AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಯುವಕರು ಬುಲ್ಲೆಟ್ ಬೈಕುಗಳನ್ನು ಖರೀದಿ ಮಾಡಲು ಒಲ್ಲೆ ಅನ್ನುತ್ತಿದ್ದಾರೆ! ಯಾಕೆ ಗೊತ್ತಾ?

Bullet Bike Theft: ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಹಲವಾರು ತಿಂಗಳುಗಳಿಂದ ಬೈಕ್ ಕಳ್ಳತನ ಪ್ರಕರಣಗಳು  ಬೆಳಕಿಗೆ ಬರುತ್ತಿದ್ದು ರಾತ್ರಿ ವೇಳೆ ಪೊಲೀಸರ ರೌಂಡಿಂಗ್ ಹೆಚ್ಚು ಮಾಡಬೇಕೆಂದು ಸ್ಥಳೀಯರು ಮನವಿ‌ ಮಾಡಿದ್ದಾರೆ.‌ ಅಲ್ಲದೇ  ಖರೀದಿಸಿದ ಬುಲೆಟ್ ವಾಹನ ಎಲ್ಲಿ ಕಳುವು ಆಗಿ ಬಿಡುತ್ತೋ ಅಂತ ಇಲ್ಲಿನ ಜನ ತಮ್ಮ ಪ್ಲ್ಯಾನನ್ನೇ ಚೇಂಜ್ ಮಾಡಿಕೊಂಡಿದ್ದಾರೆ!

ಆನೇಕಲ್ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಯುವಕರು ಬುಲ್ಲೆಟ್ ಬೈಕುಗಳನ್ನು ಖರೀದಿ ಮಾಡಲು ಒಲ್ಲೆ ಅನ್ನುತ್ತಿದ್ದಾರೆ! ಯಾಕೆ ಗೊತ್ತಾ?
ಹ್ಯಾಂಡಲ್ ಮುರಿದು ಒಂದು ಬುಲ್ಲೆಟ್ ಬೈಕ್ ಕದ್ದರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 10, 2023 | 10:42 AM

Share

ಬಹುತೇಕ… ಯುವಕರು ಕಷ್ಟಪಟ್ಟು ತಮ್ಮಿಷ್ಟದ ಬುಲ್ಲೆಟ್ ಬೈಕ್ ಖರೀದಿ ಮಾಡಿರುತ್ತಾರೆ. ಆದರೆ ಕಳ್ಳರು ಮಾತ್ರ ಮನೆ ಮುಂದೆ ನಿಲ್ಲಿಸುವ ಬುಲ್ಲೆಟ್ ಬೈಕ್ ವಾಹನದ ಹ್ಯಾಂಡಲ್ ಅನ್ನುಸಲೀಸಾಗಿ ಮುರಿದು ಬೈಕ್ ಕದ್ದೋಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಥಾದ್ದೇ ಒಂದು ಘಟನೆ ಇಲ್ಲಿ ನಡೆದದ್ದು ಕಳ್ಳರ ಕಿತಾಪತಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳರ‌ ಹಾವಳಿಗೆ ದಿಕ್ಕು ಕಾಣದಾದ ಹೆಬ್ಬಗೋಡಿ ನಿವಾಸಿಗಳು ಹೈರಾಣಗೊಂಡಿದ್ದಾರೆ. ಹೌದು .. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ‌ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಬೈಕ್ ಕಳ್ಳರ ಉಪಟಳ ಮಿತಿ ಮೀರಿದ್ದು ಜನ ತಮ್ಮ ಬೈಕ್ ಹೇಗೆ ಕಾಪಾಡಿಕೊಳ್ಳಬೇಕು ಎನ್ನುವ ಚಿಂತೆಯಲ್ಲಿದ್ದಾರೆ. ಮನೆಯ ಕಾಂಪೌಂಡ್ ಒಳಗೆ ಹ್ಯಾಂಡಲ್ ಲಾಕ್ ಮಾಡಿ ನಿಲ್ಲಿಸಿರುವ ಬೈಕ್ ಬೆಳಗಾಗೋದ್ರೊಳಗೆ ಮಾಯ ಆಗ್ತಿವೆ.‌ ಹೀಗಾಗಿ ಖತರ್ನಾಕ್ ಬೈಕ್ ಕಳ್ಳರನ್ನು ಹಿಡಿದು ನಮಗೆ ನ್ಯಾಯ ಕೊಡಿಸಿ ಅಂತಾ ಬುಲ್ಲೆಟ್ ಮಾಲೀಕರು ಹೆಬ್ಬಗೋಡಿ ಪೊಲೀಸ್ ಠಾಣಾ (Hebbagodi, Anekal) ಮೆಟ್ಟಿಲೇರಿದ್ದಾರೆ. ಬೊಮ್ಮಸಂದ್ರದ ಮನೆ ಮುಂದೆ ಪಾರ್ಕಿಂಗ್ ಮಾಡಿದ್ದ ಬುಲ್ಲೆಟ್ ಅನ್ನು ಎಗರಿಸಿರುವ ಕಳ್ಳರು ಹ್ಯಾಂಡಲ್ ಲಾಕ್ ಮುರಿದು ಬೈಕ್ ಜತೆ ಎಸ್ಕೇಪ್ ಆಗಿರುವ ಚಿತ್ರಣ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ (Bullet Bike Theft).

ಹೆಬ್ಬಗೋಡಿಯ ವಿದ್ಯಾನಗರದಲ್ಲಿನ‌ ಮನೆಯೊಂದಕ್ಕೆ‌ ಮಧ್ಯೆ ರಾತ್ರಿ ನುಗ್ಗಿದ ಮೂವರು ಕಳ್ಳರ ದಂಡು, ಹ್ಯಾಂಡಲ್ ಲಾಕ್ ಮುರಿದು ಬುಲ್ಲೆಟ್ ಎಗರಿಸಿದ್ದಾರೆ. ಅದರ ಜತೆ ಎಫ್ ಜೆಡ್ ಬೈಕನ್ನೂ ತೆಗೆದುಕೊಂಡು ಹೋಗಿದ್ದಾರೆ. ಆದರೆ ಆ ಬೈಕ್ ಸ್ಟಾರ್ಟ್ ಆಗದ ಕಾರಣ ತುಸು ದೂರ ತಳ್ಳಿಕೊಂಡು ಹೋಗಿ ಅದನ್ನು ಅಲ್ಲಿಯೇ ಬಿಟ್ಟು ಮಾಯವಾಗಿದ್ದಾರೆ.

Also Read:

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರ ಹತ್ಯೆ, ಅನೈತಿಕ ಸಂಬಂಧದ ವಾಸನೆ, ಫೋನ್ ಬಂತು ಅಂತಾ ಮನೆಯಿಂದ ಹೊರಹೋಗಿದ್ದ!

ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಹಲವಾರು ತಿಂಗಳುಗಳಿಂದ ಬೈಕ್ ಕಳ್ಳತನ ಪ್ರಕರಣಗಳು ಅತಿ ಹೆಚ್ಚು ಬೆಳಕಿಗೆ ಬರುತ್ತಿದ್ದು ರಾತ್ರಿ ವೇಳೆ ಪೊಲೀಸರ ರೌಂಡಿಂಗ್ ಹೆಚ್ಚು ಮಾಡಬೇಕೆಂದು ಸ್ಥಳೀಯರು ಮನವಿ‌ ಮಾಡಿದ್ದಾರೆ.‌ ಅಲ್ಲದೇ ಬುಲ್ಲೆಟ್ ಬೈಕ್ ಖರೀದಿ ಮಾಡಬೇಕು ಅಂತ ಎಷ್ಟೋ ಆಸೆ‌ ಇಟ್ಟುಕೊಂಡವರೂ ಕೂಡ ಎಲ್ಲಿ ಖರೀದಿಸಿದ ಬುಲೆಟ್ ಕಳುವು ಆಗಿ ಬಿಡುತ್ತೋ ಅಂತ ತಮ್ಮ ಪ್ಲ್ಯಾನನ್ನೇ ಚೇಂಜ್ ಮಾಡಿಕೊಂಡಿದ್ದಾರೆ! ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಆನೇಕಲ್ ಪೊಲೀಸರು ಕಳ್ಳರ ಪತ್ತೆಗೆ ಪ್ಲ್ಯಾನ್ ಮಾಡಿದ್ದಾರೆ.

ವರದಿ: ಸೈಯ್ಯದ್ ನಿಜಾಮುದ್ದೀನ್, ಟಿವಿ9, ಆನೇಕಲ್

ಇನ್ನಷ್ಟು ಅಪಘಾತ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ