AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ, ವ್ಯಕ್ತಿ ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿಯಲ್ಲಿ ರಾತ್ರಿ ಹಾಲು ಖರೀದಿಸಲು ಅಂಗಡಿಗೆ ಬಂದಿದ್ದ ಮಹಿಳೆಯನ್ನು ಅಪರಿಚಿತ ವ್ಯಕ್ತಿ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಈ ವೇಳೆ 10 ಜನ ಗುಂಪು ಬಂದು ಮಹಿಳೆಯನ್ನು ಕಾಪಾಡಿ ವ್ಯಕ್ತಿಯನ್ನು ನಗ್ನಗೊಳಿಸಿ ಥಳಿಸಿದ್ದಾರೆ, ಇದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ, ವ್ಯಕ್ತಿ ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
ರಾಮು, ಆನೇಕಲ್​
| Edited By: ಆಯೇಷಾ ಬಾನು|

Updated on:Sep 08, 2024 | 7:50 AM

Share

ಬೆಂಗಳೂರು, ಸೆ.08: ಮಹಿಳೆಯನ್ನು (Woman) ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ 10ಕ್ಕೂ ಹೆಚ್ಚು ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿದ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿ ಬಳಿ ರಾತ್ರಿ ನಡೆದಿದೆ. ಹಾಲು ಖರೀದಿಸಲು ಮಹಿಳೆ ಅಂಗಡಿಗೆ ಬಂದಿದ್ದರು. ಈ ವೇಳೆ ವ್ಯಕ್ತಿಯೋರ್ವ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಆತಂಕಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಈ ವೇಳೆ ಮಹಿಳೆಯ ನೆರವಿಗೆ ಬಂದ ಗ್ರಾಮದ ಯುವಕರ ಗುಂಪು ಕುಡಿದ ನಶೆಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನ ಹಿಡಿದು ಹಲ್ಲೆ ನಡೆಸಿದ್ದಾರೆ. ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದಿದ್ದಾರೆ. ಹಲ್ಲೆ ಮಾಡಿ ಆಟೋದಲ್ಲಿ ಕರೆದೊಯ್ಯುವಾಗ ಪೊಲೀಸರು ಬಂದಿದ್ದು ವ್ಯಕ್ತಿಯನ್ನು ಬನ್ನೇರುಘಟ್ಟ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಗಾಯಾಳು ವ್ಯಕ್ತಿಯನ್ನು ಗೊಟ್ಟಿಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರು: ನಡುರಸ್ತೆಯಲ್ಲಿಯೇ ಖಾಸಗಿ ಬಸ್​ ಕಂಡಕ್ಟರ್​ಗಳ ನಡುವೆ ಹೊಡೆದಾಟ; ವಿಡಿಯೋ ವೈರಲ್​

ಹಲ್ಲೆಗೊಳಗಾದ ವ್ಯಕ್ತಿ ಯಾರು?

ಧಾರವಾಡ ಮೂಲದ ರವಿಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಕಲ್ಕೆರೆ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ ಈತ ಕಳೆದ ರಾತ್ರಿ ಅಂಗಡಿಗೆ ಹಾಲು ತೆಗೆದುಕೊಂಡು ಬರಲು ಹೋಗಿದ್ದ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದ. ಅಲ್ಲಿಯೇ ಇದ್ದ ಗ್ರಾಮದ ಯುವಕರು ಮಹಿಳೆ ನೆರವಿಗೆ ಬಂದಿದ್ದು ಕುಡಿದ ನಶೆಯಲ್ಲಿದ್ದ ರವಿಕುಮಾರನನ್ನು ಹಿಡಿದು ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ನಗ್ನಗೊಳಿಸಿ ಮರ್ಮಾಂಗ ಮತ್ತು ವೃಷಣಕ್ಕೆ ಹೊಡೆದಿದ್ದಾರೆ.

ತಲ್ವಾರ್‌ ಹಿಡ್ಕೊಂಡು ಹೊಡೆದಾಟ

ಕ್ಷುಲ್ಲಕ ಕಾರಣಕ್ಕೆ ತಲ್ವಾರ್‌ನಿಂದ ಯುವಕರು ಹೊಡೆದಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದ ಬಳಿ ನಡೆದಿದೆ. ಓರ್ವ ಯುವಕನ ಕೈ ಬೆರಳು ಕಟ್ ಆಗಿದ್ರೆ, ಮತ್ತೊಬ್ಬನಿಗೆ ಗಾಯವಾಗಿದೆ. ಮಾತಿಗೆ ಮಾತು ಬೆಳೆದು ಅರಳಿಕಟ್ಟಿ ಗ್ರಾಮದ ಯುವಕರು ಹೊಡೆದಾಡಿಕೊಂಡಿದಾರೆ. ಗಾಯಾಳು ಯುವಕರಿಬ್ಬರಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಆರ್ಭಟ, ಜನಜೀವನ ಅಸ್ತವ್ಯಸ್ತ

ಕಲಬುರಗಿ ನಗರದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಡುವಂತಾಯ್ತ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ನಿನ್ನೆ ರಾತ್ರಿ ಮತ್ತೆ ಆರ್ಭಟ ತೋರಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:40 am, Sun, 8 September 24

Follow Us
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು