ಬೆಂಗಳೂರು ವಿಮಾನ ನಿಲ್ದಾಣ; ಸೆ.1 ರಿಂದ ಟರ್ಮಿನಲ್ 2ನಿಂದ ಕಾರ್ಯಾಚರಿಸಲಿವೆ ಅಂತಾರಾಷ್ಟ್ರೀಯ ವಿಮಾನಗಳು
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ ಅಂತಾರಾಷ್ಟ್ರೀಯ ವಿಮಾನಗಳು ಸೆ.1 ರಿಂದ ಕಾರ್ಯಾಚರಣೆ ನಡೆಸಲಿವೆ
Follow us
|

Updated on:Jun 08, 2023 | 5:26 PM

ಬೆಂಗಳೂರು: ಸೆಪ್ಟೆಂಬರ್​ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ (Bengaluru Airport Terminal 2) ಕಾರ್ಯಾಚರಣೆ ನಡೆಸಲಿವೆ. ಈ ಟರ್ಮಿನಲ್ ಮೂಲಕ ಬಹುತೇಕ ದೇಶೀಯ ಕಾರ್ಯಾಚರಣೆಗಳು ಮಾರ್ಚ್‌ನಿಂದಲೇ ಪ್ರಾರಂಭವಾಗಿವೆ. ಇತ್ತೀಚಿನ ಟರ್ಮಿನಲ್ 22 ಗೇಟ್‌ಗಳನ್ನು ಮತ್ತು ಒಂಬತ್ತು ಬ್ಯಾಗೇಜ್ ಕ್ಲೈಮ್ ಬೆಲ್ಟ್‌ಗಳನ್ನು ಹೊಂದಿದೆ.

5,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ T2 ಅನ್ನು ನವೆಂಬರ್ 2022 ರಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಅದರಂತೆ ಮೊದಲ ವಿಮಾನ ಹಾರಾಟವು ಬೆಂಗಳೂರಿನಿಂದ ಕಲಬುರಗಿಗೆ ನಡೆಸಲಾಯಿತು. ಈ ಟರ್ಮಿನಲ್​ನಲ್ಲಿ ಪ್ರಯಾಣಿಕರಿಗೆ ಸಹಾಯ ಮಾಡುವ ಪ್ರಾಯೋಗಿಕ ಯೋಜನೆಯ ಭಾಗವಾಗಿ ಟರ್ಮಿನಲ್ 1 ರಲ್ಲಿ ರೋಬೋಟ್ ಸಹಾಯಕ ‘ಟೆಮಿ’ ಅನ್ನು ಪ್ರಾರಂಭಿಸಿದೆ.

ಗ್ರೀನ್‌ ಬಿಲ್ಡಿಂಗ್‌ ಕೌನ್ಸಿಲ್‌ ಅವರಿಂದ ಕೊಡಮಾಡುವ ಪ್ರತಿಷ್ಠಿತ ‘ಪ್ಲಾಟಿನಂ ರೇಟಿಂಗ್‌’ ಗರಿಯನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಮುಡಿಗೇರಿಸಿಕೊಂಡಿತ್ತು. ನೈಸರ್ಗಿಕ ಸಂಪನ್ಮೂಲಗಳು, ನೀರಿನ ಸಂರಕ್ಷಣೆ ಸೇರಿದಂತೆ ಹಸಿರುಮಯ ಪರಿಕಲ್ಪನೆಯಡಿ ಟಿ2ನನ್ನು ನಿರ್ಮಿಸಲಾಗಿದ್ದು, ಇದರ ಸಮರ್ಥನೀಯತೆಗಾಗಿ ಗ್ರೀನ್ ನ್ಯೂ ಬಿಲ್ಡಿಂಗ್ಸ್ ರೇಟಿಂಗ್ ಸಿಸ್ಟಮ್ ಅಡಿಯಲ್ಲಿ ಈ ಪ್ಲಾಟಿನಂ ರೇಟಿಂಗ್‌ ದೊರೆಕಿತ್ತು.

ಇದನ್ನೂ ಓದಿ: ಹಸಿರು ವಿಮಾನ ನಿಲ್ದಾಣ: ಅತ್ಯುನ್ನತ ಲೆವೆಲ್ 4+ ಟ್ರಾನ್ಸಿಶನ್ ಮಾನ್ಯತೆ ಪಡೆದ ಬೆಂಗಳೂರು ವಿಮಾನ ನಿಲ್ದಾಣ

ಎರಡು ದಿನದ ಹಿಂದೆ, ಸಮರ್ಥ ಇಂಗಾಲ ನಿರ್ವಹಣೆ ಮತ್ತು ಸುಸ್ಥಿರತೆಗಾಗಿ ಏರ್​ಪೋರ್ಟ್ ಕಾರ್ಬನ್ ಮಾನ್ಯತೆ ಕಾರ್ಯಕ್ರಮದ ಅಡಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್​ ಅತ್ಯುನ್ನತ ಮಟ್ಟದ ಲೆವೆಲ್ 4+ ಟ್ರಾನ್ಸಿಶನ್ ಮಾನ್ಯತೆಯನ್ನು ಪಡೆದುಕೊಂಡಿದೆ.

T2 ನ ವಿನ್ಯಾಸ ಮತ್ತು ನಿರ್ಮಾಣವು IGBC ಗ್ರೀನ್ ನ್ಯೂ ಬಿಲ್ಡಿಂಗ್ಸ್ ರೇಟಿಂಗ್ ಸಿಸ್ಟಮ್‌ನಿಂದ ವಿವರಿಸಲಾದ ಹಲವಾರು ಪ್ರಮುಖ ಪರಿಸರ ವರ್ಗಗಳಿಗೆ ಬದ್ಧವಾಗಿದೆ. ಇದರಲ್ಲಿ ಸುಸ್ಥಿರ ವಾಸ್ತುಶಿಲ್ಪ ಮತ್ತು ವಿನ್ಯಾಸ, ಸೈಟ್ ಆಯ್ಕೆ ಮತ್ತು ಯೋಜನೆ, ನೀರಿನ ಸಂರಕ್ಷಣೆ, ಶಕ್ತಿ ದಕ್ಷತೆ, ಕಟ್ಟಡ ಸಾಮಗ್ರಿಗಳು ಮತ್ತು ಸಂಪನ್ಮೂಲಗಳು, ಒಳಾಂಗಣ ಪರಿಸರ ಗುಣಮಟ್ಟ, ನಾವೀನ್ಯತೆ ಮತ್ತು ಅಭಿವೃದ್ಧಿಯೂ ಪ್ರಮುಖ ಆಕರ್ಷಣೆಯಾಗಿದೆ.

ಈ ಹಸಿರು ಪರಿಕಲ್ಪನೆಗಳು ಮತ್ತು ತಂತ್ರಗಳನ್ನು ಸಂಯೋಜಿಸುವ ಮೂಲಕ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ, ಬೇಡಿಕೆ-ಬದಿಯ ಶಕ್ತಿ, ನೀರಿನ ದಕ್ಷತೆ, ನವೀಕರಿಸಬಹುದಾದ ಇಂಧನ ಮೂಲಗಳ ಅಳವಡಿಕೆ, ಗ್ರಾಹಕ ಮತ್ತು ನಿವಾಸಿಗಳ ಆರೋಗ್ಯ ಮತ್ತು ಸೌಕರ್ಯಗಳ ಆಪ್ಟಿಮೈಸೇಶನ್‌ನಂತಹ ರಾಷ್ಟ್ರೀಯ ಆದ್ಯತೆಗಳನ್ನು T2 ಪರಿಣಾಮಕಾರಿಯಾಗಿ ತಿಳಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 8 June 23

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ