AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಿದ್ದ ಕೂಲಿ ಕಾರ್ಮಿಕ ರಸ್ತೆ ಗುಂಡಿಗೆ ಬಲಿ!

ಬೆಂಗಳೂರಿನ ರಸ್ತೆ ಗುಂಡಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ, ಈಗೆ ಬೆಂಗಳೂರು ಮಾತ್ರವಲ್ಲ ರಸ್ತೆ ಗುಂಡಿ ಸಮಸ್ಯೆ ಬೆಂಗಳೂರಿನ ಸುತ್ತಲೂ ವ್ಯಾಪಿಸಿಬಿಟ್ಟಿದೆ.

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಿದ್ದ ಕೂಲಿ ಕಾರ್ಮಿಕ ರಸ್ತೆ ಗುಂಡಿಗೆ ಬಲಿ!
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 23, 2022 | 7:36 PM

Share

ಬೆಂಗಳೂರು: ಬೆಂಗಳೂರಿನ‌ ರಸ್ತೆ ಗುಂಡಿಗಳಿಗೆ ಇತ್ತೀಚೆಗೆ ಹಲವು ಅವಘಡಗಳು ನಡೆಯುತ್ತಿವೆ. ಬೆಂಗಳೂರು ಅಷ್ಟೆ ಅಲ್ಲ ಈ ರಸ್ತೆ ಗುಂಡಿ ಸಮಸ್ಯೆ ಹೊರವಲಯಕ್ಕೂ ವ್ಯಾಪಿಸಿದ್ದು, ದೀಪಾವಳಿ ಹಿನ್ನಲೆ ಕೆಲಸ ಮುಗಿಸಿ ಖುಷಿ ಖುಷಿಯಾಗಿ ಊರಿನತ್ತ ಬೈಕ್ ತಗೆದುಕೊಂಡು ಹೊರಟಿದ್ದ ಕೂಲಿ ಕಾರ್ಮಿಕ, ಗುಂಡಿಯೊಂದನ್ನ ತಪ್ಪಿಸಲು ಹೋಗಿ ಕ್ಯಾಂಟರ್ ಲಾರಿ ಚಕ್ರಕ್ಕೆ ಸಿಲುಕಿ ಅಸುನೀಗಿದ್ದಾನೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿನ ಸರ್ವಿಸ್ ರಸ್ತೆ ಗುಂಡಿಯನ್ನ ತಪ್ಪಿಸಲು ಹೋಗಿ ಬೈಕ್ ಸವಾರ 45 ವರ್ಷದ ತಿಪ್ಪೆಸ್ವಾಮಿ ಲಾರಿ ಚಕ್ರಕ್ಕೆ ಸಿಲುಕಿ ದಾರೂಣ ಸಾವು ಕಂಡಿದ್ದಾನೆ. ಪಾವಗಡ ಮೂಲದ ತಿಪ್ಪೆಸ್ವಾಮಿ ಕುಟುಂಬ ನಿರ್ವಹಣೆಗಾಗಿ ಬೆಂಗಳೂರು ಉತ್ತರ ತಾಲೂಕಿನ ಮಾದಾವರದಲ್ಲಿ ಕೂಲಿ ಮಾಡಿ ವಾಸಿಸುತ್ತಿದ್ದರು. ದೀಪಾವಳಿ ಹಬ್ಬದ ಹಿನ್ನೆಲೆ ಮನೆಯವರಿಗೆ ಕಾಲ್ ಮಾಡಿ ಸ್ವಂತ ಊರು ಪಾವಗಡಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು.

ಊರಿಗೆ ಹೋಗುವ ಸಂಧರ್ಭದಲ್ಲಿ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಮಾದಾವರ ಬಳಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸಮೇತ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಹಿಂದುಗಡೆ ಬರುತ್ತಿದ್ದ ಕಂಟೈನರ್ ಲಾರಿ ಹರಿದು ತಲೆಗೆ ಹಾಕಿದ್ದ ಹೆಲ್ಮೆಟ್ ಸಮೇತವಾಗಿ ತಲೆ ನುಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೋಲ್ ಸಂಸ್ಥೆಗಳು, ಸರ್ಕಾರಗಳ ಜನರಿಂದ ಯಾವ ಯಾವ ಮೂಲಗಳಲ್ಲಿ ಹಣ ವಸೂಲು ಮಾಡಬೇಕು ಅನ್ನೋದರ ಬಗ್ಗೆ ಮಾತ್ರ ಯೋಚನೆ ಮಾಡ್ತಾರೆ ಹೊರತು, ಜನರಿಗೆ ಸೌಲಭ್ಯಗಳ ವಿತರಣೆ ಬಗ್ಗೆ ಒಂದು ಸಹ ಯೋಚನೆ ಸಹ ಮಾಡೋದಿಲ್ಲ. ಬೆಂಗಳೂರು ನಗರದ ಸುತ್ತೆಲ್ಲ ರಸ್ತೆಗುಂಡಿ ಹೆಚ್ಚಿರುವುದರಿಂದ ಸರ್ಕಾರ ನೇರವಾಗಿ ಬೈಕ್ ಸವಾರರ ಜೀವನದಲ್ಲಿ ಆಟವಾಡುತ್ತಿದೆ. ಕಾರಿನಲ್ಲಿ ಓಡಾಡೋ ಉಳ್ಳವರಿಗೆ ಈ ರಸ್ತೆ ಗುಂಡಿಗಳು ಕಾಣಿಸೋದಿಲ್ಲ, ಸರ್ಕಾರಕ್ಕೆ ತನ್ನ ಬಡವರ ಜೀವದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ, ಹೀಗಿರುವಾಗ ಈ ಸಾವಿಗೆ ಯಾರು ಹೊಣೆ ಎಂದು ಸ್ಥಳೀಯರು ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಚಾಲಕ ಲಾರಿ ಸಮೇತ ನೆಲಮಂಗಲ ಸಂಚಾರಿ ಠಾಣೆಗೆ ಖುದ್ದು ಹಾಜರಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದೇನೇ ಆಗ್ಲಿ ತನ್ನದಲ್ಲದ ತಪ್ಪಿಗೆ ದೀಪಾವಳಿ ಹಬ್ಬದ ಖುಷಿಯಲ್ಲಿ ಮನೆ ಸೇರಬೇಕಾದ ವ್ಯಕ್ತಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೃತಪಟ್ಟಿರುವುದು ದುರದೃಷ್ವವೇ ಸರಿ.

ವಿನಾಯಕ್ ಗುರವ್ ಟಿವಿ9 ನೆಲಮಂಗಲ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ