AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

ಬೆಂಗಳೂರಿನ ಬಹುನಿರೀಕ್ಷಿತ ಏರ್‌ಪೋರ್ಟ್ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ನೀಡಲು ಬಿಎಂಆರ್‌ಸಿಎಲ್ ಚಿಂತನೆ ನಡೆಸಿದೆ. ಆದರೆ, ಈ ನಿರ್ಧಾರಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಖಾಸಗಿ ಒಪ್ಪಂದದಿಂದ ಕಳಪೆ ಸೇವೆ ಲಭ್ಯವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!
ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada
ಕಿರಣ್​ ಸೂರ್ಯ
| Edited By: |

Updated on: May 25, 2026 | 10:48 PM

Share

ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ.

ಮುಖ್ಯಾಂಶಗಳು

  • ಬ್ಲೂ ಲೈನ್ ಮಾರ್ಗದ ಸಂಪೂರ್ಣ ನಿರ್ವಹಣೆ ಖಾಸಗಿಗೆ ನೀಡಲು ಬಿಎಂಆರ್ಸಿಎಲ್ ಸಿದ್ಧತೆ
  • ಮೊದಲ ಬಾರಿಗೆ ಇಂತಹ ಒಪ್ಪಂದ
  • ನಮ್ಮ ಮೆಟ್ರೋ ಪ್ರಯಾಣಿಕರು ತೀವ್ರ ಗರಂ: ಹೋರಾಟದ ಎಚ್ಚರಿಕೆ

ಬರೋಬ್ಬರಿ 14,788 ಕೋಟಿ ರೂ ವೆಚ್ಚ

ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಈ ಬ್ಲೂ ಲೈನ್ ಮೆಟ್ರೋ ಮಾರ್ಗವು ಬರೋಬ್ಬರಿ 58.19 ಕಿ.ಮೀ ಉದ್ದವಿದ್ದು, ಒಟ್ಟು 30 ನಿಲ್ದಾಣಗಳನ್ನು ಒಳಗೊಂಡಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್​​ನಿಂದ ಕೆ.ಆರ್ ಪುರ 19.75 ಕಿಮೀ ಮಾರ್ಗದಲ್ಲಿ 13 ಸ್ಟೇಷನ್​​ಗಳು. ಕೆ.ಆರ್ ಪುರ ಟು ಏರ್ಪೋರ್ಟ್ 38.44 ಕಿಮೀ ಮಾರ್ಗದಲ್ಲಿ 17 ಮೆಟ್ರೋ ಸ್ಟೇಷನ್ ಗಳಿರಲಿವೆ. ನೀಲಿ ಮಾರ್ಗವನ್ನು ಬರೋಬ್ಬರಿ 14,788 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಏರ್ಪೋರ್ಟ್​ ಟು ಸಿಲ್ಕ್ ಬೋರ್ಡ್ ನೀಲಿ ಮೆಟ್ರೋ ಮಾರ್ಗದ ನಿರ್ವಹಣೆ ಖಾಸಗಿಯವರಿಗೆ ನೀಡಲು ಬಿಎಂಆರ್​​ಸಿಎಲ್​​ ಟೆಂಡರ್ ಕರೆಯಲು ಮುಂದಾಗಿದೆ.

ಬಿಎಂಆರ್​​ಸಿಎಲ್​ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿದ ಬಿಎಂಆರ್​​ಸಿಎಲ್​ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್, ಈಗಾಗಲೇ ನಾವು ಬೇರೆ ಮಾರ್ಗದಲ್ಲಿ, ಹೌಸ್ ಕೀಪಿಂಗ್, ಸೆಕ್ಯೂರಿಟಿಯನ್ನು ಹೊರಗುತ್ತಿಗೆ ಮಾಡಿದ್ದೇವೆ. ಬ್ಲೂ ಲೈನ್ ಮತ್ತು ಮುಂದೆ ಬರುವಂತಹ ಯೋಜನೆಗಳಲ್ಲಿ ದೆಹಲಿ, ಚೆನ್ನೈ ಮೆಟ್ರೋ ಮಾದರಿಯಲ್ಲಿ ಆಪರೇಷನ್ ಅಂಡ್ ಮೆಂಟೆನೆನ್ಸ್, ರೈಲು ಓಡಿಸುವುದು, ಸ್ಟೇಷನ್ ಕಂಟ್ರೋಲರ್, ಸಿಗ್ನಲಿಂಗ್, ಎಲೆಕ್ಟ್ರಿಸಿಟಿ, ಲಿಫ್ಟ್, ಎಸ್ಕೆಲೇಟರ್ ಇದನ್ನು ನಿರ್ವಹಣೆ ಮಾಡಲು ಹೊರಗುತ್ತಿಗೆ ನೀಡಲು ಈಗಾಗಲೇ ಚಿಂತನೆ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದಶಕಗಳ ಕನಸು ನನಸಾಗುವ ಕಾಲ: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ; ಎಲ್ಲೆಲ್ಲಿ ಸ್ಟಾಪ್?

ಒಂದು ವೇಳೆ ಈ ಒಪ್ಪಂದ ಓಕೆ ಆದರೆ ಬಿಎಂಆರ್‌ಸಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತಹದೊಂದು ಒಪ್ಪಂದ ಆಗಲಿದೆ. ಇನ್ನು ಬಿಎಂಆರ್​​​ಸಿಎಲ್​​ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಬ್ಲೂ ಲೈನ್ ಮಾರ್ಗದ ಎಲ್ಲಾ ನಿರ್ವಹಣೆಯನ್ನು ಖಾಸಗಿ ಅವರಿಗೆ ನೀಡಲು ಟೆಂಡರ್ ಕರೆಯಲು ಮುಂದಾಗಿರುವ ನಮ್ಮ ಮೆಟ್ರೋ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟದ ಎಚ್ಚರಿಕೆ ನೀಡಿದ ಪ್ರಯಾಣಿಕರು

ಈ ಬಗ್ಗೆ ಮಾತನಾಡಿದ ಮೆಟ್ರೋ ಪ್ರಯಾಣಿಕರಾದ ರಾಜು ಎನ್ನುವವರು, ಈಗಾಗಲೇ ದೇಶದಲ್ಲಿ ದುಬಾರಿ ಮೆಟ್ರೋ ಅನ್ನಿಸಿಕೊಂಡಿರುವ ನಮ್ಮ ಮೆಟ್ರೋ ಬೇರೆ ರಾಜ್ಯದ ಮೆಟ್ರೋಗಳಿಗೆ ಹೋಲಿಕೆ ಮಾಡಿದರೆ ತುಂಬಾ ಕ್ಲೀನ್ ಆಗಿದೆ. ಇದೀಗ ಮತ್ತೆ ಬ್ಲೂ ಲೈನ್ ಅನ್ನು ಖಾಸಗಿ ಅವರಿಗೆ ನೀಡ್ತಿರುವುದರಿಂದ ಸ್ವಚ್ಛತೆ ಇರುತ್ತೋ ಇಲ್ಲವೋ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಮೆಟ್ರೋ ಸಂಪೂರ್ಣ ನಿರ್ವಹಣೆಯನ್ನು ಖಾಸಗಿ ಅವರಿಗೆ ಕೊಡಲು ಬಿಡಲ್ಲ, ಒಂದೇ ವೇಳೆ ಕೊಡಲು ಮುಂದಾದರೆ ದೊಡ್ಡಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ

ಒಟ್ಟಿನಲ್ಲಿ ಏರ್ಪೋರ್ಟ್ ಮಾರ್ಗದ ಬ್ಲೂ ಲೈನ್ ಅನ್ನ ಸಂಪೂರ್ಣವಾಗಿ ಖಾಸಗಿ ಅವರಿಗೆ ನೀಡಲು ಬಿಎಂಆರ್​​ಸಿಎಲ್​ ಮುಂದಾಗಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸ್ತಿದ್ದು, ಮುಂದೆ ಬಿಎಂಆರ್​​ಸಿಎಲ್​​ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!