Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Airport: ಬೆಂಗಳೂರಿನಿಂದ ವಿಮಾನ ಹತ್ತಬೇಕಾದವಳು ಬಾಂಬ್ ಸ್ಫೋಟದ ಬೆದರಿಕೆ ಹಾಕಿ ಜೈಲುಪಾಲಾದಳು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಲು ವಿಳಂಬವಾಗುತ್ತಿದೆ ಎಂದು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿದ್ದ ಮಹಿಳೆ ನಂತರ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ್ದಾಳೆ. ಸದ್ಯ ಮಹಿಳೆ ಜೈಲುಪಾಲಾಗಿದ್ದಾಳೆ.

Bengaluru Airport: ಬೆಂಗಳೂರಿನಿಂದ ವಿಮಾನ ಹತ್ತಬೇಕಾದವಳು ಬಾಂಬ್ ಸ್ಫೋಟದ ಬೆದರಿಕೆ ಹಾಕಿ ಜೈಲುಪಾಲಾದಳು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರುImage Credit source: FILE PHOTO
Follow us
TV9 Web
| Updated By: Rakesh Nayak Manchi

Updated on:Feb 05, 2023 | 9:38 PM

ದೇವನಹಳ್ಳಿ: ವಿಮಾನ ಹತ್ತಲು ವಿಳಂಬವಾಗುತ್ತಿದೆ ಎಂದು ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿ ವಿಮಾನ ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ್ದ ಮಹಿಳೆಯನ್ನು ಜೈಲಿಗಟ್ಟಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀ ವಿಮಾನ ನಿಲ್ದಾಣದಲ್ಲಿ (Kempe Gowda International Airport) ನಡೆದಿದೆ. ಬೆಂಗಳೂರಿನಿಂದ ಕೋಲ್ಕತ್ತಾಗೆ ತೆರಳಬೇಕಿದ್ದ ಕೇರಳದ ಮಹಿಳೆ ಗೇಟ್​ ನಂಬರ್ 6ರಲ್ಲಿ ಕುಳಿತಿದ್ದ ವೇಳೆ ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿದ್ದು, ಬಳಿಕ ಹಲ್ಲೆ ನಡೆಸಿ ಬಾಂಬ್ ಬೆದರಿಕೆ ಹಾಕಿದ್ದಾಳೆ. ಹೀಗಾಗಿ ಮಹಿಳೆಯನ್ನು ಬಂಧಿಸಿದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೇರಳ ಮೂಲದ ಮಹಿಳೆಯೊಬ್ಬಳು ಬೆಂಗಳೂರಿನಿಂದ ವಿಮಾನದ ಮೂಲಕ ಕೋಲ್ಕತ್ತಾಗೆ ತೆರಳವ ನಿಟ್ಟಿನಲ್ಲಿ ಇಂಡಿಗೋ ವಿಮಾನ 6E-445ನಲ್ಲಿ ಟಿಕೆಟ್ ಬುಕ್ ಮಾಡಿದ್ದಳು. ಅದರಂತೆ ನಿನ್ನೆ (ಫೆಬ್ರವರಿ 4 ರಂದು) ಬೋರ್ಡಿಂಗ್​ ಗೇಟ್​ ನಂಬರ್ 6ರಲ್ಲಿ ವಿಮಾನಕ್ಕಾಗಿ ಕಾದುಕುಳಿತ್ತಿದ್ದಳು. ಅದಾಗ್ಯೂ, ವಿಮಾನ ಹತ್ತಲು ವಿಳಂಬವಾಗುತ್ತಿದೆ ನನ್ನನ್ನು ಒಳಗೆಬಿಡಿ ಎಂದು ಸಿಬ್ಬಂದಿಯೊಂದಿಗೆ ಕ್ಯಾತೆ ತೆಗೆಯಲು ಆರಂಭಿಸಿದ್ದಾಳೆ.

ಇದನ್ನೂ ಓದಿ: Kempegowda International Airport: ಜೀನ್ಸ್ ಪ್ಯಾಂಟ್’ನಲ್ಲಿ ಚಿನ್ನದ ಪೇಸ್ಟ್ ಬಚ್ಚಿಟ್ಟಿದ್ದ ಭೂಪ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆರೆ!

ಸಿಬ್ಬಂದಿಯೊಂದಿಗೆ ಕಿರಿಕ್​ ಆರಂಭಿಸಿದ ಮಹಿಳೆ ಭದ್ರತಾ ಪಡೆ ಮೇಲೆ ಹಲ್ಲೆ ನಡೆಸಿದ್ದಾಳೆ. ಅಷ್ಟಾದರೂ ಭದ್ರತಾ ಸಿಬ್ಬಂದಿ ಆಕೆಯನ್ನು ಒಳಗೆಬಿಟ್ಟಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ, ತನ್ನನ್ನು ಬಿಡಲಿಲ್ಲವೆಂದು ಬಾಂಬ್​ ಬೆದರಿಕೆಯೊಡ್ಡಿದ್ದಾಳೆ. ವಿಮಾನದಲ್ಲಿ ಬಾಂಬ್​ ಇಟ್ಟು ಸ್ಫೋಟಿಸುತ್ತೇನೆ. ಎಲ್ಲರೂ ಇಲ್ಲಿಂದ ಹೋಗಿ ಎಂದು ಗೇಟ್ ನಂ.6ರಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಬೆದರಿಸಿದ್ದಾಳೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಆಕೆಯನ್ನು ಜೈಲಿಗಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Sun, 5 February 23

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ