AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

ಬೆಂಗಳೂರಿನ ಬಹುನಿರೀಕ್ಷಿತ ಏರ್‌ಪೋರ್ಟ್ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ನೀಡಲು ಬಿಎಂಆರ್‌ಸಿಎಲ್ ಚಿಂತನೆ ನಡೆಸಿದೆ. ಆದರೆ, ಈ ನಿರ್ಧಾರಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಖಾಸಗಿ ಒಪ್ಪಂದದಿಂದ ಕಳಪೆ ಸೇವೆ ಲಭ್ಯವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!
ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada
ಕಿರಣ್​ ಸೂರ್ಯ
| Edited By: |

Updated on: May 25, 2026 | 10:48 PM

Share

ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ.

ಮುಖ್ಯಾಂಶಗಳು

  • ಬ್ಲೂ ಲೈನ್ ಮಾರ್ಗದ ಸಂಪೂರ್ಣ ನಿರ್ವಹಣೆ ಖಾಸಗಿಗೆ ನೀಡಲು ಬಿಎಂಆರ್ಸಿಎಲ್ ಸಿದ್ಧತೆ
  • ಮೊದಲ ಬಾರಿಗೆ ಇಂತಹ ಒಪ್ಪಂದ
  • ನಮ್ಮ ಮೆಟ್ರೋ ಪ್ರಯಾಣಿಕರು ತೀವ್ರ ಗರಂ: ಹೋರಾಟದ ಎಚ್ಚರಿಕೆ

ಬರೋಬ್ಬರಿ 14,788 ಕೋಟಿ ರೂ ವೆಚ್ಚ

ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಈ ಬ್ಲೂ ಲೈನ್ ಮೆಟ್ರೋ ಮಾರ್ಗವು ಬರೋಬ್ಬರಿ 58.19 ಕಿ.ಮೀ ಉದ್ದವಿದ್ದು, ಒಟ್ಟು 30 ನಿಲ್ದಾಣಗಳನ್ನು ಒಳಗೊಂಡಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್​​ನಿಂದ ಕೆ.ಆರ್ ಪುರ 19.75 ಕಿಮೀ ಮಾರ್ಗದಲ್ಲಿ 13 ಸ್ಟೇಷನ್​​ಗಳು. ಕೆ.ಆರ್ ಪುರ ಟು ಏರ್ಪೋರ್ಟ್ 38.44 ಕಿಮೀ ಮಾರ್ಗದಲ್ಲಿ 17 ಮೆಟ್ರೋ ಸ್ಟೇಷನ್ ಗಳಿರಲಿವೆ. ನೀಲಿ ಮಾರ್ಗವನ್ನು ಬರೋಬ್ಬರಿ 14,788 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಏರ್ಪೋರ್ಟ್​ ಟು ಸಿಲ್ಕ್ ಬೋರ್ಡ್ ನೀಲಿ ಮೆಟ್ರೋ ಮಾರ್ಗದ ನಿರ್ವಹಣೆ ಖಾಸಗಿಯವರಿಗೆ ನೀಡಲು ಬಿಎಂಆರ್​​ಸಿಎಲ್​​ ಟೆಂಡರ್ ಕರೆಯಲು ಮುಂದಾಗಿದೆ.

ಬಿಎಂಆರ್​​ಸಿಎಲ್​ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿದ ಬಿಎಂಆರ್​​ಸಿಎಲ್​ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್, ಈಗಾಗಲೇ ನಾವು ಬೇರೆ ಮಾರ್ಗದಲ್ಲಿ, ಹೌಸ್ ಕೀಪಿಂಗ್, ಸೆಕ್ಯೂರಿಟಿಯನ್ನು ಹೊರಗುತ್ತಿಗೆ ಮಾಡಿದ್ದೇವೆ. ಬ್ಲೂ ಲೈನ್ ಮತ್ತು ಮುಂದೆ ಬರುವಂತಹ ಯೋಜನೆಗಳಲ್ಲಿ ದೆಹಲಿ, ಚೆನ್ನೈ ಮೆಟ್ರೋ ಮಾದರಿಯಲ್ಲಿ ಆಪರೇಷನ್ ಅಂಡ್ ಮೆಂಟೆನೆನ್ಸ್, ರೈಲು ಓಡಿಸುವುದು, ಸ್ಟೇಷನ್ ಕಂಟ್ರೋಲರ್, ಸಿಗ್ನಲಿಂಗ್, ಎಲೆಕ್ಟ್ರಿಸಿಟಿ, ಲಿಫ್ಟ್, ಎಸ್ಕೆಲೇಟರ್ ಇದನ್ನು ನಿರ್ವಹಣೆ ಮಾಡಲು ಹೊರಗುತ್ತಿಗೆ ನೀಡಲು ಈಗಾಗಲೇ ಚಿಂತನೆ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದಶಕಗಳ ಕನಸು ನನಸಾಗುವ ಕಾಲ: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ; ಎಲ್ಲೆಲ್ಲಿ ಸ್ಟಾಪ್?

ಒಂದು ವೇಳೆ ಈ ಒಪ್ಪಂದ ಓಕೆ ಆದರೆ ಬಿಎಂಆರ್‌ಸಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತಹದೊಂದು ಒಪ್ಪಂದ ಆಗಲಿದೆ. ಇನ್ನು ಬಿಎಂಆರ್​​​ಸಿಎಲ್​​ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಬ್ಲೂ ಲೈನ್ ಮಾರ್ಗದ ಎಲ್ಲಾ ನಿರ್ವಹಣೆಯನ್ನು ಖಾಸಗಿ ಅವರಿಗೆ ನೀಡಲು ಟೆಂಡರ್ ಕರೆಯಲು ಮುಂದಾಗಿರುವ ನಮ್ಮ ಮೆಟ್ರೋ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟದ ಎಚ್ಚರಿಕೆ ನೀಡಿದ ಪ್ರಯಾಣಿಕರು

ಈ ಬಗ್ಗೆ ಮಾತನಾಡಿದ ಮೆಟ್ರೋ ಪ್ರಯಾಣಿಕರಾದ ರಾಜು ಎನ್ನುವವರು, ಈಗಾಗಲೇ ದೇಶದಲ್ಲಿ ದುಬಾರಿ ಮೆಟ್ರೋ ಅನ್ನಿಸಿಕೊಂಡಿರುವ ನಮ್ಮ ಮೆಟ್ರೋ ಬೇರೆ ರಾಜ್ಯದ ಮೆಟ್ರೋಗಳಿಗೆ ಹೋಲಿಕೆ ಮಾಡಿದರೆ ತುಂಬಾ ಕ್ಲೀನ್ ಆಗಿದೆ. ಇದೀಗ ಮತ್ತೆ ಬ್ಲೂ ಲೈನ್ ಅನ್ನು ಖಾಸಗಿ ಅವರಿಗೆ ನೀಡ್ತಿರುವುದರಿಂದ ಸ್ವಚ್ಛತೆ ಇರುತ್ತೋ ಇಲ್ಲವೋ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಮೆಟ್ರೋ ಸಂಪೂರ್ಣ ನಿರ್ವಹಣೆಯನ್ನು ಖಾಸಗಿ ಅವರಿಗೆ ಕೊಡಲು ಬಿಡಲ್ಲ, ಒಂದೇ ವೇಳೆ ಕೊಡಲು ಮುಂದಾದರೆ ದೊಡ್ಡಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ

ಒಟ್ಟಿನಲ್ಲಿ ಏರ್ಪೋರ್ಟ್ ಮಾರ್ಗದ ಬ್ಲೂ ಲೈನ್ ಅನ್ನ ಸಂಪೂರ್ಣವಾಗಿ ಖಾಸಗಿ ಅವರಿಗೆ ನೀಡಲು ಬಿಎಂಆರ್​​ಸಿಎಲ್​ ಮುಂದಾಗಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸ್ತಿದ್ದು, ಮುಂದೆ ಬಿಎಂಆರ್​​ಸಿಎಲ್​​ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ