AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (KIA) ACI ASQ ಸಂಸ್ಥೆಯಿಂದ ಮೂರನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪ್ರಯಾಣಿಕರ ಸಮೀಕ್ಷೆಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯನ್ನು ಪಡೆದಿರುವುದಕ್ಕೆ KIA ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ.

ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ
ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 19, 2025 | 7:43 PM

ದೇವನಹಳ್ಳಿ, ಮಾರ್ಚ್​ 19: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport Bengaluru) 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದುಕೊಂಡಿದೆ. ಆ ಮೂಲಕ ಕೆಐಎಬಿ ಮತ್ತೊಂದು ಗರಿ ಲಭಿಸಿದೆ. ಪ್ರಯಾಣಿಕರ ಸರ್ವೆ ಮೂಲಕ ಮಾಹಿತಿ ಪಡೆದು ACI ASQ ಸಂಸ್ಥೆಯಿಂದ ಪ್ರಶಸ್ತಿ ನೀಡಲಾಗಿದೆ. ಈ‌ ಬಾರಿಯೂ ಕೆಐಎಬಿಗೆ ಪ್ರಶಸ್ತಿ ಬಂದಿದ್ದಕ್ಕೆ ಆಡಳಿತ ಮಂಡಳಿ ಸಂತಸಗೊಂಡಿದೆ.

ಸತತ 3 ವರ್ಷಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ ಸಿಕ್ಕಿದೆ. ಏರ್​ಪೋರ್ಟ್​ನಲ್ಲಿನ ಅತ್ಯುತ್ತಮ, ವೇಗದ ಸೇವೆಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ಇಮಿಗ್ರೇಷನ್, ಕಸ್ಟಮ್ಸ್​, ಹೈಸ್ಪೀಡ್​ ವೈಫೈ, ವೇಗದ ಬ್ಯಾಗೇಜ್, ಲಾಂಜ್, ಸುಗಮ ಮತ್ತು ತೊಂದರೆ ಮುಕ್ತ ಆಗಮನ ದ್ವಾರ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತದೆ.

ಇದನ್ನೂ ಓದಿ
Image
ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24/7 ಸಿಗಲಿದೆ ವೈದ್ಯಕೀಯ ಸೇವೆ
Image
ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ: ಮೂವರ ಬಂಧನ
Image
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
Image
ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್​ನ್ಯೂಸ್​: ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24/7 ಸಿಗಲಿದೆ ವೈದ್ಯಕೀಯ ಸೇವೆ

ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಕ್ಸ್​ ಖಾತೆಯಲ್ಲಿ ಮಾಹಿತಿಕೊಂಡಿದ್ದು, ಬಿಎಲ್‌ಆರ್ ವಿಮಾನ ನಿಲ್ದಾಣವನ್ನು ಎಸಿಐ ವರ್ಲ್ಡ್ ಜಾಗತಿಕವಾಗಿ ಆಗಮನಕ್ಕೆ ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಿದೆ. ಆತ್ಮೀಯ ಸ್ವಾಗತ, ಸುಗಮ ಪ್ರಯಾಣಿಕರ ಅನುಭವಗಳು ಮತ್ತು ನಮ್ಮ ಸಿಬ್ಬಂದಿಯ ಸಹಾಯದಿಂದ, ಪ್ರತಿ ಭಾರಿಯೂ ಮನೆಗೆ ಬಂದಂತೆ ಭಾಸವಾಗುವಂತೆ ಮಾಡಲು ನಾವು ಶ್ರಮಿಸಿದ್ದೇವೆ.

ಬಿಎಲ್‌ಆರ್ ಟ್ವೀಟ್​

ನಮ್ಮ ತಂಡ, ಪಾಲುದಾರರು, ಸಿಬ್ಬಂದಿಗಳು ಮತ್ತು ಪ್ರಯಾಣಿಕರಿಲ್ಲದೆ ಈ ಪ್ರಶಸ್ತಿ ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಪ್ರಯಾಣದಲ್ಲಿ ನಮ್ಮನ್ನು ನಂಬಿದ್ದಕ್ಕಾಗಿ ಧನ್ಯವಾದಗಳು ಎಂದು ಬಿಎಲ್‌ಆರ್ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Wed, 19 March 25

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು