ಬೆಂಗಳೂರು: ಕಾರ್ ಪಾರ್ಕಿಂಗ್​ಗೆ ಅಡ್ಡಿಯಾಗಿದೆ ಅಂತ ಮರ ಕಡಿಸಿದ ಮನೆ ಮಾಲೀಕ

Edited By: ವಿವೇಕ ಬಿರಾದಾರ

Updated on: Nov 08, 2024 | 8:28 AM

ಬೆಂಗಳೂರಿನ ಮಲ್ಲಸಂದ್ರದ ಮಾತಾಶ್ರೀ ಬಡಾವಣೆಯಲ್ಲಿನ ಮನೆಯೊಂದರ ಮುಂದೆ ಬೃಹತ್​ ಗಾತ್ರದ ಮರ ಇತ್ತು. ಮರ ಕಾರ್​ ಪಾರ್ಕಿಂಗ್​​ಗೆ ಅಡ್ಡಿಯಾಗುತ್ತೆ ಅಂತ ಮನೆ ಮಾಲೀಕ ಅರಣ್ಯ ಇಲಾಖೆ ಗುತ್ತಿಗೆದಾರನ ಮೂಲಕ ಆ ಮರವನ್ನು ಕಡಿಸಿದ್ದಾನೆ. ಸದ್ಯ ಗುತ್ತಿಗೆದಾರ ಮತ್ತು ಮನೆ ಮಾಲೀಕನ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು, ನವೆಂಬರ್​​ 08: ಕಾರ್ ಪಾರ್ಕಿಂಗ್ ಅಡ್ಡಿಯಾಗಿದೆ ಅಂತ ಮರ ಕಡಿಸಿದ ಮನೆ ಮಾಲಿಕ ಹಾಗೂ ಗುತ್ತಿಗೆದಾರನ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ (Bengaluru) ಮಲ್ಲಸಂದ್ರದ ಮಾತಾಶ್ರೀ ಬಡಾವಣೆಯಲ್ಲಿನ ಪ್ರದೀಪ್ ಎಂಬುವರ ಮನೆಯ ಮುಂದೆ 30 ಅಡಿ ಎತ್ತರದ ಮರ ಇತ್ತು. ಈ ಮರ ಕಾರ್​ ಪಾರ್ಕಿಂಗ್​ಗೆ ಅಡ್ಡಿಯಾಗುತ್ತದೆ ಅಂತ ಮನೆ ಮಾಲೀಕ ಅರಣ್ಯ ಇಲಾಖೆಯ ಗುತ್ತಿಗೆದಾರ ಕುಮಾರಸ್ವಾಮಿ ಅವರಿಗೆ ಹಣ ನೀಡಿ ಮರ ಕಡಿಸಿದ್ದಾನೆ.

ಮರವನ್ನು ತುಂಡು ತುಂಡಾಗಿಸಿ ಸಾಗಿಸುವ ವೇಳೆ ಶ್ರೀರಾಮಸೇನೆ ಕಾರ್ಯಕರ್ತ ಅಮರನಾಥ ತಡೆದಿದ್ದಾರೆ. ಬಳಿಕ, ಶ್ರೀರಾಮ ಸೇನೆ ಕಾರ್ಯಕರ್ತ ಅಮರನಾಥ ಮತ್ತು ಪ್ರದೀಪ ಮನೆಯ ಅಕ್ಕಪಕ್ಕದವರು ದಾಸರಹಳ್ಳಿ ವಲಯ ಅರಣ್ಯ ಇಲಾಖೆ ಅಧಿಕಾರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮನೆ ಮಾಲಿಕ ಹಾಗೂ ಗುತ್ತಿಗೆದಾರನ ವಿರುದ್ಧ ದೂರು ದಾಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More