AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಬೆಟ್ಟದ ರಸ್ತೆಯಲ್ಲಿ ಪಡ್ಡೆ ಹುಡುಗರ ಬೈಕ್ ವೀಲಿಂಗ್ ಹುಚ್ಚಾಟ: ಓರ್ವ ಸವಾರ ಬಲಿ

Devanahalli News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊರ್ವ ಯುವಕನಿಗೆ ಗಂಭೀರ ಗಾಯಗಳಾಗಿವೆ.

ನಂದಿಬೆಟ್ಟದ ರಸ್ತೆಯಲ್ಲಿ ಪಡ್ಡೆ ಹುಡುಗರ ಬೈಕ್ ವೀಲಿಂಗ್ ಹುಚ್ಚಾಟ: ಓರ್ವ ಸವಾರ ಬಲಿ
ಬೈಕ್​ ವೀಲಿಂಗ್​ ಮಾಡುತ್ತಿರುವ ಪುಂಡರು
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 15, 2023 | 11:36 AM

Share

ಬೆಂಗಳೂರು ಗ್ರಾಮಾಂತರ, ಆ.15: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬೈಕ್​ ವೀಲಿಂಗ್(Bike Wheeling)​ ಪುಂಡರ ಹಾವಳಿ ಮೀತಿ ಮೀರಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿದೆ. ಹೌದು, ಜುಲೈ 29 ರಂದು ಹಾಸನ ನಗರದಲ್ಲಿ ವೀಲಿಂಗ್​ ಮಾಡುತ್ತಿದ್ದ ಪುಂಡರು, ಊಟ ಮುಗಿಸಿ ಬೈಕ್​ ಮೇಲೆ ಬರುತ್ತಿದ್ದ ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆದಿದ್ದರು. ಬಳಿಕ ಅವರನ್ನು ಬೆಂಗಳೂರಿನ ನಿಮಾನ್ಸ್​ ಆಸ್ಪತ್ರೆಗೆ ದಾಖಲಿಸಿದ್ದರು. ಇನ್ನೂ ಕೂಡ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅಂತಹುದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ದೇವನಹಳ್ಳಿ(Devanahalli) ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.

ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ.?

ಇನ್ನು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಿದಂತೆ ಕಾಣುತ್ತಿದ್ದು, ವೀಲಿಂಗ್ ಮಾಡಲು ಹೋಗಿಯೇ ಅಪಘಾತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೌದು, ಬೆಂಗಳೂರು ಮೂಲದ ಆದಿಲ್ ( 25 ) ಮೃತ ಸವಾರ. ಆತನ ಮೃತದೇಹವನ್ನು ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Viral Video: ಹಿಂದೊಂದು ಮುಂದೊಂದು ಹುಡುಗಿಯರನ್ನು ಕೂರಿಸಿ ಬೈಕ್​​​ ವೀಲಿಂಗ್ ಮಾಡಿದ ಯುವಕ, ಇಲ್ಲಿದೆ ನೋಡಿ ವಿಡಿಯೋ

ಹಾಸನದಲ್ಲಿ ಬೈಕ್​ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಇಬ್ಬರು ಯುವತಿಯರಿಗೆ ಗಂಭೀರ ಗಾಯವಾಗಿತ್ತು

ಹಾಸನ ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ಜುಲೈ 29 ರಂದು ವೀಲ್ಹಿಂಗ್ ಮಾಡುವವರ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಅಮಾಯಕ ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿತ್ತು. ಹೌದು, ಪುಂಡರು ವೀಲ್ಹಿಂಗ್ ಮಾಡುತ್ತಿದ್ದ ವೇಳೆ ಬೈಕ್​ನಲ್ಲಿ ಬರುತ್ತಿದ್ದ ಭೂಮಿಕಾ ಹಾಗೂ ಸಿಂಚನ ಎಂಬಿಬ್ಬರಿಗೆ ಡಿಕ್ಕಿಯಾಗಿ ಗಂಭೀರ ಗಾಯಗಳಾಗಿತ್ತು. ಬಳಿಕ ಅವರನ್ನು ಬೆಂಗಳೂರಿನ ನಿಮಾನ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇನ್ನು ಈ ವೇಳೆ ವೀಲ್ಹಿಂಗ್ ಪುಂಡರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದರು. ಹೌದು, ವೀಲ್ಹಿಂಗ್ ಮಾಡಿ ಅಪಘಾತಗೊಳಿಸಿದ ಶಾಕೀರ್ ಹಾಗೂ ಮತ್ತೊರ್ವ ಅಪ್ರಾಪ್ತನಿಗೆ ಸಾರ್ವಜನಿಕರು ಬಟ್ಟೆ ಬಚ್ಚಿ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕರು ಹಾಸನ ನಗರದಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಮಿತಿಮೀರಿದೆ. ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ, ಇಂತಹ ಮತ್ತಷ್ಟು ಘಟನೆಗಳು ಸಂಭವಿಸುತ್ತದೆ ಆದಷ್ಟು ಬೇಗ ಇದಕ್ಕೆ ಬ್ರೇಕ್​​ ಹಾಕುವಂತೆ ಪೊಲೀಸರಿಗೆ ಒತ್ತಾಯಿಸಿದ್ದರು. ಇದೀಗ ಅಂತಹುದೇ ಘಟನೆ ಸಂಭವಿಸಿದೆ.​

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?