AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​

ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​
ಹೊಸಕೋಟೆ ಪೊಲೀಸ್​ ಠಾಣೆ
ನವೀನ್ ಕುಮಾರ್ ಟಿ
| Edited By: |

Updated on: Oct 07, 2023 | 10:32 AM

Share

ಬೆಂಗಳೂರು ಗ್ರಾಮಾಂತರ ಅ.07: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು (Theft) ಹೊಸಕೋಟೆ (Hoskote) ಪೊಲೀಸರು (Police) ಬಂಧಿಸಿದ್ದಾರೆ. ವಿನಯ್ ಬಂಧಿತ ಆರೋಪಿ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ. ಆರೋಪಿ ವಿನಯ್ ಬಸ್​ ನಿಲ್ದಾಣದಲ್ಲಿ ಬಸ್ ನಿಲ್ಥಾಣದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಬುದ್ದಿ ಮಾಂದ್ಯನಂತೆ ನಟಿಸುತ್ತಾ ನಿಲ್ಲುತ್ತಿದ್ದನು. ಬಳಿಕ ನೂಕುನುಗ್ಗಲಿನಲ್ಲಿ ಬಸ್ ಹತ್ತುತ್ತಿದ್ದವರ ಮೊಬೈಲ್, ಪರ್ಸ್ ಕದಿಯುತ್ತಿದ್ದನು.

ಆರೋಪಿ ವಿನಯ್​ ಖದ್ದ ಮೊಬೈಲ್​​ಗಳ ಪಾಸ್​ವರ್ಡ್ ಒಪನ್ ಮಾಡಿ ಗೂಗಲ್ ಪೇ, ಪೋನ್ ಪೇ ಒಪನ್ ಮಾಡುತ್ತಿದ್ದನು. ನಂತರ ಒಟಿಪಿ ಪಡೆದು ಆನ್ ಲೈನ್ ಮೂಲಕ‌ ಆಂದ್ರಪ್ರದೇಶ, ತಮಿಳುನಾಡು ಮಹಾರಾಷ್ಟ್ರ ಸ್ನೇಹಿತರಿಗೆ ಹಣ ಕಳಿಸುತ್ತಿದ್ದನು. ನಂತರ ಇದೇ ಅಕೌಂಟ್​ಗೆ ಹಣ ಹಾಕಿಸಿಕೊಂಡು ಮಜಾ‌ ಮಾಡುತ್ತಿದ್ದನು. ಇದೇ ರೀತಿ 150ಕ್ಕೂ ಹೆಚ್ಚು ಮೊಬೈಲ್​​ಗಳನ್ನು ಖದ್ದು ಆರೋಪಿ ಸಾಕಷ್ಟು ಹಣ ಮಾಡಿಕೊಂಡಿದ್ದನು.

ಇದನ್ನೂ ಓದಿ: ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ಮೆಡಿಕಲ್​ ಸ್ಟೋರ್​​ಗಳ ಮೇಲೆ ಕ್ರೈಂ ಪೊಲೀಸರ ದಾಳಿ

ಕೋಲಾರ: ವೈದ್ಯರ ಅನುಮತಿ ಇಲ್ಲದೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೋಲಾರ ಬಸ್ ನಿಲ್ದಾಣ ಬಳಿಯ ನಂಜುಂಡೇಶ್ವರ ಮೆಡಿಕಲ್ ಸ್ಟೋರ್, ಶ್ರೀಕಾರ್ ಮೆಡಿಕಲ್ ಸ್ಟೋರ್​​ಗಳ ಮೇಲೆ ಸೈಬರ್‌ ಕ್ರೈಂ ಪೊಲೀಸರು ದಾಳಿ ಮಾಡಿದ್ದಾರೆ.

ಈ ಮೆಡಿಕಲ್​ ಸ್ಟೋರ್​ಗಳು ವೈದ್ಯರ ಅನುಮತಿ ಇಲ್ಲದೆ ಯುವಕರಿಗೆ ದುಪ್ಪಟ್ಟು ಬೆಲೆಗೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದವು. ಇಲ್ಲಿಂದ ಮಾತ್ರೆ ಪಡೆದು ಯುವಕರು ಮತ್ತೇರಿಸಿಕೊಳ್ಳುತ್ತಿದ್ದ ವೇಳೆ ಸೈಬರ್ ಕ್ರೈಂ ಪೋಲೀಸರ ಕೈಗೆ ಸಿಕ್ಕಿಬಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ