AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೆಂಪೇಗೌಡ ಏರ್​​​ಪೋರ್ಟ್​ಗೆ ಒಂದೇ ವಾರದಲ್ಲಿ 2ನೇ ಬಾರಿಗೆ ಹುಸಿ ಬಾಂಬ್​ ಮೇಲ್ ಬೆದರಿಕೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೇ ವಾರದಲ್ಲಿ ಎರಡನೇ ಬಾರಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಶೌಚಾಲಯದ ಪೈಪ್‌ಲೈನ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ. ಪರಿಶೀಲನೆ ಬಳಿಕ ಇವು ಹುಸಿ ಬೆದರಿಕೆ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು ಕೆಂಪೇಗೌಡ ಏರ್​​​ಪೋರ್ಟ್​ಗೆ ಒಂದೇ ವಾರದಲ್ಲಿ 2ನೇ ಬಾರಿಗೆ ಹುಸಿ ಬಾಂಬ್​ ಮೇಲ್ ಬೆದರಿಕೆ
ಹುಸಿ ಬಾಂಬ್​ ಇ-ಮೇಲ್
ನವೀನ್ ಕುಮಾರ್ ಟಿ
| Edited By: |

Updated on:Jun 19, 2025 | 11:52 AM

Share

ಬೆಂಗಳೂರು, ಜೂನ್​ 19: ಕಳೆದು ಒಂದು ತಿಂಗಳಿಂದ ಕರ್ನಾಟಕದ ಹಲವೆಡೆ ಕಿಡಿಗೇಡಿಗಳಿಂದ ಹುಸಿ ಬಾಂಬ್​ ಬೆದರಿಕೆಯ ಇ-ಮೇಲ್​ಗಳು (Bomb threat) ಬಂದಿವೆ. ಇತ್ತೀಚೆಗೆ ಹಾಸನದ ಮೂರು ಖಾಸಗಿ ಶಾಲೆಗೆ, ಮೈಸೂರಿನ ಖಾಸಗಿ ಶಾಲೆಗೆ, ಬೆಂಗಳೂರಿನ ಹಲವು ಶಾಲೆಗಳು ಮತ್ತು ಪ್ರತಿಷ್ಠಿತ ಹೋಟೆಲ್​​ಗಳಿಗೂ ಬಾಂಬ್​​ ಬೆದರಿಕೆ ಬಂದಿತ್ತು. ಅಷ್ಟೇ ಅಲ್ಲದೆ ಒಂದೇ ವಾರದಲ್ಲಿ ಎರಡೆರಡು ಬಾರಿಗೆ ಕೆಂಪೇಗೌಡ ಏರ್​​​ಪೋರ್ಟ್​ಗೆ (Kempegowda Airport) ಹುಸಿ ಬಾಂಬ್​ ಮೇಲ್​ ಬಂದಿದೆ. ಹೀಗಾಗಿ ಜನರಲ್ಲಿ ಆತಂಕ ಶುರುವಾಗಿದೆ.

ಒಂದೇ ವಾರದಲ್ಲಿ ಎರಡನೇ ಬಾರಿ ಹುಸಿ ಬಾಂಬ್​

ನಗರದಲ್ಲಿ ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಹುಸಿ ಬಾಂಬ್ ಮೇಲ್​ಗಳು ಮತ್ತೆ ಆಕ್ಟೀವ್​ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಮತ್ತೊಂದು ಹುಸಿ ಬಾಂಬ್​ ಮೇಲ್​ ಬಂದಿದೆ. ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್​ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್​ ಬೆದರಿಕೆ ಇ-ಮೇಲ್ ಬಂದಿತ್ತು.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಮೈಸೂರಿನ ಖಾಸಗಿ ವಸತಿ ಶಾಲೆಗೆ ಬಾಂಬ್​ ಬೆದರಿಕೆ

ಇದನ್ನೂ ಓದಿ
Image
ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್
Image
ಹಾಸನ: ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ
Image
ಪಾಸ್​​ಪೋರ್ಟ್​ ಕಚೇರಿ, ಸಿಎಂ ಮನೆಗೆ ಬಾಂಬ್ ಇಡುವುದಾಗಿ ಬೆದರಿಕೆ ಸಂದೇಶ
Image
ಬೆಂಗಳೂರಿನ ಪ್ರತಿಷ್ಠಿತ ​ಹೋಟೆಲ್​ಗೆ ಬಾಂಬ್ ಬೆದರಿಕೆ ಸಂದೇಶ

ಏರ್​​ಪೋರ್ಟ್​ ಭದ್ರತಾ ಪಡೆಗೆ ಮೇಲ್​ ಬಂದಿದ್ದು, ‘ಉಗ್ರ ಅಜ್ಮಲ್ ಕಸಬ್​ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್​ಲೈನ್​ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್​ ಎ ಫೇಲ್​​ ಆದರೆ ಪ್ಲ್ಯಾನ್ ಬಿ’ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.

ಇದನ್ನೂ ಓದಿ: ಹಾಸನ: ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

ಬೆದರಿಕೆ ಮೇಲ್ ಹಿನ್ನೆಲೆ‌ ಎಲ್ಲೆಡೆ ಪರಿಶೀಲನೆ ಮಾಡಿದ ಅಧಿಕಾರಿಗಳು ಬಳಿಕ ಇದೊಂದು ಹುಸಿ ಬಾಂಬ್ ಮೇಲ್ ಎಂದು ತಿಳಿಸಿದ್ದಾರೆ. ಸದ್ಯ ಕೆಂಪೇಗೌಡ ಏರ್​​​ಪೋರ್ಟ್ ಪೊಲೀಸರು ಮತ್ತು ಅಧಿಕಾರಿಗಳಿಗೆ ಈ ಹುಸಿ‌ ಬಾಂಬ್ ಮೇಲ್ ಮತ್ತು ಕರೆಗಳು ತಲೆ ನೋವಾಗಿದ್ದು, ಹುಸಿ‌ ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:51 am, Thu, 19 June 25

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!