AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (KIA) ACI ASQ ಸಂಸ್ಥೆಯಿಂದ ಮೂರನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪ್ರಯಾಣಿಕರ ಸಮೀಕ್ಷೆಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯನ್ನು ಪಡೆದಿರುವುದಕ್ಕೆ KIA ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ.

ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ
ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ
ನವೀನ್ ಕುಮಾರ್ ಟಿ
| Edited By: |

Updated on:Mar 19, 2025 | 7:43 PM

Share

ದೇವನಹಳ್ಳಿ, ಮಾರ್ಚ್​ 19: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport Bengaluru) 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದುಕೊಂಡಿದೆ. ಆ ಮೂಲಕ ಕೆಐಎಬಿ ಮತ್ತೊಂದು ಗರಿ ಲಭಿಸಿದೆ. ಪ್ರಯಾಣಿಕರ ಸರ್ವೆ ಮೂಲಕ ಮಾಹಿತಿ ಪಡೆದು ACI ASQ ಸಂಸ್ಥೆಯಿಂದ ಪ್ರಶಸ್ತಿ ನೀಡಲಾಗಿದೆ. ಈ‌ ಬಾರಿಯೂ ಕೆಐಎಬಿಗೆ ಪ್ರಶಸ್ತಿ ಬಂದಿದ್ದಕ್ಕೆ ಆಡಳಿತ ಮಂಡಳಿ ಸಂತಸಗೊಂಡಿದೆ.

ಸತತ 3 ವರ್ಷಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ ಸಿಕ್ಕಿದೆ. ಏರ್​ಪೋರ್ಟ್​ನಲ್ಲಿನ ಅತ್ಯುತ್ತಮ, ವೇಗದ ಸೇವೆಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ಇಮಿಗ್ರೇಷನ್, ಕಸ್ಟಮ್ಸ್​, ಹೈಸ್ಪೀಡ್​ ವೈಫೈ, ವೇಗದ ಬ್ಯಾಗೇಜ್, ಲಾಂಜ್, ಸುಗಮ ಮತ್ತು ತೊಂದರೆ ಮುಕ್ತ ಆಗಮನ ದ್ವಾರ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತದೆ.

ಇದನ್ನೂ ಓದಿ
Image
ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24/7 ಸಿಗಲಿದೆ ವೈದ್ಯಕೀಯ ಸೇವೆ
Image
ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ: ಮೂವರ ಬಂಧನ
Image
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
Image
ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್​ನ್ಯೂಸ್​: ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24/7 ಸಿಗಲಿದೆ ವೈದ್ಯಕೀಯ ಸೇವೆ

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಕ್ಸ್​ ಖಾತೆಯಲ್ಲಿ ಮಾಹಿತಿಕೊಂಡಿದ್ದು, ಬಿಎಲ್‌ಆರ್ ವಿಮಾನ ನಿಲ್ದಾಣವನ್ನು ಎಸಿಐ ವರ್ಲ್ಡ್ ಜಾಗತಿಕವಾಗಿ ಆಗಮನಕ್ಕೆ ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಿದೆ. ಆತ್ಮೀಯ ಸ್ವಾಗತ, ಸುಗಮ ಪ್ರಯಾಣಿಕರ ಅನುಭವಗಳು ಮತ್ತು ನಮ್ಮ ಸಿಬ್ಬಂದಿಯ ಸಹಾಯದಿಂದ, ಪ್ರತಿ ಭಾರಿಯೂ ಮನೆಗೆ ಬಂದಂತೆ ಭಾಸವಾಗುವಂತೆ ಮಾಡಲು ನಾವು ಶ್ರಮಿಸಿದ್ದೇವೆ.

ಬಿಎಲ್‌ಆರ್ ಟ್ವೀಟ್​

ನಮ್ಮ ತಂಡ, ಪಾಲುದಾರರು, ಸಿಬ್ಬಂದಿಗಳು ಮತ್ತು ಪ್ರಯಾಣಿಕರಿಲ್ಲದೆ ಈ ಪ್ರಶಸ್ತಿ ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಪ್ರಯಾಣದಲ್ಲಿ ನಮ್ಮನ್ನು ನಂಬಿದ್ದಕ್ಕಾಗಿ ಧನ್ಯವಾದಗಳು ಎಂದು ಬಿಎಲ್‌ಆರ್ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Wed, 19 March 25

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್