AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ ಮಾಂಸಾಹಾರದ ವಿರುದ್ಧ ಸಸ್ಯಹಾರಿಗಳ ರ್ಯಾಲಿ

ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ ಮೂವ್ಮೆಂಟ್ ಇಂಡಿಯಾ ಹಾಗೂ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಶನ್ ವತಿಯಿಂದ ಮಾಂಸಾಹಾರದ ವಿರುದ್ಧ ನೆಲಮಂಗಲ ಪಟ್ಟಣದಲ್ಲಿ ರ್ಯಾಲಿ ನಡೆಯಿತು.

ನೆಲಮಂಗಲದಲ್ಲಿ ಮಾಂಸಾಹಾರದ ವಿರುದ್ಧ ಸಸ್ಯಹಾರಿಗಳ ರ್ಯಾಲಿ
ನೆಲಮಂಗಲದಲ್ಲಿ ಸಸ್ಯಹಾರ ಜನಜಾಗೃತಿ ರ್ಯಾಲಿ
TV9 Web
| Updated By: Rakesh Nayak Manchi|

Updated on: Dec 18, 2022 | 3:15 PM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಪರೂಪದ ಜಾಥಾ ನಡೆದಿದೆ. ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ ಮೂವ್ಮೆಂಟ್ ಇಂಡಿಯಾ ಹಾಗೂ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಶನ್ ವತಿಯಿಂದ ನೆಲಮಂಗಲ (Nelamangala) ಪಟ್ಟಣದಲ್ಲಿ ಸಸ್ಯಹಾರ (Vegetarian Rally)ದ ಪರವಾಗಿ ಸಸ್ಯಹಾರ ಜನಜಾಗೃತಿ ರ್ಯಾಲಿ ನಡೆದಿದ್ದು, ನೂರಾರು ಸದಸ್ಯರು ಈ ಜಾಥಾದಲ್ಲಿ ಭಾಗಿಯಾದರು. ಸಸ್ಯಹಾರ ಹಾಗೂ ಮಾಂಸಹಾರ (Non-vegetarian) ಬಗೆಗಿನ ಬಿತ್ತಿ ಪತ್ರ ಹಂಚಿ ಸಸ್ಯಹಾರದ ಪ್ರಯೋಜ (Benefits of vegetarian)ನ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು. ನೆಲಮಂಗಲ ಪಟ್ಟಣದ ವೀರಭದ್ರೇಶ್ವರ ಮಠದಿಂದ ವಿಶ್ವಶಾಂತಿ ಆಶ್ರಮದವರೆಗೂ ಜಾಥಾ ನಡೆದಿದ್ದು, ರಸ್ತೆಯುದ್ದಕ್ಕೂ ಸಸ್ಯಹಾರಿಗಳು ಮಾಂಸಹಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ವಾದ್ಯದ ಸದ್ದಿಗೆ ಕುಣಿಯುತ್ತಾ ಸಸ್ಯಹಾರಿಗಳು ಜಾಥಾದಲ್ಲು ಮುನ್ನಡೆದರು.

ಇದನ್ನೂ ಓದಿ: ಹುಂಜ ಕೂಗುತ್ತದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ ಪಕ್ಕದ ಮನೆಯವರು

ಮೇಕೆಯಲ್ಲಿ ದೇವರಿದ್ದಾನೆ, ಮೊಟ್ಟೆಯಲ್ಲಿ ದೇವರಿದ್ದಾನೆ. ಸಕಲ ಪ್ರಾಣಿ ಕೋಟಿಗಳಲ್ಲಿ ದೇವರಿದ್ದಾನೆ. ನಮ್ಮೆಲ್ಲರಲ್ಲಿ ದೇವರಿದ್ದಾನೆ ಎಂದು ಜಾಥಾದಲ್ಲಿ ಭಾಗಿಯಾಗಿದ್ದ ಜನರು ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಶಾಖಾ ಹಾರಿಗೆ ಜಿಂದಾಬಾದ್, ಸಸ್ಯಹಾರ ಜಗತ್ತಿಗೆ ಜೈ, ಸಸ್ಯಹಾರವನ್ನೇ ಸೇವಿಸೋಣ, ಪ್ರಾಣಿಗಳನ್ನು ಉಳಿಸೋಣ, ಪ್ರಾಣಿಗಳನ್ನು ಸ್ವತಂತ್ರವಾಗಿ ಬದುಕಲು ಬಿಡಿ, ಮಾಂಸಾಹಾರ ಪಾಪಾಹಾರ-ಸಸ್ಯಾಹಾರ ಅಮೃತಾಹಾರ, ಪ್ರಾಣಿಗಳು ನಮ್ಮ ಗೆಳೆಯರು ಆಹಾರವಲ್ಲ, ಜೀವಿಸಿ ಜೀವಿಸಲು ಬಿಡಿ, ಪ್ರಾಣ ನೀಡುವ ಶಕ್ತಿ ನಿನಗಿಲ್ಲದ ಮೇಲೆ ಪ್ರಾಣ ತೆಗೆಯುವ ಅಧಿಕಾರ ನಿನಗಿಲ್ಲ ಎಂಬ ಭಿತ್ತಿಪತ್ರವನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ದಯವೇ ಬೇಕು ಸಕಲ ಪ್ರಾಣಿಗಳೆಲ್ಲರಲ್ಲಿ, ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣನವರ ವಚನದ ಭಿತ್ತಿಪತ್ರವನ್ನೂ ಹಿಡಿದು ಜಾಥಾದಲ್ಲಿ ಪ್ರದರ್ಶಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?