AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್ ತರಲು‌ ನಡೆದು ಹೋಗುತ್ತಿದ್ದ ವೃದ್ಧೆಯ ಕೊರಳಿಂದ ಚಿನ್ನದ ಸರ ಎಗರಿಸಿದ ಖದೀಮರು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಒಂದು ತಿಂಗಳಲ್ಲಿ ಮೂರು ಸರಗಳ್ಳತನ ಪ್ರಕರಣಗಳು ನಡೆದಿದ್ದು, ಸಾರ್ವಜನಿಕರು ಇದರಿಂದ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ವಿಜಯಪುರ ಪೊಲೀಸರು, ಡಿವೈಎಸ್ಪಿ ರಂಗಪ್ಪ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಟನ್ ತರಲು‌ ನಡೆದು ಹೋಗುತ್ತಿದ್ದ ವೃದ್ಧೆಯ ಕೊರಳಿಂದ ಚಿನ್ನದ ಸರ ಎಗರಿಸಿದ ಖದೀಮರು
ಮಟನ್ ತರಲು‌ ನಡೆದು ಹೋಗುತ್ತಿದ್ದ ವೃದ್ಧೆಯ ಕೊರಳಿಂದ ಚಿನ್ನದ ಸರ ಎಗರಿಸಿದ ಖದೀಮರು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 29, 2021 | 9:39 AM

ದೇವನಹಳ್ಳಿ: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಲಾಕ್​​ಡೌನ್​ ತೆರವು ಬಳಿಕ ಹೆಚ್ಚಾಗುತ್ತಿರುವ ಚೈನ್​ ಸ್ನಾಚಿಂಗ್​ ಪ್ರಕರಣಗಳು ಇದೀಗ ಗ್ರಾಮಾಂತರ ಭಾಗದಲ್ಲೂ ಕಾಣಿಸಿಕೊಳ್ಳುತ್ತಿದೆ. ನಿನ್ನೆಯಷ್ಟೇ ಒಬ್ಬ ಕುಖ್ಯಾತ ಸರಗಳ್ಳನನ್ನು ಬಂಧಿಸಲು ಹೋದಾಗ ಅವನು ಸಯನೈಡ್​ ನುಂಗಿ ಪ್ರಾಣ ಬಿಟ್ಟಿದ್ದ ಘಟನೆ ಹೊಸಕೋಟೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಮಧ್ಯೆ, ನಿನ್ನೆ ಸಂಜೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಖದೀಮರು ವೃದ್ದೆಯನ್ನು ಯಾಮಾರಿಸಿ ಆಕೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ್ದಾರೆ.

ಪಟ್ಟಣದ ರತ್ನಮ್ಮ ಎಂಬಾಕೆಯ ಕತ್ತಿನಲ್ಲಿದ್ದ 40 ಗ್ರಾಂ ಚಿನ್ನದ ಸರವನ್ನು ಇಬ್ಬರು ಖದೀಮರು ದೋಚಿಕೊಂಡು ಹೋಗಿದ್ದಾರೆ. ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದ ಬಳಿ ಮಟನ್ ತೆಗೆದುಕೊಂಡು ಬರಲು‌ ವೃದ್ಧೆ ನಡೆದುಕೊಂಡು ಹೋಗುತ್ತಿದ್ದಾಗ ಈ ಕುಕೃತ್ಯ ನಡೆಸಿದ್ದಾರೆ.

ವೃದ್ದ ಮಹಿಳೆಯ ಬಳಿ ಬೈಕ್ ನಿಲ್ಲಿಸಿದ ಇಬ್ಬರು ಅಪರಿಚಿತರು, ಅಜ್ಜಿ ಮುಂದೆ ಕಳ್ಳರಿದ್ದಾರೆ ಒಡವೆಗಳನ್ನ ಬಿಚ್ಚಿ ಕವರ್ ನಲ್ಲಿ ಹಾಕಿಕೊಂಡು‌ ಹೋಗು ಅಂತಾ ಚಿನ್ನದ‌ ಸರ ಬಿಚ್ಚಿಸಿದ್ದಾರೆ. ಬಳಿಕ ಅದನ್ನು ಕವರ್ ನಲ್ಲಿ ಹಾಕುತ್ತಿದ್ದಂತೆ, ಅಜ್ಜಿಯ ಕೈಯಲ್ಲಿ ಕಲ್ಲಿನ ಕವರ್ ಇಟ್ಟು 40 ಗ್ರಾಂ ಚಿನ್ನದ‌ ಸರ‌ ಕದ್ದುಹೋಗಿದ್ದಾರೆ ಖದೀಮರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಒಂದು ತಿಂಗಳಲ್ಲಿ ಮೂರು ಸರಗಳ್ಳತನ ಪ್ರಕರಣಗಳು ನಡೆದಿದ್ದು, ಸಾರ್ವಜನಿಕರು ಇದರಿಂದ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ವಿಜಯಪುರ ಪೊಲೀಸರು, ಡಿವೈಎಸ್ಪಿ ರಂಗಪ್ಪ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

bike borne chain snatchers snatch gold chain from woman in vijayapura town in devanahalli 2

ಸ್ಥಳಕ್ಕೆ ವಿಜಯಪುರ ಪೊಲೀಸರು, ಡಿವೈಎಸ್ಪಿ ರಂಗಪ್ಪ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ

ಹೋಸಕೋಟೆ: ಪೊಲೀಸರು ಅರೆಸ್ಟ್ ಮಾಡಲು ತೆರಳಿದ್ದಾಗ ಸೈನೇಡ್ ತಿಂದು ಸಾವನಪ್ಪಿದ ಆರೋಪಿ ಸರಗಳ್ಳ (bike borne chain snatchers snatch gold chain from woman in vijayapura town in devanahalli)

ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು