AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ

ಸ್ವಾಮಿರಾಜನ್ ಕೊಲೆಯ ನಂತರ ಪತ್ನಿ ನೇತ್ರಾ ಜೈಲು ಸೇರಿದ್ದಾಳೆ. ಹೀಗಾಗಿ ಮನೆಯ ಬಾಗಿಲು, ಕಿಟಕಿ ಸರಳು ಮುರಿದು ಕಳ್ಳತನ ಮಾಡಲಾಗಿದ್ದು, ಕದ್ದ ವಸ್ತುಗಳ ನಿಗದಿತ ಮೌಲ್ಯದ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ
ನೇತ್ರಾ ಮತ್ತು ಕಳ್ಳತನವಾದ ಮನೆ
TV9 Web
| Edited By: |

Updated on:Nov 30, 2021 | 12:08 PM

Share

ಬೆಂಗಳೂರು: ಪತ್ನಿಯಿಂದಲೇ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳ್ಳತನವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹಾರೋಕ್ಯಾತನಹಳ್ಳಿಯ ಸ್ವಾಮಿರಾಜನ್ ಮನೆಯಲ್ಲಿ ಯಾರು ಇರದೆ ಇರುವುದನ್ನು ಕಂಡು ಕಳ್ಳತನ ಮಾಡಲಾಗಿದೆ. ಸ್ವಾಮಿರಾಜನ್ ಕೊಲೆಯ ನಂತರ ಪತ್ನಿ (Wife) ನೇತ್ರಾ ಜೈಲು ಸೇರಿದ್ದಾಳೆ. ಹೀಗಾಗಿ ಮನೆಯ ಬಾಗಿಲು, ಕಿಟಕಿ ಸರಳು ಮುರಿದು ಕಳ್ಳತನ (Theft) ಮಾಡಲಾಗಿದ್ದು, ಕದ್ದ ವಸ್ತುಗಳ ನಿಗದಿತ ಮೌಲ್ಯದ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್​ 7ರಂದು ಹಾರೋಕ್ಯಾತನಹಳ್ಳಿಯಲ್ಲಿ ನೇತ್ರಾ ( 37) ತನ್ನ ಪತಿಯನ್ನು ಕೊಲೆ ಮಾಡಿದ್ದಳು. 2ನೇ ಪತ್ನಿಯಾಗಿದ್ದ ನೇತ್ರಾ ಎಂಬುವವರು ಮಧ್ಯರಾತ್ರಿ ತುಮಕೂರು ರಸ್ತೆಯ ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ, ತನ್ನ ಗಂಡ ಉದ್ಯಮಿ ಸ್ವಾಮಿರಾಜನ್ (50) ಅವರನ್ನು ಕೊಲೆ ಮಾಡಿ, ಬಳಿಕ ಪೊಲೀಸರ ಬಳಿ ಬಂದು ತಪ್ಪೊಪ್ಪಿಕೊಂಡಿದ್ದರು.

ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಸ್ವಾಮಿರಾಜನ್ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಸೆಕ್ಸ್ ವಿಚಾರವಾಗಿ ಅತಿರೇಕದ ವರ್ತನೆಯಿಂದ ಬೇಸತ್ತು ಕೊಲೆ ಮಾಡಿರೋದಾಗಿ ಪೊಲೀಸರ ಎದುರು ಪತ್ನಿ ನೇತ್ರಾ ಹೇಳಿಕೊಂಡಿದ್ದಳು. ಆದರೆ ಪೊಲೀಸರ ತನಿಖೆ ವೇಳೆ ಪ್ರಿಯಕರ ಮತ್ತು ಅಕ್ಕನ ಮಗನ ಜತೆ ಸೇರಿ ಗಂಡನನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪ್ರಿಯಕರ ಭರತ್​ ಹಾಗೂ ಅಕ್ಕನ ಮಗ ವಿಜಯ್​ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:

ಅನ್ನಪೂರ್ಣೇಶ್ವರಿ ನಗರದಲ್ಲಿ ಪತ್ನಿ ಕೊಲೆ ಪ್ರಕರಣ; ಸಿನಿಮೀಯ ಶೈಲಿಯಲ್ಲಿ ನಡೆದಿತ್ತು ಮರ್ಡರ್ ಸ್ಕೆಚ್

ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?

Published On - 11:45 am, Tue, 30 November 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?