AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Attibele: ಅಪಘಾತದಿಂದ ಧರೆಗುರುಳಿದ ಕನ್ನಡದ ಗಡಿ ಗೋಪುರ- ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ ಕಟ್ಟಲಾಗಿದ್ದ ಏಕೈಕ ಮೈಲಿಗಲ್ಲು ಇದು!

ಅದು ಕನ್ನಡ ನೆಲದ ಗತವೈಭವ ಸಾರುವ ಸ್ಮಾರಕ,‌ ಕರ್ನಾಟಕಕ್ಕೆ ಬರುವ ಬೇರೆ ಭಾಷಿಕರಿಗೆ ಕನ್ನಡದ ಪರಿಚಯ ಮಾಡಿಕೊಡುವ ಮೈಲಿಗಲ್ಲಿನ ಗೋಪುರ,‌ ಅಂತಹ ಐತಿಹಾಸಿಕ ಗಡಿ ಗೋಪುರ ಅಪಘಾತದಿಂದಾಗಿ ನೆಲಕ್ಕುರುಳಿ ಜಖಂ ಗೊಂಡಿದೆ. ಇನ್ನು ಕನ್ನಡದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ರಾಜ್ಯ ಸರ್ಕಾರ ಕನ್ನಡದ ಸ್ಮಾರಕ ಬಿದ್ದಿದ್ದರೂ ತಲೆ ಕೆಡಿಸಿಕೊಂಡಿಲ್ಲ

Attibele: ಅಪಘಾತದಿಂದ ಧರೆಗುರುಳಿದ ಕನ್ನಡದ ಗಡಿ ಗೋಪುರ- ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ ಕಟ್ಟಲಾಗಿದ್ದ ಏಕೈಕ ಮೈಲಿಗಲ್ಲು ಇದು!
ಅಪಘಾತದಿಂದ ಧರೆಗುರುಳಿದ ಕನ್ನಡದ ಗಡಿ ಗೋಪುರ- ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ ಕಟ್ಟಲಾಗಿದ್ದ ಏಕೈಕ ಮೈಲಿಗಲ್ಲು ಅದು!
TV9 Web
| Updated By: ಸಾಧು ಶ್ರೀನಾಥ್​

Updated on: Nov 26, 2022 | 10:53 AM

Share

ಮೇಲಿನ ಚಿತ್ರದಲ್ಲಿ ಕಾಣುತ್ತಿರುವ ಈ ಗಡಿಗೋಪುರಕ್ಕೆ ಅದರದೇ ಆದ ಇತಿಹಾಸವಿದೆ‌. ‌‌ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ ಕರ್ನಾಟಕ ತಮಿಳುನಾಡು ಬಾರ್ಡರ್ ಅತ್ತಿಬೆಲೆಯಲ್ಲಿ (Attibele, Anekal) ಕಟ್ಟಲಾದ ಈ ಗಡಿ ಗೋಪುರಕ್ಕೆ ತಮಿಳುನಾಡು ಲಾರಿಯೊಂದು ಗುದ್ದಿದ ಪರಿಣಾಮ ಎಡಭಾಗದ ಗೋಡೆ ಸಂಪೂರ್ಣ ಕುಸಿದು ಇಡೀ ಸ್ಮಾರಕ ಜಖಂಗೊಂಡಿದೆ. ಏನಾಯಿತೆಂದರೆ ಸಾಮಾನ್ಯವಾಗಿ ಗೋಪುರದ ಬಳಿಯೇ ಹಲವು ವಾಹನಗಳು ಯು ಟರ್ನ್ ತೆಗೆದುಕೊಳ್ಳುತ್ತವೆ. ಅದೇ ರೀತಿ ಯು ಟರ್ನ್ ತೆಗೆದುಕೊಳ್ಳುತ್ತಿದ್ದ ಲಾರಿಯೊಂದು ಕಟ್ಟಡಕ್ಕೆ ಮುತ್ತಿಕ್ಕಿ ಡಿಕ್ಕಿಯಾದ ಪರಿಣಾಮ (Lorry Accident) ಕರ್ನಾಟಕದ ಎಕೈಕ ಗಡಿಗೋಪುದ ಅರ್ಧ ಭಾಗ ನೆಲಕ್ಕುರುಳಿದೆ.

ಗಡಿಗೋಪುರ ಬಿದ್ದಿರುವ ವಿಷಯ ಗೊತ್ತಾಗಿ ತತ್ ಕ್ಷಣಕ್ಕೆ ಬಂದ ಕನ್ನಡ ಜಾಗೃತಿ ವೇದಿಕೆ ಸದಸ್ಯರು ಲಾರಿ ಚಾಲಕನ ಮೇಲೆ ದೂರು ದಾಖಲಿಸಿದ್ದಾರೆ. ಅಲ್ಲದೆ ಕೂಡಲೇ ಗಡಿ ಗೋಪುರ ದುರಸ್ತಿ ಕಾರ್ಯ ಆಗಬೇಕು ಅಂತ ರಾಜ್ಯ ಸರ್ಕಾರ ಹಾಗೂ ನ್ಯಾಷನಲ್ ಹೈವೇ ಅಥಾರಿಟಿಗೆ ಮನವಿ ಮಾಡಿದ್ದಾರೆ.

ಇನ್ನು ಕನ್ನಡದ ಬಗ್ಗೆ (Kannada Rajyotsava) ಪುಂಖಾನುಪುಂಖವಾಗಿ ಮಾತನಾಡುವ ರಾಜ್ಯ ಸರ್ಕಾರ ಕನ್ನಡದ ಸ್ಮಾರಕ ಬಿದ್ದಿದ್ದರೂ ತಲೆ ಕೆಡಿಸಿಕೊಂಡಿಲ್ಲ. ಹಾಗಯೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಲಿ, ಸ್ಥಳೀಯ ತಹಸೀಲ್ದಾರ್ ಆಗಲೀ‌ ಭೇಟಿ ಕೊಟ್ಟು ಯಾಕೆ ಹೀಗೆ ಆಯ್ತು? ಮುಂದೇ ಸ್ಮಾರಕವನ್ನು ಹೇಗೆ ಕಾಪಾಡಬೇಕು? ಅನ್ನೋ ವಿಚಾರದ ಗೋಜಿಗೆ ಹೋಗಿಲ್ಲ ಎಂದು ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷರಾದ ಮಂಜುನಾಥ್ ದೇವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Border Arch fall down at Attibele in Anekal due to lorry accident but local authorities fail to repair it

ಗಡಿಗೋಪುರ ಬಳಿ ಯಾವುದೇ ವಾಹನ ಯು ಟರ್ನ್ ಮಾಡೊದಕ್ಕೆ ಅವಕಾಶ ಕೊಡಬಾರದು, ಕೂಡಲೇ ಅದನ್ನು ಮುಚ್ಚಿ ಅಂತ ನ್ಯಾಷನಲ್ ಹೈವೇ ಅಥಾರಿಟಿಗೆ ಈ ಮೊದಲೇ ಮನವಿ ಮಾಡಿದ್ದರೂ ಯಾವುದೇ ಅಧಿಕಾರಿ ತಲೆ ಕೆಡಿಸಿಕೊಂಡಿಲ್ಲ ಅಂತಾ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ನವೆಂಬರ್ ತಿಂಗಳಲ್ಲಿ ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗ್ತಿದೆ. ಇನ್ನೊಂದೆಡೆ ಕನ್ನಡದ ಗತವೈಭವ ಸಾರುವ ಸ್ಮಾರಕ ನೆಲಕ್ಕುರುಳಿದ್ರೂ ಸಿಗಬೇಕಾದ ಪ್ರಾಶಸ್ತ್ಯ ಸಿಗದೇ ಇರೋದು ಕನ್ನಡಿಗರು ಯೋಚಿಸಬೇಕಾದ ಸಂಗತಿ. ಈಗಲಾದ್ರೂ ಅಧಿಕಾರಿಗಳು ಭೇಟಿ ಕೊಟ್ಟು ಗಡಿಗೋಪುರ ದುರಸ್ತಿ ಕಾರ್ಯ ಶೀಘ್ರವೇ ಮಾಡಿಸುತ್ತಾರಾ ಅನ್ನೊದೇ‌‌ ಪ್ರಶ್ನೆ! (ವರದಿ: ಸೈಯ್ಯದ್ ನಿಜಾಮುದ್ದೀನ್, ಟಿವಿ 9, ಆನೇಕಲ್)

ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ