ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು
ಕೆಂಪೇಗೌಡ ವಿಮಾನ ನಿಲ್ದಾಣ
Edited By: ಆಯೇಷಾ ಬಾನು

Updated on: Sep 26, 2023 | 12:45 PM

ಬೆಂಗಳೂರು, ಸೆ.26: ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ (Cauvery Water Dispute). ಇದರಿಂದ ರೊಚ್ಚಿಗೆದ್ದ ರೈತರು, ಕನ್ನಡ ಪರ ಸಂಘಟನೆಗಳು ಬಂದು ತೊಟ್ಟು ನೀರು ಕೂಡ ಬಿಡಬಾರದು ಎಂದು ಆಕ್ರೋಶ ಹೊರ ಹಾಕಿ ಬೆಂಗಳೂರು ಬಂದ್ (Bengaluru Bandh) ಮಾಡಿ ಪ್ರತಿಭಟನೆ ನಡೆಸಿವೆ. ಆದರೆ ಮತ್ತೊಂದೆಡೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Bengaluru) ಖಾಲಿ ಖಾಲಿಯಾಗಿದ್ದು ಬಂದ್ ಎಫೆಕ್ಟ್​ನಿಂದಾಗಿ ಹೊರ ರಾಜ್ಯಗಳಿಂದ ಆಗಮಿಸಬೇಕಿದ್ದ ವಿಮಾನಗಳು ರದ್ದಾಗಿವೆ. ಪ್ರಯಾಣಿಕರಿಲ್ಲದ ಕಾರಣ ಅನೇಕ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ (Flight Cancel).

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ತಮ್ಮ ಪ್ಲ್ಯಾನ್​ಗಳನ್ನು ಬದಲಾಯಿಸಿ ವಿಮಾನಯಾನವನ್ನು ಮುಂದೂಡಿದ್ದಾರೆ. ಇನ್ನು ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಬೆಳಗ್ಗೆ ಕೆಂಪೇಗೌಡ ಏರ್ಪೋಟ್ ಗೆ ಆಗಮಿಸಬೇಕಿದ್ದ ವಿಮಾನಗಳು ಬಂದ್ ಹಿನ್ನೆಲೆ ಬಂದಿಲ್ಲ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಸಿದ್ದರಾಮಯ್ಯ, ಹೆಚ್​ಡಿ ದೇವೇಗೌಡ ಹೇಳಿದ್ದಿಷ್ಟು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕನ ಅಳಲು

ಇನ್ನು ಮತ್ತೊಂದೆಡೆ ಕ್ಯಾಬ್ ಚಾಲಕ ಲೋಕೇಶ್ ಅಳಲು ತೋಡಿಕೊಂಡಿದ್ದಾರೆ. ರಾತ್ರಿ ಒಂದು ಗಂಟೆಯಿಂದ ಪ್ರಯಾಣಿಕರಿಗಾಗಿ ಕಾಯುತ್ತಿದ್ದೇನೆ. ಬೆಳ್ಳಗ್ಗೆಯಿಂದ ಒಂದೇ ಒಂದು ಡ್ರಾಪ್‌ ಮಾತ್ರ ಸಿಕ್ಕಿದೆ. ಬಂದ್‌ ಹಿನ್ನೆಲೆ ಪ್ರಯಾಣಿಕರು ಬರ್ತಿಲ್ಲ. ಪ್ಲೈಟ್‌ಗಳು ಇವೆ ಆದರೆ ಜನರು ಬರ್ತಿಲ್ಲ ಎಂದು ಹೆಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us