AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್: ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ವಶ, ಚಿನ್ನ ಜಪ್ತಿ

ಬೆಂಗಳೂರು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ಯಾಂಟ್ ಒಳಗಡೆ ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ಚಿನ್ನ ವಶಕ್ಕೆ ಪಡೆದಿದ್ದಾಋಏ. 22.5 ಲಕ್ಷ ಮೌಲ್ಯದ 367 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಶಾರ್ಜಾದಿಂದ ಬೆಂಗಳೂರಿಗೆ ಬಂದಿದ್ದ ಈ ಆರೋಪಿ ಪ್ಯಾಂಟ್ ಒಳಗಡೆ ಹಲವು ಲೇಯರ್ಗಳನ್ನ ಮಾಡಿ ಅದರಲ್ಲಿ ಚಿನ್ನ ಅಡಗಿಸಿಟ್ಟಿದ್ದ.

ಬೆಂಗಳೂರು ಏರ್​ಪೋರ್ಟ್: ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ವಶ, ಚಿನ್ನ ಜಪ್ತಿ
ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ
ನವೀನ್ ಕುಮಾರ್ ಟಿ
| Edited By: |

Updated on: Feb 22, 2024 | 9:00 AM

Share

ಬೆಂಗಳೂರು, ಫೆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ (Kempegowda International Airport Bengaluru) 22.5 ಲಕ್ಷ ಮೌಲ್ಯದ ಚಿನ್ನ (Gold Powder) ಜಪ್ತಿ ಮಾಡಲಾಗಿದೆ. ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನಿಂದ ಚಿನ್ನ ಜಪ್ತಿ ಮಾಡಿದ್ದಾರೆ. ಹಾಗೂ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.

ಶಾರ್ಜಾದಿಂದ ಕೆಐಎಬಿಗೆ ವಿಮಾನದಲ್ಲಿ ಬಂದಿಳಿದಿದ್ದ ಆರೋಪಿ ಕಸ್ಟಮ್ ಅಧಿಕಾರಿಗಳ ಕಣ್ತಪ್ಪಿಸಲು ಡಿಸೈನ್ ಪ್ಯಾಂಟ್ ಮಾಡಿಸಿದ್ದ. ಪ್ಯಾಂಟ್ ಒಳಗಡೆ ಲೇಯರ್​ಗಳನ್ನ ಮಾಡಿ ಚಿನ್ನ ಅಡಗಿಸಿಟ್ಟಿದ್ದ. ಪೌಡರ್ ರೂಪದ ಚಿನ್ನವನ್ನ ಅಡಗಿಸಿ ಸಾಗಾಟ ಮಾಡಲು ಯತ್ನಿಸಿದ್ದ. ಸದ್ಯ ಕಸ್ಟಮ್ಸ್​ ಅಧಿಕಾರಿಗಳ ಚಾಣಾಕ್ಷತನದಿಂದ 22.5 ಲಕ್ಷ ಮೌಲ್ಯದ 367 ಗ್ರಾಂ ಚಿನ್ನ ಜಪ್ತಿಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಶೇರ್ ಟ್ರೇಡಿಂಗ್ ಪರ್ಚೇಸ್ ಹೆಸರಲ್ಲಿ ಉದ್ಯಮಿಗಳಿಗೆ 16 ಕೋಟಿ ದೋಖಾ

ಶೇರ್ ಮಾರ್ಕೇಟ್ ಟ್ರೇಡಿಂಗ, IPO ಪರ್ಚೇಸ್ & ಸೆಲ್ಲಿಂಗ್ ಹೆಸರಲ್ಲಿ ಬೆಂಗಳೂರಿನ ಉದ್ಯಮಿಗಳಿಗೆ ಬರೋಬ್ಬರಿ 16 ಕೋಟಿ ಒಂದು ಲಕ್ಷ ಹಣ ವಂಚಿಸಿರೋ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಹರಿಪಾಲ್ ಸಿಂಗ್ ಎಂಬುವವರಿಗೆ ಮತ್ತು ಕೋಟಿ ಸಿಸ್ಟಮ್ ಮಾಲೀಕರರಿಗೆ ಫೇಸ್ಬುಕ್ ಮೂಲಕ ಪರಿಚಿತರಾದ ಈ ಜಾಲ ಶೇರ್ ಟ್ರೇಡಿಂಗ್ ಕಂಪನಿ ಹೆಸರಲ್ಲಿ ಬಲೆಬೀಸಿತ್ತು. ಫೇಸ್ಬುಕ್ ಅಡ್ವಟೈಸ್ಮೆಂಟ್ ನೋಡಿ ಉದ್ಯಮಿಗಳು ವಂಚಕ ಜಾಲವನ್ನ ಸಂಪರ್ಕಿಸಿದ್ರು. ಗೋಲ್ಡ್ಸ್ ಮೆನ್ ಸಾಚಸ್ ಈಕ್ವಿಟಿ ಅಸೆಟ್ ಮ್ಯಾನೇಜ್ಮೆಂಟ್ ಗ್ರೂಪ್ 109 ಹಾಗೂ ಸ್ಕೈ ರಿಮ್ ಕ್ಯಾಪಿಟಲ್ ಇಮಿಲಿ ಕುನಾಲ್ ಎಂಬ ಶೇರ್ ಟ್ರೇಡಿಂಗ್ ಕಂಪನಿಗಳ ಪರಿಚಯವಾಗಿತ್ತು. ಕಂಪನಿಯ ಶೇರುಗಳನ್ನ ಖರೀದಿಸಿದ್ರೆ, ಸ್ಟಾಕ್ ಮಾರ್ಕೆಟ್ ನಲ್ಲಿ ಕಂಪನಿಗಳ ಷೇರುಗಳ ಮೇಲೆ ಇನ್ವೆಸ್ಟ್ ಮಾಡಿದ್ರೆ ಹೆಚ್ಚಿನ ಲಾಭ ಬರೋದಾಗಿ ನಂಬಿಸಿದ್ರು. ಅಲ್ಲದೇ ಫೇಸ್ಬುಕ್ ಪರಿಚಿತರಾದ ಆರೋಪಿಗಳು ತಮ್ಮ ವಾಟ್ಸಾಫ್ ಗ್ರೂಪ್ ಗೆ ಹರಿಪಾಲ್ ಸಿಂಗ್ ರನ್ನ ಸೇರಿಸಿದ್ರು. ಗ್ರೂಪ್ ನ ಸದಸ್ಯರಿಗೆ ಹೆಚ್ಚಿನ ಲಾಭ ದೊರೆಯುತ್ತಿರೋದಾಗಿ ಸುಳ್ಳು ಸುಳ್ಳು ಮೆಸೇಜ್ ಗಳನ್ನ ಗ್ರೂಪ್‌ನಲ್ಲಿ ಹಾಕಿ ಹರಿಪಾಲ್ ಸಿಂಗ್ ರನ್ನು ನಂಬಿಸಿ ಇನ್ವೆಸ್ಟ್ ಮಾಡುವಂತೆ ಮಾಡಿದ್ರು.

ಇದನ್ನೂ ಓದಿ: ಫರೀದಾಬಾದ್: ಕಾರು ಕದಿಯಲು ಹೋಗಿ ನಿದ್ರೆಗೆ ಜಾರಿದ ಕಳ್ಳ

ಹೆಚ್ಚಿನ ಲಾಭ ದೊರೆಯುವ ನಿರೀಕ್ಷೆಯಲ್ಲಿ ಹರಿಪಾಲ್ ಸಿಂಗ್ ಕಳೆದ ಡಿಸೆಂಬರ್ ನಿಂದ ಫೆಬ್ರವರಿ ಮೊದಲ ವಾರದ ವರೆಗೂ ಆರೋಪಿಗಳ ಸುಮಾರು 26 ಅಕೌಂಟ್ ಗಳಿಗೆ ಬರೋಬ್ಬರಿ 6 ಕೋಟಿ 1 ಲಕ್ಷ ಹಣ ಸಂದಾಯ ಮಾಡಿ ಕಂಪನಿ ಷೇರು ಖರೀದಿ ಮಾಡಿದ್ರು. ನಂತರ ಕಂಪನಿ ಷೇರು ಮಾರಾಟ ಮಾಡಿ ಹಣ ಹಿಂದುರಿಗಿಸಿ ಲಾಭಾಂಶ ಪಡೆಯಲು ಹರಿಪಾಲ್ ಸಿಂಗ್ ಯತ್ನಿಸಿದ ವೇಳೆ ಆರೋಪಿಗಳು ನಾನಾ ಕಾರಣ ನೀಡಿ ಹಣ ಹಿಂದಿರುಗಿಸದೇ ವಿಳಂಬ ಮಾಡ್ತಿದ್ರು. ಇದೇ ವೇಳೆ ಹರಿಪಾಲ್ ಸಿಂಗ್ ಹೂಡಿಕೆ ಮಾಡಿದ್ದ ಕಂಪನಿ ಹೆಸರಲ್ಲಿ ಕೇರಳದ ಉದ್ಯಮಿಯೊಬ್ಬನಿಗೂ ಇದೇ ರೀತಿ ವಂಚನೆ ಆಗಿರೋದು ಹರಿಪಾಲ್ ಸಿಂಗ್ ರಿಗೆ ಗೊತ್ತಾಗಿತ್ತು. ಕಡೆಗೆ ಎಚ್ಚೆತ್ತ ಹರಿಪಾಲ್ ಸಿಂಗ್ ಬೆಂಗಳೂರು ಸೈಬರ್ ಕ್ತೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಕೋಟಿ ಸಿಸ್ಟಮ್ ಮಾಲಿಕರಿಗೂ ಇದೇ ರೀ ಫೇಸ್ ಬುಕ್ ಮೂಲಕ ತಲುಪಿ ವಾಟ್ಸಪ್ ಹಾಗು ಟೆಲಿಗ್ರಾಮ್ ನಲ್ಲಿ ಪೋಸ್ಟ್ ಮಾಡಿಸಿ ಹಂತ ಹಂತವಾಗಿ ಹತ್ತು ಕೋಟಿ ವಂಚನೆ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್