AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​

ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವ ಅರೆಸ್ಟ್​​
ಹೊಸಕೋಟೆ ಪೊಲೀಸ್​ ಠಾಣೆ
ನವೀನ್ ಕುಮಾರ್ ಟಿ
| Edited By: |

Updated on: Oct 07, 2023 | 10:32 AM

Share

ಬೆಂಗಳೂರು ಗ್ರಾಮಾಂತರ ಅ.07: ಬುದ್ಧಿಮಾಂದ್ಯನಂತೆ ನಟಿಸಿ ಮೊಬೈಲ್, ಪರ್ಸ್ ಕದಿಯುತ್ತಿದ್ದವನನ್ನು (Theft) ಹೊಸಕೋಟೆ (Hoskote) ಪೊಲೀಸರು (Police) ಬಂಧಿಸಿದ್ದಾರೆ. ವಿನಯ್ ಬಂಧಿತ ಆರೋಪಿ. ಆರೋಪಿ ವಿನಯ್​​​ನಿಂದ ಪೊಲೀಸರು 50 ಲಕ್ಷ ಮೌಲ್ಯದ ವಿವಿಧ ಬ್ರ್ಯಾಂಡ್​ನ 150ಕ್ಕೂ ಹೆಚ್ಚು ಮೊಬೈಲ್​ಗಳನ್ನು​ ವಶಪಡಿಸಿಕೊಂಡಿದ್ದಾರೆ. ಆರೋಪಿ ವಿನಯ್ ಬಸ್​ ನಿಲ್ದಾಣದಲ್ಲಿ ಬಸ್ ನಿಲ್ಥಾಣದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಬುದ್ದಿ ಮಾಂದ್ಯನಂತೆ ನಟಿಸುತ್ತಾ ನಿಲ್ಲುತ್ತಿದ್ದನು. ಬಳಿಕ ನೂಕುನುಗ್ಗಲಿನಲ್ಲಿ ಬಸ್ ಹತ್ತುತ್ತಿದ್ದವರ ಮೊಬೈಲ್, ಪರ್ಸ್ ಕದಿಯುತ್ತಿದ್ದನು.

ಆರೋಪಿ ವಿನಯ್​ ಖದ್ದ ಮೊಬೈಲ್​​ಗಳ ಪಾಸ್​ವರ್ಡ್ ಒಪನ್ ಮಾಡಿ ಗೂಗಲ್ ಪೇ, ಪೋನ್ ಪೇ ಒಪನ್ ಮಾಡುತ್ತಿದ್ದನು. ನಂತರ ಒಟಿಪಿ ಪಡೆದು ಆನ್ ಲೈನ್ ಮೂಲಕ‌ ಆಂದ್ರಪ್ರದೇಶ, ತಮಿಳುನಾಡು ಮಹಾರಾಷ್ಟ್ರ ಸ್ನೇಹಿತರಿಗೆ ಹಣ ಕಳಿಸುತ್ತಿದ್ದನು. ನಂತರ ಇದೇ ಅಕೌಂಟ್​ಗೆ ಹಣ ಹಾಕಿಸಿಕೊಂಡು ಮಜಾ‌ ಮಾಡುತ್ತಿದ್ದನು. ಇದೇ ರೀತಿ 150ಕ್ಕೂ ಹೆಚ್ಚು ಮೊಬೈಲ್​​ಗಳನ್ನು ಖದ್ದು ಆರೋಪಿ ಸಾಕಷ್ಟು ಹಣ ಮಾಡಿಕೊಂಡಿದ್ದನು.

ಇದನ್ನೂ ಓದಿ: ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ಮೆಡಿಕಲ್​ ಸ್ಟೋರ್​​ಗಳ ಮೇಲೆ ಕ್ರೈಂ ಪೊಲೀಸರ ದಾಳಿ

ಕೋಲಾರ: ವೈದ್ಯರ ಅನುಮತಿ ಇಲ್ಲದೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೋಲಾರ ಬಸ್ ನಿಲ್ದಾಣ ಬಳಿಯ ನಂಜುಂಡೇಶ್ವರ ಮೆಡಿಕಲ್ ಸ್ಟೋರ್, ಶ್ರೀಕಾರ್ ಮೆಡಿಕಲ್ ಸ್ಟೋರ್​​ಗಳ ಮೇಲೆ ಸೈಬರ್‌ ಕ್ರೈಂ ಪೊಲೀಸರು ದಾಳಿ ಮಾಡಿದ್ದಾರೆ.

ಈ ಮೆಡಿಕಲ್​ ಸ್ಟೋರ್​ಗಳು ವೈದ್ಯರ ಅನುಮತಿ ಇಲ್ಲದೆ ಯುವಕರಿಗೆ ದುಪ್ಪಟ್ಟು ಬೆಲೆಗೆ ಮತ್ತೇರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದವು. ಇಲ್ಲಿಂದ ಮಾತ್ರೆ ಪಡೆದು ಯುವಕರು ಮತ್ತೇರಿಸಿಕೊಳ್ಳುತ್ತಿದ್ದ ವೇಳೆ ಸೈಬರ್ ಕ್ರೈಂ ಪೋಲೀಸರ ಕೈಗೆ ಸಿಕ್ಕಿಬಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ