AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​

ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​
ಹೊಸಕೋಟೆ ಪೊಲೀಸ್​ ಠಾಣೆ
ನವೀನ್ ಕುಮಾರ್ ಟಿ
| Edited By: |

Updated on: Oct 07, 2023 | 10:32 AM

Share

ಬೆಂಗಳೂರು ಗ್ರಾಮಾಂತರ ಅ.07: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು (Theft) ಹೊಸಕೋಟೆ (Hoskote) ಪೊಲೀಸರು (Police) ಬಂಧಿಸಿದ್ದಾರೆ. ವಿನಯ್ ಬಂಧಿತ ಆರೋಪಿ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ. ಆರೋಪಿ ವಿನಯ್ ಬಸ್​ ನಿಲ್ದಾಣದಲ್ಲಿ ಬಸ್ ನಿಲ್ಥಾಣದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಬುದ್ದಿ ಮಾಂದ್ಯನಂತೆ ನಟಿಸುತ್ತಾ ನಿಲ್ಲುತ್ತಿದ್ದನು. ಬಳಿಕ ನೂಕುನುಗ್ಗಲಿನಲ್ಲಿ ಬಸ್ ಹತ್ತುತ್ತಿದ್ದವರ ಮೊಬೈಲ್, ಪರ್ಸ್ ಕದಿಯುತ್ತಿದ್ದನು.

ಆರೋಪಿ ವಿನಯ್​ ಖದ್ದ ಮೊಬೈಲ್​​ಗಳ ಪಾಸ್​ವರ್ಡ್ ಒಪನ್ ಮಾಡಿ ಗೂಗಲ್ ಪೇ, ಪೋನ್ ಪೇ ಒಪನ್ ಮಾಡುತ್ತಿದ್ದನು. ನಂತರ ಒಟಿಪಿ ಪಡೆದು ಆನ್ ಲೈನ್ ಮೂಲಕ‌ ಆಂದ್ರಪ್ರದೇಶ, ತಮಿಳುನಾಡು ಮಹಾರಾಷ್ಟ್ರ ಸ್ನೇಹಿತರಿಗೆ ಹಣ ಕಳಿಸುತ್ತಿದ್ದನು. ನಂತರ ಇದೇ ಅಕೌಂಟ್​ಗೆ ಹಣ ಹಾಕಿಸಿಕೊಂಡು ಮಜಾ‌ ಮಾಡುತ್ತಿದ್ದನು. ಇದೇ ರೀತಿ 150ಕ್ಕೂ ಹೆಚ್ಚು ಮೊಬೈಲ್​​ಗಳನ್ನು ಖದ್ದು ಆರೋಪಿ ಸಾಕಷ್ಟು ಹಣ ಮಾಡಿಕೊಂಡಿದ್ದನು.

ಇದನ್ನೂ ಓದಿ: ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ಮೆಡಿಕಲ್​ ಸ್ಟೋರ್​​ಗಳ ಮೇಲೆ ಕ್ರೈಂ ಪೊಲೀಸರ ದಾಳಿ

ಕೋಲಾರ: ವೈದ್ಯರ ಅನುಮತಿ ಇಲ್ಲದೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೋಲಾರ ಬಸ್ ನಿಲ್ದಾಣ ಬಳಿಯ ನಂಜುಂಡೇಶ್ವರ ಮೆಡಿಕಲ್ ಸ್ಟೋರ್, ಶ್ರೀಕಾರ್ ಮೆಡಿಕಲ್ ಸ್ಟೋರ್​​ಗಳ ಮೇಲೆ ಸೈಬರ್‌ ಕ್ರೈಂ ಪೊಲೀಸರು ದಾಳಿ ಮಾಡಿದ್ದಾರೆ.

ಈ ಮೆಡಿಕಲ್​ ಸ್ಟೋರ್​ಗಳು ವೈದ್ಯರ ಅನುಮತಿ ಇಲ್ಲದೆ ಯುವಕರಿಗೆ ದುಪ್ಪಟ್ಟು ಬೆಲೆಗೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದವು. ಇಲ್ಲಿಂದ ಮಾತ್ರೆ ಪಡೆದು ಯುವಕರು ಮತ್ತೇರಿಸಿಕೊಳ್ಳುತ್ತಿದ್ದ ವೇಳೆ ಸೈಬರ್ ಕ್ರೈಂ ಪೋಲೀಸರ ಕೈಗೆ ಸಿಕ್ಕಿಬಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More