AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು
ಕೆಂಪೇಗೌಡ ವಿಮಾನ ನಿಲ್ದಾಣ
ನವೀನ್ ಕುಮಾರ್ ಟಿ
| Edited By: |

Updated on: Sep 26, 2023 | 12:45 PM

Share

ಬೆಂಗಳೂರು, ಸೆ.26: ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ (Cauvery Water Dispute). ಇದರಿಂದ ರೊಚ್ಚಿಗೆದ್ದ ರೈತರು, ಕನ್ನಡ ಪರ ಸಂಘಟನೆಗಳು ಬಂದು ತೊಟ್ಟು ನೀರು ಕೂಡ ಬಿಡಬಾರದು ಎಂದು ಆಕ್ರೋಶ ಹೊರ ಹಾಕಿ ಬೆಂಗಳೂರು ಬಂದ್ (Bengaluru Bandh) ಮಾಡಿ ಪ್ರತಿಭಟನೆ ನಡೆಸಿವೆ. ಆದರೆ ಮತ್ತೊಂದೆಡೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Bengaluru) ಖಾಲಿ ಖಾಲಿಯಾಗಿದ್ದು ಬಂದ್ ಎಫೆಕ್ಟ್​ನಿಂದಾಗಿ ಹೊರ ರಾಜ್ಯಗಳಿಂದ ಆಗಮಿಸಬೇಕಿದ್ದ ವಿಮಾನಗಳು ರದ್ದಾಗಿವೆ. ಪ್ರಯಾಣಿಕರಿಲ್ಲದ ಕಾರಣ ಅನೇಕ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ (Flight Cancel).

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ತಮ್ಮ ಪ್ಲ್ಯಾನ್​ಗಳನ್ನು ಬದಲಾಯಿಸಿ ವಿಮಾನಯಾನವನ್ನು ಮುಂದೂಡಿದ್ದಾರೆ. ಇನ್ನು ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಬೆಳಗ್ಗೆ ಕೆಂಪೇಗೌಡ ಏರ್ಪೋಟ್ ಗೆ ಆಗಮಿಸಬೇಕಿದ್ದ ವಿಮಾನಗಳು ಬಂದ್ ಹಿನ್ನೆಲೆ ಬಂದಿಲ್ಲ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಸಿದ್ದರಾಮಯ್ಯ, ಹೆಚ್​ಡಿ ದೇವೇಗೌಡ ಹೇಳಿದ್ದಿಷ್ಟು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕನ ಅಳಲು

ಇನ್ನು ಮತ್ತೊಂದೆಡೆ ಕ್ಯಾಬ್ ಚಾಲಕ ಲೋಕೇಶ್ ಅಳಲು ತೋಡಿಕೊಂಡಿದ್ದಾರೆ. ರಾತ್ರಿ ಒಂದು ಗಂಟೆಯಿಂದ ಪ್ರಯಾಣಿಕರಿಗಾಗಿ ಕಾಯುತ್ತಿದ್ದೇನೆ. ಬೆಳ್ಳಗ್ಗೆಯಿಂದ ಒಂದೇ ಒಂದು ಡ್ರಾಪ್‌ ಮಾತ್ರ ಸಿಕ್ಕಿದೆ. ಬಂದ್‌ ಹಿನ್ನೆಲೆ ಪ್ರಯಾಣಿಕರು ಬರ್ತಿಲ್ಲ. ಪ್ಲೈಟ್‌ಗಳು ಇವೆ ಆದರೆ ಜನರು ಬರ್ತಿಲ್ಲ ಎಂದು ಹೆಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!