AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಸೈಟ್ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ ಹಾಗೂ ಹಣ ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೊಡ್ಡಬಳ್ಳಾಪುರದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಆಡಿಯೋ-ವಿಡಿಯೋ ಸಾಕ್ಷ್ಯಗಳ ಸಹಿತ ಪೊಲೀಸರಿಗೆ ದೂರು ನೀಡಿದ್ದಾರೆ. ಅತ್ತ ಸ್ವಾಮೀಜಿಯೂ ಪ್ರತಿ ದೂರು ನೀಡಿದ್ದು, ಹಣಕ್ಕಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಬ್ರಹ್ಮಾನಂದ ಗುರೂಜಿ ಹಾಗೂ ಅವರ ದೂರಿನ ಪ್ರತಿ
ನವೀನ್ ಕುಮಾರ್ ಟಿ
| Edited By: |

Updated on:Dec 13, 2025 | 9:42 AM

Share

ದೇವನಹಳ್ಳಿ, ಡಿಸೆಂಬರ್ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ.

ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. 13 ಲಕ್ಷ ರೂ. ಮೌಲ್ಯದ ಸೈಟ್ ಅನ್ನು 12 ಲಕ್ಷಕ್ಕೆ ಕೊಡಿಸುವುದಾಗಿ ಮಾತುಕತೆ ನಡೆಸಿದ್ದರು. ಆದರೆ, ತಮ್ಮ ಬಳಿ 8 ಲಕ್ಷ ರೂ. ಮಾತ್ರ ಇದೆ ಎಂದು ಮಹಿಳೆ ಹೇಳಿದ್ದರು. ಹೀಗಾಗಿ ಉಳಿದ ಹಣಕ್ಕೆ ಸಹಾಯ ಮಾಡುವುದಾಗಿ ಸ್ವಾಮೀಜಿ ಹೇಳಿದ್ದರು ಎಂಬ ಆರೋಪವಿದೆ.

ಮಹಿಳೆ ಬಳಿಯಿದ್ದ 8 ಲಕ್ಷ ರೂ.ಗಳಲ್ಲಿ 5 ಲಕ್ಷ ರೂಪಾಯಿಯನ್ನು ಅಡ್ವಾನ್ಸ್ ಆಗಿ ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ ಒಂದು ವರ್ಷ ಕಳೆದರೂ ಸೈಟ್ ನೀಡದೆ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಹಣ ವಾಪಸ್ ಕೇಳಿದಾಗ ಮಂಚಕ್ಕೆ ಕರೆದ ಸ್ವಾಮೀಜಿ

ಒಂದು ವರ್ಷವಾದರೂ ಸೈಟ್ ಕೊಡದ ಕಾರಣ ಹಣವನ್ನು ಮಹಿಳೆ ವಾಪಸ್ ಕೇಳಿದ್ದಾರೆ. ಆಗ ಸ್ವಾಮೀಜಿ, ‘‘ರೂಂಗೆ ಬಾ ಹಣ ಕೊಡಿಸುತ್ತೇನೆ, ನಿನಗೆ ಹಣ ಬೇಕು, ನನಗೆ ಮಜಾ ಬೇಕು’’ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸ್ವಾಮೀಜಿಯ ಈ ಮಾತುಗಳನ್ನು ಮಹಿಳೆ ಮೊಬೈಲ್‌ನಲ್ಲಿ ಆಡಿಯೋ ಹಾಗೂ ವಿಡಿಯೋ ರೂಪದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ.

ಸ್ವಾಮೀಜಿ ನಿರಂತರವಾಗಿ ಫೋನ್ ಕರೆ, ಆಡಿಯೋ ಮೆಸೇಜ್ ಹಾಗೂ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೇ ಒಂಟಿಯಾಗಿದ್ದ ವೇಳೆ ಮನೆಗೆ ಬಂದು ಕಿರುಕುಳ ನೀಡಿದ್ದಾರೆ. ಆಡಿಯೋ-ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಒತ್ತಡ ಹೇರಿದ್ದು, ಅದಕ್ಕಾಗಿ 50 ಸಾವಿರ ರೂ. ನೀಡುವ ಆಮಿಷವನ್ನೂ ಒಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಎಲ್ಲ ಘಟನೆಗಳು ಗಂಡನಿಗೆ ಗೊತ್ತಾಗಿ ಆತ ತನ್ನನ್ನು ಬಿಟ್ಟು ಹೋಗಿದ್ದಾನೆ ಎಂದೂ ಮಹಿಳೆ ಅಲವತ್ತುಕೊಂಡಿದ್ದಾರೆ. ಸಂತ್ರಸ್ತೆಯು ಈಗಾಗಲೇ ಪೊಲೀಸ್ ಠಾಣೆಗೆ ಆಡಿಯೋ-ವಿಡಿಯೋ ಸಾಕ್ಷ್ಯಗಳೊಂದಿಗೆ ದೂರು ನೀಡಿದ್ದಾರೆ. ಆದರೆ ನ್ಯಾಯ ಸಿಗುತ್ತಿಲ್ಲ ಎಂದು ‘ಟಿವಿ9’ ಬಳಿ ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್ ರನ್: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸಾವು

ಮತ್ತೊಂದೆಡೆ, ಬ್ರಹ್ಮಾನಂದ ಗುರೂಜಿ ಮೆಳೆಕೋಟೆ ಬಳಿ ಸರ್ಕಾರದ ಆರ್ಥಿಕ ನೆರವಿನಿಂದ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠ ಆಶ್ರಮವನ್ನು ಸ್ಥಾಪಿಸಿರುವುದು ಕೂಡ ಬಯಲಾಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಕುರಿತು ಪೊಲೀಸ್ ಇಲಾಖೆ ತನಿಖೆ ನಡೆಸಬೇಕಿದ್ದು, ಆರೋಪಗಳ ಸತ್ಯಾಸತ್ಯತೆ ಹೊರಬರಬೇಕಿದೆ.

ಬ್ರಹ್ಮಾನಂದ ಸ್ವಾಮೀಜಿಯಿಂದ ಪ್ರತಿ ದೂರು

ಏತನ್ಮಧ್ಯೆ, ಮಹಿಳೆ ಮತ್ತು ಆಕೆಯ ಕುಟುಂಬದವರು ಹಣಕ್ಕಾಗಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬ್ರಹ್ಮಾನಂದ ಸ್ವಾಮೀಜಿ ಪ್ರತಿ ದೂರು ದಾಖಲಿಸಿದ್ದಾರೆ. ಹಣ ಕೊಡಬೇಕು. ಇಲ್ಲದಿದ್ದರೆ ನಿಮ್ಮ ಫೋಟೊ, ಆಡಿಯೋ, ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಮತ್ತು ಖ್ಯಾತಿಯನ್ನು ಹಾಳು ಮಾಡುತ್ತೇವೆಂದು ಬೆದರಿಕೆಯೊಡ್ಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸ್ವಾಮೀಜಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Sat, 13 December 25

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?