AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸೈಟ್ ಖರೀದಿ ಮಾಡುವವರೇ ಎಚ್ಚರ: ಕೆಲವರು ಹೀಗೂ ಯಾಮಾರಿಸ್ತಾರೆ ಹುಷಾರ್!

ಯೂಟ್ಯೂಬ್ ಜಾಹೀರಾತು ನಂಬಿ ನೆಲಮಂಗಲದಲ್ಲಿ ಸೈಟ್ ಖರೀದಿಸಿದ ದಂಪತಿ 2.5 ಲಕ್ಷ ವಂಚನೆಗೆ ಒಳಗಾಗಿದ್ದಾರೆ. SRS ಪ್ರಮೋಟರ್ಸ್ ಎಂಬ ಕಂಪನಿಯ ಜಾಹೀರಾತು ನೋಡಿ ಸೈಟ್ ಬುಕ್ ಮಾಡಿದ್ದ ಅವರಿಗೆ ಒಪ್ಪಂದ ಮಾಡಿಕೊಡದೆ ಹಣ ಪಡೆದು ವಂಚಿಸಲಾಗಿದೆ. ಪೊಲೀಸ್ ದೂರು ದಾಖಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ದಂಪತಿ ಆರೋಪಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಸೈಟ್ ಖರೀದಿ ಮಾಡುವವರೇ ಎಚ್ಚರ: ಕೆಲವರು ಹೀಗೂ ಯಾಮಾರಿಸ್ತಾರೆ ಹುಷಾರ್!
ಮೋಸ ಹೋದ ದಂಪತಿ
ಗಂಗಾಧರ​ ಬ. ಸಾಬೋಜಿ
|

Updated on: Jul 06, 2025 | 12:42 PM

Share

ನೆಲಮಂಗಲ, ಜುಲೈ 06: ನೀವು ಬೆಂಗಳೂರು ಹೊರವಲಯದಲ್ಲಿ ಸೈಟ್ (site) ಖರೀದಿಸುವ ಪ್ಲ್ಯಾನ್​​ ನಲ್ಲಿದ್ದೀರಾ? ಹಾಗಿದ್ದರೆ ಎಚ್ಚರವಾಗಿರಿ. ಜಾಹಿರಾತುಗಳನ್ನು ನಂಬಿದರೆ ಹಣ ಕಳೆದುಕೊಳ್ಳುವುದಂತೂ ಪಕ್ಕಾ. ಅದರಲ್ಲೂ ಯೂಟ್ಯೂಬ್​ನಲ್ಲಿ ಬರುವ ಜಾಹೀರಾತು ನಂಬಿ ಮೋಸ ಹೋಗಬೇಡಿ. ನಿಮ್ಮ ಬಳಿ ಹಣ ದೋಚಲು ದೊಡ್ಡ ದೊಡ್ಡ ಪ್ರೊಮೋಟರ್ಸ್​ಗಳೆ ಅಡ್ಡದಾರಿ ಹಿಡಿದಿದ್ದಾರೆ. ಇದೇ ಜಾಹೀರಾತು ನೋಡಿ ಓರ್ವ ದಂಪತಿ (Couple) ಲಕ್ಷಾಂತರ ರೂ ಹಣ ಕಳೆದುಕೊಂಡಿರುವಂತಹ ಘಟನೆ ನಡೆದಿದೆ.

ಯೂಟ್ಯೂಬ್ ಜಾಹೀರಾತು ನೋಡಿ ಮೋಸ ಹೋದ ದಂಪತಿ

ಪ್ರಕಾಶ್ ಹಾಗೂ ಚೇತನ ಎಂಬ ದಂಪತಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಮಂಜುನಾಥ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಮಕ್ಕಳ ಭವಿಷ್ಯಕ್ಕೆಂದು ಬೆಂಗಳೂರಿನ ಹೊರವಲಯದಲ್ಲಿ ದುಡಿದ ಹಣದಲ್ಲಿ ಕೂಡಿಟ್ಟ ಅಲ್ವಸಲ್ಪ ಹಣದಲ್ಲಿ ಸೈಟ್ ಖರೀದಿಗೆ ಮುಂದಾಗಿದ್ದರು. ಈವೇಳೆ ಯೂಟ್ಯೂಬ್ ನಲ್ಲಿ ಎಸ್​ಆರ್​ಎಸ್​​ ಪ್ರೊಮೋಟರ್ಸ್​ನ ಜಾಹೀರಾತು ನೋಡಿದ್ದಾರೆ. ನೆಲಮಂಗಲದ ರಿದ್ದಿ ಸಿದ್ದಿ ಲೇಔಟ್ ನಲ್ಲಿ 50 ಸಾವಿರ ರೂ ಅಡ್ವಾನ್ಸ್ ನೀಡಿ ಸೈಟ್ ಕೂಡ ಬ್ಲಾಕ್ ಮಾಡಿಸಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ: ಅಧ್ಯಕ್ಷೆ ಸೀರೆ ಎಳೆದು ಹಲ್ಲೆ ಆರೋಪ

ಇದನ್ನೂ ಓದಿ
Image
ಹಾಸನದಲ್ಲಿ ಹೃದಯಾಘಾತ: ಮಕ್ಕಳಿಗೆ ಆರೋಗ್ಯ ತಪಾಸಣೆಗೆ ರಾಜಣ್ಣ ಸೂಚನೆ
Image
ಡೆತ್​​ ನೋಟ್ ಬರೆದಿಟ್ಟು ಲಾಡ್ಜ್​​ನಲ್ಲಿ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆ!
Image
ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ:ಸೀರೆ ಎಳೆದು ಹಲ್ಲೆ ಆರೋಪ
Image
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ

ಇನ್ನು 2 ಲಕ್ಷ ರೂ. ಹಣ ಕೊಟ್ಟಿದ್ದ ದಂಪತಿಗೆ ಅಗ್ರಿಮೆಂಟ್ ಮಾಡಿಕೊಡದೇ ಕೇವಲ ಪ್ರೊಮೋಟರ್ಸ್ ಕಂಪನಿಯ ಲೆಟರ್ ಹೆಡ್ ಮಾತ್ರ ಕೊಟ್ಟಿದ್ದಾರೆ. ಇನ್ನೂ ಸೈಟ್ ರಿಜಿಸ್ಟರ್​ಗೆ ಹೋದರೆ ಓನರ್ ವಿದೇಶದಲ್ಲಿದ್ದಾರೆ ಎಂದು ಒಂದು ವರ್ಷಗಳ ಕಾಲ ಮುಂದೂಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅಪಮಾನ: ಇಬ್ಬರು ಕಿಡಿಗೇಡಿಗಳು ಅಂದರ್, ಪರಿಸ್ಥಿತಿ ತಿಳಿ

ಬಳಿಕ ವಂಚನೆಗೊಳಗಾಗಿರುವುದು ಗೊತ್ತಾಗಿ ದಂಪತಿ ಮಾದನಾಯಕನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಯಾವುದೇ ಕ್ರಮವಾಗಿಲ್ಲ ಎಂದು ಪ್ರಕಾಶ್​ ಪತ್ನಿ ಚೇತನ ಅವರು ಹೇಳಿದ್ದಾರೆ.  ಒಟ್ಟಿನಲ್ಲಿ ನಗರದ ಹೊರವಲಯದಲ್ಲಿ ಸೈಟ್ ಖರೀದಿಸಿ ಮನೆ ಕಟ್ಟುವ ಕನಸು ಕಂಡವರ ಕನಸು ಇಂಥ ಪ್ರೊಮೋಟರ್ಸ್​ಗಳ ಹಾವಳಿಯಿಂದ ಕನಸಾಗೆ ಉಳಿದುಕೊಂಡಿದೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು