AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸೈಟ್ ಖರೀದಿ ಮಾಡುವವರೇ ಎಚ್ಚರ: ಕೆಲವರು ಹೀಗೂ ಯಾಮಾರಿಸ್ತಾರೆ ಹುಷಾರ್!

ಯೂಟ್ಯೂಬ್ ಜಾಹೀರಾತು ನಂಬಿ ನೆಲಮಂಗಲದಲ್ಲಿ ಸೈಟ್ ಖರೀದಿಸಿದ ದಂಪತಿ 2.5 ಲಕ್ಷ ವಂಚನೆಗೆ ಒಳಗಾಗಿದ್ದಾರೆ. SRS ಪ್ರಮೋಟರ್ಸ್ ಎಂಬ ಕಂಪನಿಯ ಜಾಹೀರಾತು ನೋಡಿ ಸೈಟ್ ಬುಕ್ ಮಾಡಿದ್ದ ಅವರಿಗೆ ಒಪ್ಪಂದ ಮಾಡಿಕೊಡದೆ ಹಣ ಪಡೆದು ವಂಚಿಸಲಾಗಿದೆ. ಪೊಲೀಸ್ ದೂರು ದಾಖಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ದಂಪತಿ ಆರೋಪಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಸೈಟ್ ಖರೀದಿ ಮಾಡುವವರೇ ಎಚ್ಚರ: ಕೆಲವರು ಹೀಗೂ ಯಾಮಾರಿಸ್ತಾರೆ ಹುಷಾರ್!
ಮೋಸ ಹೋದ ದಂಪತಿ
ಗಂಗಾಧರ​ ಬ. ಸಾಬೋಜಿ
|

Updated on: Jul 06, 2025 | 12:42 PM

Share

ನೆಲಮಂಗಲ, ಜುಲೈ 06: ನೀವು ಬೆಂಗಳೂರು ಹೊರವಲಯದಲ್ಲಿ ಸೈಟ್ (site) ಖರೀದಿಸುವ ಪ್ಲ್ಯಾನ್​​ ನಲ್ಲಿದ್ದೀರಾ? ಹಾಗಿದ್ದರೆ ಎಚ್ಚರವಾಗಿರಿ. ಜಾಹಿರಾತುಗಳನ್ನು ನಂಬಿದರೆ ಹಣ ಕಳೆದುಕೊಳ್ಳುವುದಂತೂ ಪಕ್ಕಾ. ಅದರಲ್ಲೂ ಯೂಟ್ಯೂಬ್​ನಲ್ಲಿ ಬರುವ ಜಾಹೀರಾತು ನಂಬಿ ಮೋಸ ಹೋಗಬೇಡಿ. ನಿಮ್ಮ ಬಳಿ ಹಣ ದೋಚಲು ದೊಡ್ಡ ದೊಡ್ಡ ಪ್ರೊಮೋಟರ್ಸ್​ಗಳೆ ಅಡ್ಡದಾರಿ ಹಿಡಿದಿದ್ದಾರೆ. ಇದೇ ಜಾಹೀರಾತು ನೋಡಿ ಓರ್ವ ದಂಪತಿ (Couple) ಲಕ್ಷಾಂತರ ರೂ ಹಣ ಕಳೆದುಕೊಂಡಿರುವಂತಹ ಘಟನೆ ನಡೆದಿದೆ.

ಯೂಟ್ಯೂಬ್ ಜಾಹೀರಾತು ನೋಡಿ ಮೋಸ ಹೋದ ದಂಪತಿ

ಪ್ರಕಾಶ್ ಹಾಗೂ ಚೇತನ ಎಂಬ ದಂಪತಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಮಂಜುನಾಥ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಮಕ್ಕಳ ಭವಿಷ್ಯಕ್ಕೆಂದು ಬೆಂಗಳೂರಿನ ಹೊರವಲಯದಲ್ಲಿ ದುಡಿದ ಹಣದಲ್ಲಿ ಕೂಡಿಟ್ಟ ಅಲ್ವಸಲ್ಪ ಹಣದಲ್ಲಿ ಸೈಟ್ ಖರೀದಿಗೆ ಮುಂದಾಗಿದ್ದರು. ಈವೇಳೆ ಯೂಟ್ಯೂಬ್ ನಲ್ಲಿ ಎಸ್​ಆರ್​ಎಸ್​​ ಪ್ರೊಮೋಟರ್ಸ್​ನ ಜಾಹೀರಾತು ನೋಡಿದ್ದಾರೆ. ನೆಲಮಂಗಲದ ರಿದ್ದಿ ಸಿದ್ದಿ ಲೇಔಟ್ ನಲ್ಲಿ 50 ಸಾವಿರ ರೂ ಅಡ್ವಾನ್ಸ್ ನೀಡಿ ಸೈಟ್ ಕೂಡ ಬ್ಲಾಕ್ ಮಾಡಿಸಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ: ಅಧ್ಯಕ್ಷೆ ಸೀರೆ ಎಳೆದು ಹಲ್ಲೆ ಆರೋಪ

ಇದನ್ನೂ ಓದಿ
Image
ಹಾಸನದಲ್ಲಿ ಹೃದಯಾಘಾತ: ಮಕ್ಕಳಿಗೆ ಆರೋಗ್ಯ ತಪಾಸಣೆಗೆ ರಾಜಣ್ಣ ಸೂಚನೆ
Image
ಡೆತ್​​ ನೋಟ್ ಬರೆದಿಟ್ಟು ಲಾಡ್ಜ್​​ನಲ್ಲಿ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆ!
Image
ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ:ಸೀರೆ ಎಳೆದು ಹಲ್ಲೆ ಆರೋಪ
Image
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ

ಇನ್ನು 2 ಲಕ್ಷ ರೂ. ಹಣ ಕೊಟ್ಟಿದ್ದ ದಂಪತಿಗೆ ಅಗ್ರಿಮೆಂಟ್ ಮಾಡಿಕೊಡದೇ ಕೇವಲ ಪ್ರೊಮೋಟರ್ಸ್ ಕಂಪನಿಯ ಲೆಟರ್ ಹೆಡ್ ಮಾತ್ರ ಕೊಟ್ಟಿದ್ದಾರೆ. ಇನ್ನೂ ಸೈಟ್ ರಿಜಿಸ್ಟರ್​ಗೆ ಹೋದರೆ ಓನರ್ ವಿದೇಶದಲ್ಲಿದ್ದಾರೆ ಎಂದು ಒಂದು ವರ್ಷಗಳ ಕಾಲ ಮುಂದೂಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅಪಮಾನ: ಇಬ್ಬರು ಕಿಡಿಗೇಡಿಗಳು ಅಂದರ್, ಪರಿಸ್ಥಿತಿ ತಿಳಿ

ಬಳಿಕ ವಂಚನೆಗೊಳಗಾಗಿರುವುದು ಗೊತ್ತಾಗಿ ದಂಪತಿ ಮಾದನಾಯಕನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಯಾವುದೇ ಕ್ರಮವಾಗಿಲ್ಲ ಎಂದು ಪ್ರಕಾಶ್​ ಪತ್ನಿ ಚೇತನ ಅವರು ಹೇಳಿದ್ದಾರೆ.  ಒಟ್ಟಿನಲ್ಲಿ ನಗರದ ಹೊರವಲಯದಲ್ಲಿ ಸೈಟ್ ಖರೀದಿಸಿ ಮನೆ ಕಟ್ಟುವ ಕನಸು ಕಂಡವರ ಕನಸು ಇಂಥ ಪ್ರೊಮೋಟರ್ಸ್​ಗಳ ಹಾವಳಿಯಿಂದ ಕನಸಾಗೆ ಉಳಿದುಕೊಂಡಿದೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ