Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು
ಕೆಂಪೇಗೌಡ ವಿಮಾನ ನಿಲ್ದಾಣ
Follow us
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು

Updated on: Sep 26, 2023 | 12:45 PM

ಬೆಂಗಳೂರು, ಸೆ.26: ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ (Cauvery Water Dispute). ಇದರಿಂದ ರೊಚ್ಚಿಗೆದ್ದ ರೈತರು, ಕನ್ನಡ ಪರ ಸಂಘಟನೆಗಳು ಬಂದು ತೊಟ್ಟು ನೀರು ಕೂಡ ಬಿಡಬಾರದು ಎಂದು ಆಕ್ರೋಶ ಹೊರ ಹಾಕಿ ಬೆಂಗಳೂರು ಬಂದ್ (Bengaluru Bandh) ಮಾಡಿ ಪ್ರತಿಭಟನೆ ನಡೆಸಿವೆ. ಆದರೆ ಮತ್ತೊಂದೆಡೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Bengaluru) ಖಾಲಿ ಖಾಲಿಯಾಗಿದ್ದು ಬಂದ್ ಎಫೆಕ್ಟ್​ನಿಂದಾಗಿ ಹೊರ ರಾಜ್ಯಗಳಿಂದ ಆಗಮಿಸಬೇಕಿದ್ದ ವಿಮಾನಗಳು ರದ್ದಾಗಿವೆ. ಪ್ರಯಾಣಿಕರಿಲ್ಲದ ಕಾರಣ ಅನೇಕ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ (Flight Cancel).

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ತಮ್ಮ ಪ್ಲ್ಯಾನ್​ಗಳನ್ನು ಬದಲಾಯಿಸಿ ವಿಮಾನಯಾನವನ್ನು ಮುಂದೂಡಿದ್ದಾರೆ. ಇನ್ನು ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಬೆಳಗ್ಗೆ ಕೆಂಪೇಗೌಡ ಏರ್ಪೋಟ್ ಗೆ ಆಗಮಿಸಬೇಕಿದ್ದ ವಿಮಾನಗಳು ಬಂದ್ ಹಿನ್ನೆಲೆ ಬಂದಿಲ್ಲ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಸಿದ್ದರಾಮಯ್ಯ, ಹೆಚ್​ಡಿ ದೇವೇಗೌಡ ಹೇಳಿದ್ದಿಷ್ಟು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕನ ಅಳಲು

ಇನ್ನು ಮತ್ತೊಂದೆಡೆ ಕ್ಯಾಬ್ ಚಾಲಕ ಲೋಕೇಶ್ ಅಳಲು ತೋಡಿಕೊಂಡಿದ್ದಾರೆ. ರಾತ್ರಿ ಒಂದು ಗಂಟೆಯಿಂದ ಪ್ರಯಾಣಿಕರಿಗಾಗಿ ಕಾಯುತ್ತಿದ್ದೇನೆ. ಬೆಳ್ಳಗ್ಗೆಯಿಂದ ಒಂದೇ ಒಂದು ಡ್ರಾಪ್‌ ಮಾತ್ರ ಸಿಕ್ಕಿದೆ. ಬಂದ್‌ ಹಿನ್ನೆಲೆ ಪ್ರಯಾಣಿಕರು ಬರ್ತಿಲ್ಲ. ಪ್ಲೈಟ್‌ಗಳು ಇವೆ ಆದರೆ ಜನರು ಬರ್ತಿಲ್ಲ ಎಂದು ಹೆಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​