AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, 6 ಜನರಿಗೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ದುರ್ಘಟನೆಯೊಂದು ನಡೆದಿದೆ. ಅದ್ಧೂರಿಯಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನನ್ನ ಇಂದು ವಿಸರ್ಜನೆ ಮಾಡಲು ಮೆರವಣಿಗೆ ನಡೆಸಲಾಗಿದ್ದು, ಈ ವೇಳೆ ಪಟಾಕಿ ಬಾಕ್ಸ್​ ಸ್ಫೋಟಕಗೊಂಡು ಓರ್ವ ಬಾಲಕ ದುರಂತ ಸಾವು ಕಂಡಿದ್ದಾನೆ. ಇನ್ನು ಈ ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಹಾಗಾದ್ರೆ, ಈ ಘಟನೆ ಹೇಗಾಯ್ತು?

ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, 6 ಜನರಿಗೆ ಗಾಯ
Firecracker
ರಮೇಶ್ ಬಿ. ಜವಳಗೇರಾ
|

Updated on:Aug 29, 2025 | 9:36 PM

Share

ದೊಡ್ಡಬಳ್ಳಾಪುರ, (ಆಗಸ್ಟ್ 29): ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್  (firecracker box) ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್‌ಸ್ಟೇಬಲ್ ಸೇರಿದಂತೆ ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಈ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapur) ಮುತ್ತೂರಿನಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನಾ (ganesh immersion) ಮೆರವಣಿಗೆ ವೇಳೆ ಏಕಾಏಕಿ ಪಟಾಕಿ ಬಾಕ್ಸ್ ಸ್ಫೋಟಗೊಂಡಿದ್ದು, ಮುತ್ತೂರು ನಿವಾಸಿ ತನುಷ್ ರಾವ್ (15) ಎಂಬ ಬಾಲಕ ಮೃತಪಟ್ಟಿದ್ದಾನೆ.

ಫ್ರೆಂಡ್ಸ್ ಯುವಕರ ಬಳಗದಿಂದ ಇಂದು (ಆಗಸ್ಟ್ 29) ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆ ಮಾಡುತ್ತಿದ್ದ ಲಿಫ್ಟಿಂಗ್ ವಾಹನದಲ್ಲಿದ್ದ ಪಟಾಕಿ ಬಾಕ್ಸ್ ಏಕಾಏಕಿ ಸ್ಫೋಟಗೊಂಡಿದೆ. ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಪಟಾಕಿ ಬಾಕ್ಸ್​ ಏಕಾಏಕಿ ಹೇಗೆ ಸ್ಫೋಟಗೊಂಡಿದೆ ಎನ್ನುವ ನಿಖರ ಮಾಹಿತಿ ಇಲ್ಲ.

ಈ ದುರ್ಘಟನೆಯಲ್ಲಿ ಗಣೇಶ್(16), ಯೋಗೇಶ್(15), ಮುನಿರಾಜು(27) ಹಾಗೂ ನಾಗರಾಜು (35), ಚೇತನ್ ಶಾವಿ(13), ಕಾನ್ಸ್ ಸ್ಟೇಬಲ್ ಜಾಕೀರ್ ಹುಸೇನ್‌ಗೆ ಗಾಯಗಳಾಗಿವೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪಿಸಿ ಜಾಕೀರ್ ಕೈ ಮತ್ತು ಭುಜಕ್ಕೆ ಗಾಯವಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Published On - 9:34 pm, Fri, 29 August 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!