AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು!

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅಸ್ಸಾಂ ಮೂಲದ ನಾಲ್ವರು ಯುವ ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಲೇಬರ್ ಶೆಡ್‌ನಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾರೆ. ರಾತ್ರಿ ಕಿಟಕಿ-ಬಾಗಿಲು ಮುಚ್ಚಿ ಅಡುಗೆ ಮಾಡಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸೂಲಿಬೆಲೆ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು!
ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು!
ನವೀನ್ ಕುಮಾರ್ ಟಿ
| Edited By: |

Updated on:Jan 31, 2026 | 1:04 PM

Share

ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ

ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್ (20) ಎಂದು ಗುರುತಿಸಲಾಗಿದೆ. ನಾಲ್ವರೂ ರಾತ್ರಿ ಶೆಡ್‌ನ ಕಿಟಕಿ ಹಾಗೂ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಅಡುಗೆ ಮಾಡಿದ್ದರು ಎನ್ನಲಾಗಿದೆ. ನೈಟ್ ಶಿಫ್ಟ್​ಗೆ ಹೋಗಲು ತಯಾರಾಗಿದ್ದ ನಾಲ್ವರಲ್ಲಿ ಇಬ್ಬರು ಕುಳಿತಲ್ಲೇ ಮೃತಪಟ್ಟರೆ, ಇನ್ನಿಬ್ಬರ ಶವ ಮಲಗಿದ ಸ್ಥಿತಿಯಲ್ಲಿದೆ.  ಮಾಡಿದ ಅಡುಗೆಯೂ ಪಾತ್ರೆಯಲ್ಲಿ ಹಾಗೇ ಉಳಿದಿದ್ದು, ಹಲವಾರು ಗೊಂದಲಗಳಿಗೆ ಎಡೆಮಾಡಿಕೊಟ್ಟಿದೆ.  ಬೆಳಗಿನ ಜಾವ  ಅವರು ಉಸಿರುಗಟ್ಟಿ ಸಾವನ್ನಪ್ಪಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಬೆಳಿಗ್ಗೆ ಶಿಫ್ಟ್ ಮುಗಿಸಿ ಮನೆಗೆ ಬಂದಾತನಿಗೆ ಕಾಡಿತ್ತು ಶಾಕ್!

ಕೊಕಾಕೋಲಾ ವೇರ್ ಹೌಸ್ ನಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಇದೇ ಗ್ರಾಮದ ಶೇಡ್ ನಲ್ಲಿ ಐದು ಜನ ಸ್ನೇಹಿತರು ರೂಂ ಬಾಡಿಗೆಗೆ ಪಡೆದು ವಾಸವಾಗಿದ್ದರು. ಅಲ್ಲದೆ 4 ಜನ ಸ್ನೇಹಿತರು ನೈಟ್ ಶೀಪ್ಟ್ ಗೆ ಹೋಗಬೇಕು ಎಂದು ರೂಂ ನಲ್ಲೆ ಉಳಿದುಕೊಂಡಿದ್ದು ಒರ್ವ ಮಾತ್ರ ಬೆಳಗ್ಗೆ ಶಿಪ್ಟ್ ಗೆ ಕೆಲಕ್ಕೆ ಹೋಗಿದ್ದ. ಕೆಲಸ ಮುಗಿಸಿಕೊಂಡು ರೂಂ ಗೆ ಬಂದ ಕಾರ್ಮಿಕ ಬಾಗಿಲು ಬಡೆದರು ಯಾರೂ ಬರದ ಕಾರಣ ಕಿಟಕಿ ಇಂದ ಇಣುಕಿ ನೋಡಿದ್ದ.ಈ ವೇಳೆ ನಾಲ್ವರೂ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ

ಮಾದಕ ವಸ್ತು ಸೇವಿದ್ದಾರೆಯೇ ಎಂದು ಪೊಲೀಸರ ಶಂಕೆ

ಘಟನೆಯ ಮಾಹಿತಿ ತಿಳಿದ ತಕ್ಷಣ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಉಸಿರುಗಟ್ಟಿ ನಾಲ್ವರು ಸಾವನ್ನಪಿರುವುದು ಗೊತ್ತಾಗಿದೆ. ರಾತ್ರಿ ಅಡುಗೆ ಮಾಡುವುದಕ್ಕೆ ಎಂದು ಗ್ಯಾಸ್ ಮೇಲೆ ಇಟ್ಟಿದ್ದ ಅನ್ನವೆಲ್ಲ ಪಾತ್ರೆಯಲ್ಲಿ ಸೀದಿದ್ದು, ಅನ್ನ ಸೀದು ಹೊಗೆ ತುಂಬಿಕೊಂಡ ಕಾರಣ ನಾಲ್ವರು ಉಸಿರುಗಟ್ಟಿ ಸಾವನ್ನಪಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ನಾಲ್ವರು ಸ್ನೇಹಿತರು ಏನಾದರೂ ಮಾದಕ ವಸ್ತುಗಳನ್ನ ಸೇವಿಸಿದ್ದರ ಅನ್ನು ಅನುಮಾನ ಸಹ ಪೊಲೀಸರಿಗೆ ಕಾಡುತ್ತಿದ್ದು, ಆ ಬಗ್ಗೆಯು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:03 am, Sat, 31 January 26

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!