ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗೆ ಬೆದರಿಸಿ 1 ಕೋಟಿ ರೂಪಾಯಿಗೂ ಹೆಚ್ಚು ಹಣ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್!

ಕಾರಿನಲ್ಲಿದ್ದ ನಾಲ್ವರಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದರು. 1 ಕೋಟಿಗೂ ಹೆಚ್ಚು ಹಣ, ಕಾರು ದರೋಡೆ ಮಾಡಿದ್ದರು. ನೆಲಮಂಗಲ ಉಪ ವಿಭಾಗದಲ್ಲಿ 3 ತಂಡ ರಚಿಸಿ ಪ್ರಕರಣದ ತನಿಖೆ ಮಾಡಲಾಗುತ್ತಿದೆ

ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗೆ ಬೆದರಿಸಿ 1 ಕೋಟಿ ರೂಪಾಯಿಗೂ ಹೆಚ್ಚು ಹಣ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್!
ಬಂಧಿತ ಆರೋಪಿಗಳು
Follow us
| Updated By: sandhya thejappa

Updated on:Apr 21, 2022 | 9:44 AM

ನೆಲಮಂಗಲ: ಚಿನ್ನದ ವ್ಯಾಪಾರಿಗೆ ಬೆದರಿಸಿ ದರೋಡೆ (Robbery) ಮಾಡಿದ್ದ 11 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣೆ ಪೊಲೀಸರು ಕೇರಳದ ರಾಜೀವ್(48), ವಿಷ್ಣುಲಾಲ್(26), ಸನಾಲ್(34), ಜಸೀನ್(28), ರಶೀದ್(25), ಸನಾಫ್(33), ಶಫೀಕ್(31) ಸೇರಿದಂತೆ ಒಟ್ಟು 11 ಆರೋಪಿಗಳನ್ನ ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಗಳಿಂದ ಪೊಲೀಸರು 10 ಲಕ್ಷಕ್ಕೂ ಹೆಚ್ಚು ಹಣ (Money) ಜಪ್ತಿ ಮಾಡಿದ್ದಾರೆ. ಆರೋಪಿಗಳು ಮಾರ್ಚ್ 11ರಂದು ವ್ಯಾಪಾರಿ ಯೋಗೇಶ್ಗೆ ಬೆದರಿಸಿ ದರೋಡೆ ಮಾಡಿದ್ದಾರೆ. ಮಾದವಾರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿತ್ತು.

ಕಾರಿನಲ್ಲಿದ್ದ ನಾಲ್ವರಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದರು. 1 ಕೋಟಿಗೂ ಹೆಚ್ಚು ಹಣ, ಕಾರು ದರೋಡೆ ಮಾಡಿದ್ದರು. ನೆಲಮಂಗಲ ಉಪ ವಿಭಾಗದಲ್ಲಿ 3 ತಂಡ ರಚಿಸಿ ಪ್ರಕರಣದ ತನಿಖೆ ಮಾಡಲಾಗುತ್ತಿದೆ. ಟೋಲ್ ಸಿಸಿಕ್ಯಾಮರಾ, ಟವರ್ ಲೊಕೇಷನ್ ಆಧರಿಸಿ ತನಿಖೆ ನಡೆಸುತ್ತಿದ್ದು, ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಅಂತರರಾಜ್ಯ ಮನೆಗಳ್ಳರು ಬಂಧನ: ರಾಜರಾಜೇಶ್ವರಿ ನಗರ ಪೊಲೀಸರು ಅಂತರರಾಜ್ಯ ಮನೆಗಳ್ಳರನ್ನ ಬಂಧಿಸಿದ್ದಾರೆ. ಬಿಲಾಲ್ ಮಂಡಲ್, ಸಲೀಂ ರಫೀ, ಮತ್ತು ವಿನೋದ್ ರಾಜ್ ಬಂಧಿತ ಅರೋಪಿಗಳು. ವಿನೋದ್ ರಾಜ್ ಬಿಡದಿ ನಿವಾಸಿ. ಈ ಹಿಂದೆ ಸರಗಳ್ಳತನ ಕೇಸ್​ನಲ್ಲಿ ಅರೆಸ್ಟ್ ಅಗಿದ್ದ. ಜೈಲಿನಲ್ಲಿ ಬಿಲಾಲ್ ಮಂಡಲ್ ಮತ್ತು ಸಲೀಂ ಪರಿಚಯ ಅಗಿದ್ರು.. ನಂತರ ಜೈಲಿನಲ್ಲಿ ಮೂರುವ ಒಳ್ಳೆಯ ಗೆಳೆಯರಾಗಿದ್ರು. ಬಿಲಾಲ್ ಕಡೆಯವರು ವಿನೋದ್​ಗೆ ಬೇಲ್ ಮಾಡಿಸಿಕೊಟ್ಟಿದ್ದ. ನಂತರ  ಬೆಲಾಲ್, ಸಲೀಂ ಮಹಾರಾಷ್ಟ್ರ ತೆರಳಿದ್ರು. ಮಹಾರಾಷ್ಟ್ರದಲ್ಲಿ ಇದ್ದ ಅರೋಪಿಗಳಿಗೆ ವಿನೋದ್ ಮನೆಗಳನ್ನು ಹುಡುಕಿ ಕೊಡುತ್ತಿದ್ದ.

ವಿನೋದ್ ತೋರಿಸಿದ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದರು. ಸದ್ಯ ಪೊಲೀಸರು ಅರೋಪಿಗಳ ಬಳಿ ಇಪ್ಪತ್ತೆಂಟು ಲಕ್ಷ ಮೌಲ್ಯದ ಚಿನ್ನದ ಆಭರಣ, ಒಂಬತ್ತೂವರೆ ಕೆಜಿ ಬೆಳ್ಳಿ ಹಾಗು ಒಂದು ಕಾರು, ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

Health Tips: ಪದೇ ಪದೇ ಆತಂಕಕ್ಕೆ ಒಳಗಾಗುತ್ತೀರಾ? ಅದರಿಂದ ಹೊರಬರೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಯುಎಸ್ ನಲ್ಲಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ, ಕಾರು ಕಸಿದು ಪರಾರಿಯಾದ ಕಳ್ಳ ಕೆಲವೇ ನಿಮಿಷಗಳಲ್ಲಿ ಹೆದ್ದಾರಿ ಅಪಘಾತದಲ್ಲಿ ಸಾವು

Published On - 9:40 am, Thu, 21 April 22

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ