AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣ; ಸೆ.1 ರಿಂದ ಟರ್ಮಿನಲ್ 2ನಿಂದ ಕಾರ್ಯಾಚರಿಸಲಿವೆ ಅಂತಾರಾಷ್ಟ್ರೀಯ ವಿಮಾನಗಳು

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಸೆಪ್ಟೆಂಬರ್ 1 ರಿಂದ ಕಾರ್ಯಾಚರಣೆ ನಡೆಸಲಿವೆ. ಈ ಟರ್ನಿನಲ್​ನಿಂದ ಮೊದಲ ವಿಮಾನವು ಕಲಬುರಗಿಗೆ ಹಾರಾಟ ನಡೆಸಿತ್ತು.

ಬೆಂಗಳೂರು ವಿಮಾನ ನಿಲ್ದಾಣ; ಸೆ.1 ರಿಂದ ಟರ್ಮಿನಲ್ 2ನಿಂದ ಕಾರ್ಯಾಚರಿಸಲಿವೆ ಅಂತಾರಾಷ್ಟ್ರೀಯ ವಿಮಾನಗಳು
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ ಅಂತಾರಾಷ್ಟ್ರೀಯ ವಿಮಾನಗಳು ಸೆ.1 ರಿಂದ ಕಾರ್ಯಾಚರಣೆ ನಡೆಸಲಿವೆ
Rakesh Nayak Manchi
|

Updated on:Jun 08, 2023 | 5:26 PM

Share

ಬೆಂಗಳೂರು: ಸೆಪ್ಟೆಂಬರ್​ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ (Bengaluru Airport Terminal 2) ಕಾರ್ಯಾಚರಣೆ ನಡೆಸಲಿವೆ. ಈ ಟರ್ಮಿನಲ್ ಮೂಲಕ ಬಹುತೇಕ ದೇಶೀಯ ಕಾರ್ಯಾಚರಣೆಗಳು ಮಾರ್ಚ್‌ನಿಂದಲೇ ಪ್ರಾರಂಭವಾಗಿವೆ. ಇತ್ತೀಚಿನ ಟರ್ಮಿನಲ್ 22 ಗೇಟ್‌ಗಳನ್ನು ಮತ್ತು ಒಂಬತ್ತು ಬ್ಯಾಗೇಜ್ ಕ್ಲೈಮ್ ಬೆಲ್ಟ್‌ಗಳನ್ನು ಹೊಂದಿದೆ.

5,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ T2 ಅನ್ನು ನವೆಂಬರ್ 2022 ರಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಅದರಂತೆ ಮೊದಲ ವಿಮಾನ ಹಾರಾಟವು ಬೆಂಗಳೂರಿನಿಂದ ಕಲಬುರಗಿಗೆ ನಡೆಸಲಾಯಿತು. ಈ ಟರ್ಮಿನಲ್​ನಲ್ಲಿ ಪ್ರಯಾಣಿಕರಿಗೆ ಸಹಾಯ ಮಾಡುವ ಪ್ರಾಯೋಗಿಕ ಯೋಜನೆಯ ಭಾಗವಾಗಿ ಟರ್ಮಿನಲ್ 1 ರಲ್ಲಿ ರೋಬೋಟ್ ಸಹಾಯಕ ‘ಟೆಮಿ’ ಅನ್ನು ಪ್ರಾರಂಭಿಸಿದೆ.

ಗ್ರೀನ್‌ ಬಿಲ್ಡಿಂಗ್‌ ಕೌನ್ಸಿಲ್‌ ಅವರಿಂದ ಕೊಡಮಾಡುವ ಪ್ರತಿಷ್ಠಿತ ‘ಪ್ಲಾಟಿನಂ ರೇಟಿಂಗ್‌’ ಗರಿಯನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಮುಡಿಗೇರಿಸಿಕೊಂಡಿತ್ತು. ನೈಸರ್ಗಿಕ ಸಂಪನ್ಮೂಲಗಳು, ನೀರಿನ ಸಂರಕ್ಷಣೆ ಸೇರಿದಂತೆ ಹಸಿರುಮಯ ಪರಿಕಲ್ಪನೆಯಡಿ ಟಿ2ನನ್ನು ನಿರ್ಮಿಸಲಾಗಿದ್ದು, ಇದರ ಸಮರ್ಥನೀಯತೆಗಾಗಿ ಗ್ರೀನ್ ನ್ಯೂ ಬಿಲ್ಡಿಂಗ್ಸ್ ರೇಟಿಂಗ್ ಸಿಸ್ಟಮ್ ಅಡಿಯಲ್ಲಿ ಈ ಪ್ಲಾಟಿನಂ ರೇಟಿಂಗ್‌ ದೊರೆಕಿತ್ತು.

ಇದನ್ನೂ ಓದಿ: ಹಸಿರು ವಿಮಾನ ನಿಲ್ದಾಣ: ಅತ್ಯುನ್ನತ ಲೆವೆಲ್ 4+ ಟ್ರಾನ್ಸಿಶನ್ ಮಾನ್ಯತೆ ಪಡೆದ ಬೆಂಗಳೂರು ವಿಮಾನ ನಿಲ್ದಾಣ

ಎರಡು ದಿನದ ಹಿಂದೆ, ಸಮರ್ಥ ಇಂಗಾಲ ನಿರ್ವಹಣೆ ಮತ್ತು ಸುಸ್ಥಿರತೆಗಾಗಿ ಏರ್​ಪೋರ್ಟ್ ಕಾರ್ಬನ್ ಮಾನ್ಯತೆ ಕಾರ್ಯಕ್ರಮದ ಅಡಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್​ ಅತ್ಯುನ್ನತ ಮಟ್ಟದ ಲೆವೆಲ್ 4+ ಟ್ರಾನ್ಸಿಶನ್ ಮಾನ್ಯತೆಯನ್ನು ಪಡೆದುಕೊಂಡಿದೆ.

T2 ನ ವಿನ್ಯಾಸ ಮತ್ತು ನಿರ್ಮಾಣವು IGBC ಗ್ರೀನ್ ನ್ಯೂ ಬಿಲ್ಡಿಂಗ್ಸ್ ರೇಟಿಂಗ್ ಸಿಸ್ಟಮ್‌ನಿಂದ ವಿವರಿಸಲಾದ ಹಲವಾರು ಪ್ರಮುಖ ಪರಿಸರ ವರ್ಗಗಳಿಗೆ ಬದ್ಧವಾಗಿದೆ. ಇದರಲ್ಲಿ ಸುಸ್ಥಿರ ವಾಸ್ತುಶಿಲ್ಪ ಮತ್ತು ವಿನ್ಯಾಸ, ಸೈಟ್ ಆಯ್ಕೆ ಮತ್ತು ಯೋಜನೆ, ನೀರಿನ ಸಂರಕ್ಷಣೆ, ಶಕ್ತಿ ದಕ್ಷತೆ, ಕಟ್ಟಡ ಸಾಮಗ್ರಿಗಳು ಮತ್ತು ಸಂಪನ್ಮೂಲಗಳು, ಒಳಾಂಗಣ ಪರಿಸರ ಗುಣಮಟ್ಟ, ನಾವೀನ್ಯತೆ ಮತ್ತು ಅಭಿವೃದ್ಧಿಯೂ ಪ್ರಮುಖ ಆಕರ್ಷಣೆಯಾಗಿದೆ.

ಈ ಹಸಿರು ಪರಿಕಲ್ಪನೆಗಳು ಮತ್ತು ತಂತ್ರಗಳನ್ನು ಸಂಯೋಜಿಸುವ ಮೂಲಕ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ, ಬೇಡಿಕೆ-ಬದಿಯ ಶಕ್ತಿ, ನೀರಿನ ದಕ್ಷತೆ, ನವೀಕರಿಸಬಹುದಾದ ಇಂಧನ ಮೂಲಗಳ ಅಳವಡಿಕೆ, ಗ್ರಾಹಕ ಮತ್ತು ನಿವಾಸಿಗಳ ಆರೋಗ್ಯ ಮತ್ತು ಸೌಕರ್ಯಗಳ ಆಪ್ಟಿಮೈಸೇಶನ್‌ನಂತಹ ರಾಷ್ಟ್ರೀಯ ಆದ್ಯತೆಗಳನ್ನು T2 ಪರಿಣಾಮಕಾರಿಯಾಗಿ ತಿಳಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 8 June 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?