AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, 6 ಜನರಿಗೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ದುರ್ಘಟನೆಯೊಂದು ನಡೆದಿದೆ. ಅದ್ಧೂರಿಯಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನನ್ನ ಇಂದು ವಿಸರ್ಜನೆ ಮಾಡಲು ಮೆರವಣಿಗೆ ನಡೆಸಲಾಗಿದ್ದು, ಈ ವೇಳೆ ಪಟಾಕಿ ಬಾಕ್ಸ್​ ಸ್ಫೋಟಕಗೊಂಡು ಓರ್ವ ಬಾಲಕ ದುರಂತ ಸಾವು ಕಂಡಿದ್ದಾನೆ. ಇನ್ನು ಈ ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಹಾಗಾದ್ರೆ, ಈ ಘಟನೆ ಹೇಗಾಯ್ತು?

ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, 6 ಜನರಿಗೆ ಗಾಯ
Firecracker
ರಮೇಶ್ ಬಿ. ಜವಳಗೇರಾ
|

Updated on:Aug 29, 2025 | 9:36 PM

Share

ದೊಡ್ಡಬಳ್ಳಾಪುರ, (ಆಗಸ್ಟ್ 29): ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್  (firecracker box) ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್‌ಸ್ಟೇಬಲ್ ಸೇರಿದಂತೆ ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಈ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapur) ಮುತ್ತೂರಿನಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನಾ (ganesh immersion) ಮೆರವಣಿಗೆ ವೇಳೆ ಏಕಾಏಕಿ ಪಟಾಕಿ ಬಾಕ್ಸ್ ಸ್ಫೋಟಗೊಂಡಿದ್ದು, ಮುತ್ತೂರು ನಿವಾಸಿ ತನುಷ್ ರಾವ್ (15) ಎಂಬ ಬಾಲಕ ಮೃತಪಟ್ಟಿದ್ದಾನೆ.

ಫ್ರೆಂಡ್ಸ್ ಯುವಕರ ಬಳಗದಿಂದ ಇಂದು (ಆಗಸ್ಟ್ 29) ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆ ಮಾಡುತ್ತಿದ್ದ ಲಿಫ್ಟಿಂಗ್ ವಾಹನದಲ್ಲಿದ್ದ ಪಟಾಕಿ ಬಾಕ್ಸ್ ಏಕಾಏಕಿ ಸ್ಫೋಟಗೊಂಡಿದೆ. ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಪಟಾಕಿ ಬಾಕ್ಸ್​ ಏಕಾಏಕಿ ಹೇಗೆ ಸ್ಫೋಟಗೊಂಡಿದೆ ಎನ್ನುವ ನಿಖರ ಮಾಹಿತಿ ಇಲ್ಲ.

ಈ ದುರ್ಘಟನೆಯಲ್ಲಿ ಗಣೇಶ್(16), ಯೋಗೇಶ್(15), ಮುನಿರಾಜು(27) ಹಾಗೂ ನಾಗರಾಜು (35), ಚೇತನ್ ಶಾವಿ(13), ಕಾನ್ಸ್ ಸ್ಟೇಬಲ್ ಜಾಕೀರ್ ಹುಸೇನ್‌ಗೆ ಗಾಯಗಳಾಗಿವೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪಿಸಿ ಜಾಕೀರ್ ಕೈ ಮತ್ತು ಭುಜಕ್ಕೆ ಗಾಯವಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Published On - 9:34 pm, Fri, 29 August 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!