ಬೆಂಗಳೂರು: ಫ್ರೀಫೈರ್ ಗೇಮ್ಗೆ ಅಡಿಕ್ಟ್! ಅಕ್ಕನ ಮಗನನ್ನೇ ಕೊಂದ ಮಾವ
ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದ 14 ವರ್ಷದ ಬಾಲಕನನ್ನು ಆತನ ಮಾವನೇ ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್ನಲ್ಲಿ ನಡೆದಿದೆ. ಸದ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ನೆಲಮಂಗಲ, ಆಗಸ್ಟ್ 08: ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ (kill) ಮಾಡಿರುವಂತಹ ಘಟನೆ ಬೆಂಗಳೂರಿನ (bangaluru) ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್ನಲ್ಲಿ ನಡೆದಿದೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು ಬಂಧಿಸಿದ್ದಾರೆ. ಮೃತ ಬಾಲಕ ನಾಗಪ್ರಸಾದ್ ಸಹೋದರಿ ಶಿಲ್ಪಾ ಮಗ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಡೆದದ್ದೇನು?
ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್ನಲ್ಲಿ ಫ್ರೀಫೈರ್ ಗೇಮ್ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.
ಇದನ್ನೂ ಓದಿ: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ: ಆಕ್ರಮ ಸಂಬಂಧಕ್ಕೆ ಒಪ್ಪದಕ್ಕೆ ಕೃತ್ಯ ಶಂಕೆ
ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್, ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್ನಲ್ಲಿ 3 ದಿನ ಕಾಲಕಳೆದಿದ್ದಾರೆ. ನಂತರ ಸೋಲದೇವನಹಳ್ಳಿ ಠಾಣೆಗೆ ಹೋಗಿ ಶರಣಾಗಿದ್ದಾರೆ.
ಕೌಟುಂಬಿಕ ಕಲಹ: ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು
ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ತಾಲೂಕಿನ ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ. ಪತ್ನಿ ಲಲಿತವ್ವ(55) ಕೊಂದು ಸಿದ್ದಪ್ಪ ಡಬ್ಬಣ್ಣವರ(60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಬಾಲಕನ ಕಿಡ್ನ್ಯಾಪ್-ಕೊಲೆ ಕೇಸ್: ಕೊನೆಗೂ ರಿವೀಲ್ ಆಯ್ತು ಹತ್ಯೆ ರಹಸ್ಯ!
ನಿನ್ನೆ ರಾತ್ರಿ ಗಂಡ ಮತ್ತು ಹೆಂಡತಿ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಈ ವೇಳೆ ಪತಿ ಸಿದ್ದಪ್ಪ ಪತ್ನಿ ಲಲಿತವ್ವರ ಹತ್ಯೆ ಮಾಡಿದ್ದಾರೆ. ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




