ಬೆಂಗಳೂರು ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್ ಬಿಡುಗಡೆ: ಇಲ್ಲಿದೆ ವಿಡಿಯೋ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಗ್ರೀನ್ ರಸ್ತೆಗಳು, ಕಲರ್ ಪುಲ್ ಹೈಟೆಕ್ ಟರ್ಮಿನಲ್​ನಿಂದ ಹೆಸರುವಾಸಿ. ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್​ವೊಂದು ಬಿಡುಗಡೆಯಾಗಿದೆ. ನೂತನ ಏರ್ಪೋಟ್ ಹಾಡಿಗೆ ಸಾರ್ವಜನಿಕರು ಫುಲ್ ಫಿದಾ ಆಗಿದ್ದಾರೆ. ಹಾಗಾದರೆ ಅಷ್ಟಕ್ಕೂ ಹೇಗಿದೆ ಆ ಹಾಡು, ಯಾರು ರಚಿಸಿದ್ದು ತಿಳಿಯಲು ಈ ಸ್ಟೋರಿ ಓದಿ.

ಬೆಂಗಳೂರು ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್ ಬಿಡುಗಡೆ: ಇಲ್ಲಿದೆ ವಿಡಿಯೋ
ಬೆಂಗಳೂರು ವಿಮಾನ ನಿಲ್ದಾಣ
Edited By: ವಿವೇಕ ಬಿರಾದಾರ

Updated on: Jul 21, 2024 | 8:29 AM

ಬೆಂಗಳೂರು, ಜುಲೈ 21: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ದ ಆ್ಯಂಥಮ್ ಸಾಂಗ್ (Anthem Song) ಬಿಡುಗಡೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ತನ್ನ ವಿಶಿಷ್ಟ ಸೇವೆ ಮತ್ತು ಸೌಂದರ್ಯದಿಂದ ದೇಶ ವಿದೇಶಗಳಲ್ಲಿ ಪ್ರಸಿದ್ಧಿಯಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಚಾಲ್ತಿಯಲ್ಲಿರುವ ಸೇವಗಳು ಮತ್ತು ಗಾರ್ಡನ್ ಟರ್ಮಿನಲ್​ನ ಸೌಂದರ್ಯವನ್ನ 2 ನಿಮಿಷ 30 ಸೆಕೆಂಡ್​​ಗಳ ವಿಡಿಯೋದಲ್ಲಿ ಚಿತ್ರಿಕರಿಸಿದ್ದು, ಹೊಸ ಹಾಡನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಬಿಡುಗಡೆ ಮಾಡಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಜಪ್ರಿಯತೆ ಗಳಿಸಿರುವ ಪ್ರಸಿದ್ಧ ಗಾಯಕ ರಿಕಿ ಕೇಜ್ (Ricky Kej) ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆ್ಯಂಥಮ್ ಹಾಡನ್ನ ಹಾಡಿದ್ದಾರೆ. ಸ್ವತಃ ರಿಕಿ ಕೇಜ್ ಅವರೇ ಹಾಡನ್ನ ಬಿಡುಗಡೆ ಮಾಡಿದರು. ಹಾಡಿಗೆ ಪ್ರಯಾಣಿಕರು ಫುಲ್ ಫಿದಾ ಆಗಿದ್ದಾರೆ.


ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ ಗಾಯಕ ರಿಕಿ ಕೇಜ್ “ಕೆಂಪೇಗೌಡ ವಿಮಾನ ನಿಲ್ದಾಣ ನನಗೆ ಎರಡನೆ ಮನೆ ಇದ್ದಹಾಗೆ. ವಾರಕ್ಕೆ 2 ರಿಂದ 3 ಬಾರಿ ಈ ವಿಮಾನ ನಿಲ್ದಾಣದ ಮೂಲಕ ನಾನು ಪ್ರಯಾಣ ಮಾಡುತ್ತೇನೆ. ಸುಂದರವಾದ ವಿಮಾನ ನಿಲ್ದಾಣ ನಮ್ಮ ಬೆಂಗಳೂರಿನಲ್ಲಿರುವುದು ನಮಗೆ ಖುಷಿಯಾಗಿದೆ. ಜೊತೆಗೆ ಈ ವಿಮಾನ ನಿಲ್ದಾಣಕ್ಕೆ ನಾನು ಹಾಡು ಹಾಡಿರುವುದು ನನಗೆ ಸಂತಸ ತಂದಿದೆ ಅಂತ ತಮ್ಮ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ಸಂಚಾರ​ ಬಂದ್​, ಬದಲಿ ಮಾರ್ಗ ಇಲ್ಲಿದೆ

ಒಟ್ಟಾರೆ ದಿನದಿಂದ ದಿನಕ್ಕೆ ದೇಶ ವಿದೇಶಗಳಲ್ಲಿ ಪರಿಸರ ಕಾಳಜಿ ಮತ್ತು ಅತ್ಯುತ್ತಮ ಸೇವೆಯಿಂದ ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಮತ್ತೊಂದು ವಿಡಿಯೋ ಮೂಲಕ ಸದ್ದು ಮಾಡುತ್ತಿರುವುದು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us