AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SR Vishwanath: ಬಿಡಿಎ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ! ಶಾಸಕ ಎಸ್.ಆರ್. ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್

BDA chairman: ಬಿಡಿಎ ಅಧ್ಯಕ್ಷರಾಗಿ ಶಾಸಕ ಎಸ್.ಆರ್. ವಿಶ್ವನಾಥ್ ಲಾಭದಾಯಕ ಹುದ್ದೆಯಲ್ಲಿ ಪ್ರಕರಣದಲ್ಲಿ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್‌ ಮನವಿ ಮಾಡಿದ್ದಾರೆ. ಇಂದು ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ಸರ್ಕಾರ‌, ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್​ಗೆ ನೋಟಿಸ್ ಜಾರಿಗೊಳಿಸಿದೆ.

SR Vishwanath: ಬಿಡಿಎ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ! ಶಾಸಕ ಎಸ್.ಆರ್. ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್
ಬಿಡಿಎ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ! ಶಾಸಕ ಸ್ಥಾನ ಎಸ್.ಆರ್. ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 26, 2022 | 2:46 PM

ಬೆಂಗಳೂರು: ಶಾಸಕ ಎಸ್.ಆರ್. ವಿಶ್ವನಾಥ್ (BJP MLA SR Vishwanath) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ (BDA chairman) ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಈ ಹಿಂದೆಯೇ ಸಲ್ಲಿಸಲಾಗಿತ್ತು. ವಕೀಲ ಎ.ಎಸ್.ಹರೀಶ್ ಎಂಬುವವರು ಈ ಪಿಐಎಲ್ ಸಲ್ಲಿಸಿದ್ದರು. ಶಾಸಕರು ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಆದರೂ ಶಾಸಕರಾಗಿ (BJP MLA), ಬಿಡಿಎ ಅಧ್ಯಕ್ಷರಾಗಿ ವೇತನ ಪಡೆಯುತ್ತಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ನಿರ್ದೇಶನ ನೀಡುವಂತೆ ಎ.ಎಸ್.ಹರೀಶ್ ಹೈಕೋರ್ಟ್​ಗೆ (Karnataka High court) ಮನವಿ ಮಾಡಿದ್ದರು.

ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್‌ ಮನವಿ ಮಾಡಿದ್ದಾರೆ. ಇಂದು ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ಸರ್ಕಾರ‌, ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್​ಗೆ ನೋಟಿಸ್ ಜಾರಿಗೊಳಿಸಿದೆ.

ಸಮನ್ಸ್ ಗೆ ಪ್ರತಿಕ್ರಿಯಿಸದ ಬೇಳೂರು ರಾಘವೇಂದ್ರ ಶೆಟ್ಟಿ, ಕರ್ನಾಟಕ ಕರಕುಶಲ ನಿಗಮದ ಕಚೇರಿ ಬಾಗಿಲಿಗೆ ನೋಟಿಸ್ ಅಂಟಿಸಿದ ಶಿರಸಿ ಪೊಲೀಸರು

ಬೆಂಗಳೂರು: ಕರ್ನಾಟಕ ಕರಕುಶಲ ನಿಗಮ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಾಗಿದ್ದು 4 ಬಾರಿ ಸಮನ್ಸ್ ಜಾರಿಯಾದರೂ ಕೋರ್ಟ್ಗೆ ಹಾಜರಾಗದ ಕಾರಣ ಶಿರಸಿ ಪೊಲೀಸರು ಬೇಳೂರು ರಾಘವೇಂದ್ರ ಶೆಟ್ಟಿ ಅವರ ಸರ್ಕಾರಿ ಕಚೇರಿ ಮುಂದೆ ನೋಟಿಸ್ ಅಂಟಿಸಿದ್ದಾರೆ.

ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಶಿರಸಿ ಕೋರ್ಟ್ ನಿಂದಾ ಚೆಕ್ ಬೌನ್ಸ್ ಕೇಸ್ ದಾಖಲಾಗಿ, ಕೋರ್ಟ್ ನಲ್ಲಿ ಸಿಸಿ ನಂಬರ್ ಬಂದು, 4 ಬಾರಿ ಸಮನ್ಸ್ ಜಾರಿಯಾಗಿದೆ. ಆದ್ರೆ ಅದನ್ನು ತೆಗೆದುಕೊಳ್ಳದೆ ಇದ್ದದ್ದರಿಂದ ಶಿರಸಿ ಪೊಲೀಸರು ನೆನ್ನೆ ಸರ್ಕಾರಿ ಕಚೇರಿಯ, ಅಂದರೆ ನಿಗಮದ ಬೇಳೂರು ರಾಘವೇಂದ್ರ ಶೆಟ್ಟಿ ಅವರ ಚೇಂಬರ್ ಮುಂದೆ ನೋಟಿಸ್ ಅಂಟಿಸಿ ಮಹಜರು ಮಾಡಿಕೊಂಡು ಹೋಗಿದ್ದಾರೆ. ಬೇಳೂರು ರಾಘವೇಂದ್ರ ಶೆಟ್ಟಿ ಅವರ ವೈಯಕ್ತಿಕ ಕೆಲಸದ ಪ್ರಭಾವ ಸರ್ಕಾರಿ ಕಚೇರಿಯ ಮೇಲೆ ಕೆಟ್ಟದಾಗಿ ಚಿತ್ರಿಸಿದೆ ಎಂದು ಕೆಲ ಅಧಿಕಾರಿಗಳು ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Thu, 26 May 22

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್