AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ

ಬಿಎಂಟಿಸಿ ನೌಕರರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಮೇಲಾಧಿಕಾರಿಗಳ ಕಿರುಕುಳವೇ ಇದಕ್ಕೆ ಕಾರಣವೆಂಬ ಆರೋಪ ಕೂಡ ಕೇಳಿಬಂದಿದೆ. ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ
ಬಿಎಂಟಿಸಿ ಚಾಲಕ ಆತ್ಮಹತ್ಯೆ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 20, 2024 | 5:02 PM

Share

ಬೆಂಗಳೂರು ಗ್ರಾಮಾಂತರ, ಫೆ.20: ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ(BMTC driver) ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ನಡೆದಿದೆ. ಆತ್ಮಹತ್ಯೆ ಯತ್ನ ಕಂಡ ಕೂಡಲೇ ಸ್ಥಳಿಯರು ಮತ್ತು ಆತನ ಸಹೋದ್ಯೋಗಿಗಳು ರಕ್ಷಿಸಿದ್ದಾರೆ. ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಚಾಲಕ. ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಸ್ಥಳಕ್ಕಾಗಮಿಸಿದ ಹೊಸಕೋಟೆ ಪೋಲಿಸರು ಚಾಲಕನನ್ನು ಮನವೊಲಿಕೆ ಮಾಡಿ ಅಧಿಕಾರಿಗಳ ಜೊತೆ ಕಳುಹಿಸಿದ್ದಾರೆ.

ಆರ್ಡರ್ ತಗೊಂಡು ಬೈಕ್ ಕದಿತಿದ್ದ ಬೈಕ್ ಕಳ್ಳನ ಬಂಧನ

ಬೆಂಗಳೂರು: ಆರ್ಡರ್​ ತೆಗೆದುಕೊಂಡು ಬೈಕ್​ ಕದಿಯುತ್ತಿದ್ದ ಬೈಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ದಾಸರಹಳ್ಳಿಯ ಪೃಥ್ವಿರಾಜ್(30) ಬಂಧಿತ ಆರೋಪಿ. ಬಂಧಿತನ ಬಳಿ ಇದ್ದ 20 ಬೈಕ್​ಗಳು, ಮೊಬೈಲ್​ನ್ನು ಜಪ್ತಿ ಮಾಡಲಾಗಿದೆ. ಇತ ದಾಸರಹಳ್ಳಿ, ನಾಗಸಂದ್ರ ಮೆಟ್ರೋ ಸೇರಿದಂತೆ ಪಾರ್ಕಿಂಗ್ ಪ್ರದೇಶದಲ್ಲಿ ಬೈಕ್​ಗಳನ್ನು ಕಳ್ಳತನ ಮಾಡುತ್ತಿದ್ದ, ಬಳಿಕ ಕದ್ದ ಬೈಕ್​ ಗಳನ್ನು ಆಂಧ್ರ, ತುಮಕೂರು, ದೊಡ್ಡಬಳ್ಳಾಪುರ ಸೇರಿದಂತೆ ಹಲವೆಡೆ ಮಾರಾಟ ಮಾಡುತ್ತಿದ್ದ. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಅಸಾಮಿ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ:ವಿಜಯನಗರ: ಕೌಟುಂಬಿಕ ಕಲಹ; ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

ಸ್ಕೂಟಿಗೆ ಟಿಪ್ಪರ್​ ಡಿಕ್ಕಿ, ಸವಾರ ಸಾವು

ಬಾಗಲಕೋಟೆ: ಎಷ್ಟೇ ಜಾಗರೂಕರಾಗಿದ್ದರು. ಎದುರುಗಡೆ ಬರುವ ವಾಹನದವರು ಸರಿಯಿಲ್ಲವೆಂದರೆ ಯಾರದೋ ಅಜಾಗರೂಕತೆಗೆ ಇನ್ಯಾರೂ ಉಸಿರು ಚೆಲ್ಲುವಂತಾಗುತ್ತದೆ. ಅದರಂತೆ ಇಂದು ಸ್ಕೂಟಿಗೆ ಟಿಪ್ಪರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ನಗರದ ಸೀಮಿಕೇರಿ ಬೈಪಾಸ್​​ ರಸ್ತೆಯಲ್ಲಿ ನಡೆದಿದೆ. ಸ್ಥಳಕ್ಕಾಗಮಿಸಿದ ಬಾಗಲಕೋಟೆ ಸಂಚಾರಿ ಠಾಣೆ ಪೊಲೀಸರು, ಮೃತ ಸ್ಕೂಟಿ ಸವಾರನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Tue, 20 February 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More