Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಸ್​ ನಿಲ್ದಾಣದಲ್ಲಿ ಸ್ನೇಹಿತನಿಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಗುದ್ದಿದ BMW ಕಾರು

ಮಂಜುನಾಥ್ ಅವರು ತಮ್ಮ ಸ್ನೇಹಿತ ಬಸವರಾಜ್​ಗಾಗಿ ತೋಟದಗುಡ್ಡದಹಳ್ಳಿ ಬಸ್ ನಿಲ್ದಾಣದಲ್ಲಿ ಬೈಕ್​ ನಿಲ್ಲಿಸಿಕೊಂಡು ಕಾಯುತ್ತಿದ್ದರು. ಈ ವೇಳೆ ಧೀಡಿರ್​​ ಬಂದು ಬೈಕ್​​ ಸವಾರನಿಗೆ BMW ಕಾರು ಗುದ್ದಿದೆ. ನಿಯಂತ್ರಣ ತಪ್ಪಿದ ಕಾರು ವಿದ್ಯುತ್​​ ಕಂಬಕ್ಕೆ, ಬಸ್​​ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ತಿರುಪತಿಯಿಂದ ಮನೆಗೆ ಬರುವಾಗ ಘಟನೆ ನಡೆದಿದ್ದು ಕಾರಿನಲ್ಲಿ ಲಡ್ಡು ಪತ್ತೆಯಾಗಿದೆ.

ಬೆಂಗಳೂರು: ಬಸ್​ ನಿಲ್ದಾಣದಲ್ಲಿ ಸ್ನೇಹಿತನಿಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಗುದ್ದಿದ BMW ಕಾರು
BMW ಕಾರು ಅಪಘಾತ
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on:Nov 01, 2023 | 1:53 PM

ನೆಲಮಂಗಲ, ನ.01: ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಬಸ್ ನಿಲ್ದಾಣದಲ್ಲಿ ಬೈಕ್ (Bike)​ ನಿಲ್ಲಿಸಿಕೊಂಡಿದ್ದವನಿಗೆ BMW ಕಾರು ಡಿಕ್ಕಿ ಹೊಡೆದಿದೆ (BMW Car Accident). ಈ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದ್ರಹಳ್ಳಿಯ ಮಂಜುನಾಥ್​​(37)ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ. ಸ್ನೇಹಿತ ಬಸವರಾಜ್​ಗಾಗಿ ಬಸ್​​ ನಿಲ್ದಾಣದಲ್ಲಿ ಕಾಯ್ತಿದ್ದ ವೇಳೆ ಘಟನೆ ನಡೆದಿದೆ.

ಮಂಜುನಾಥ್ ಅವರು ತಮ್ಮ ಸ್ನೇಹಿತ ಬಸವರಾಜ್​ಗಾಗಿ ತೋಟದಗುಡ್ಡದಹಳ್ಳಿ ಬಸ್ ನಿಲ್ದಾಣದಲ್ಲಿ ಬೈಕ್​ ನಿಲ್ಲಿಸಿಕೊಂಡು ಕಾಯುತ್ತಿದ್ದರು. ಈ ವೇಳೆ ಧೀಡಿರ್​​ ಬಂದು ಬೈಕ್​​ ಸವಾರನಿಗೆ BMW ಕಾರು ಗುದ್ದಿದೆ. ನಿಯಂತ್ರಣ ತಪ್ಪಿದ ಕಾರು ವಿದ್ಯುತ್​​ ಕಂಬಕ್ಕೆ, ಬಸ್​​ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಡಿಕ್ಕಿಯಾದ ರಭಸಕ್ಕೆ KA19-MC7708 BMW ಕಾರು ನಜ್ಜು ಗುಜ್ಜಾಗಿದೆ. ಡಿಕ್ಕಿ ಪರಿಣಾಮ ಏರ್​​ ಬ್ಯಾಗ್​​ ಓಪನ್ ಆಗಿದ್ದು ಕಾರಿನಲ್ಲಿದ್ದ ನಾಲ್ವರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಪರಾರಿಯಾದ ಕಾರಿನ ಚಾಲಕ, ಮಾಲೀಕನಿಗೆ ಪೊಲೀಸರು ಹುಡುಕಾಡುತ್ತಿದ್ದಾರೆ. ತಿರುಪತಿಯಿಂದ ಮನೆಗೆ ಬರುವಾಗ ಘಟನೆ ನಡೆದಿದ್ದು ಕಾರಿನಲ್ಲಿ ಲಡ್ಡು ಪತ್ತೆಯಾಗಿದೆ. ಅತೀವೇಗವಾಗಿ ಬಂದು ಡಿಕ್ಕಿಹೊಡೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accidents: ಭಾರತದಲ್ಲಿ ಕೊರೊನಾ ಪೂರ್ವದಲ್ಲಿದ್ದ ಸಂಖ್ಯೆಗೆ ಬಂದ ರಸ್ತೆ ಅಪಘಾತ ಪ್ರಕರಣಗಳು

ಕ್ಯಾಂಟರ್​ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ದೇವನಹಳ್ಳಿ ತಾಲೂಕಿನ ವಿಜಯಪುರ ಹೊರವಲಯದ ಹಾರ್ಡಿಪುರ ಬಳಿ ಅಪಘಾತ ಸಂಭವಿಸಿದೆ. ತಮಿಳುನಾಡು ಮೂಲದ ವಿನೋದ್ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಮಂಜುನಾಥ್ ಗೆ ಗಾಯಗೊಂಡಿದ್ದಾನೆ. ರಾತ್ರಿ‌ ಎಲ್ಲೆಂದರಲ್ಲಿ ಲಾರಿಗಳನ್ನ ನಿಲ್ಲಿಸೋದ್ರಿಂದ ಅಪಘಾತ ಸಂಭವಿಸಿದೆ ಅಂತ ಆರೋಪಿಸಲಾಗಿದೆ.

ಫುಟ್​ಪಾತ್ ಮೇಲೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರು ಪುಟ್ಪಾತ್ ಮೇಲೆ ನುಗ್ಗಿರೋ ಘಟನೆ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಮೆಣಸೆ ಗ್ರಾಮದಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ 9 ಬೈಕ್​ಗಳು ಜಖಂ ಆಗಿದ್ದು, ಇಬ್ಬರು ಶಾಲಾ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಮಾರುತಿ ಆಲ್ಟೊ ಕಾರು ಗಣೇಶ್ ಹೆಗಡೆ ಎಂಬಾತನಿಗೆ ಸೇರಿದ್ದು, ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:22 pm, Wed, 1 November 23

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ